Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...