Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...