Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

ಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

- Advertisement -
- Advertisement -

ಉಪಚುನಾವಣೆಯಲ್ಲಿ ಗೆದ್ದ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರು ಯಡ್ಯೂರಪ್ಪನವರ ಸಂಪುಟದಲ್ಲಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರೋದೇನೊ ನಿಜ. ಆದರೆ ಇನ್ನೂ ಒಂದು ತಿಂಗಳ ಕಾಲ ಅವರು ಮಂತ್ರಿಗಿರಿಯಿಂದ ದೂರವೇ ಉಳಿಯಬೇಕಾದ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಅವರ ಪಾಲಿಗೆ ವಿಲನ್ ಆಗಿ ಕಾಡುತ್ತಿರೋದು ಡಿಸೆಂಬರ್ ಮಾಹೆಯ ಮಧ್ಯಂತರದಲ್ಲಿ ಶುರುವಾಗಲಿರುವ ಧನುರ್ಮಾಸವಂತೆ!

ಹೌದು, ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಯಡ್ಯೂರಪ್ಪನವರು ದಿಲ್ಲಿಗೆ ದೌಡಾಯಿಸಿ, ಅಮಿತ್ ಶಾಗೆ ವರದಿ ಒಪ್ಪಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ಬರಬೇಕಿತ್ತು. ಈ ವಾರಾಂತ್ಯದೊಳಗೆ ನೂತನ ಸಚಿವರ ಪ್ರಮಾಣ ವಚನವೂ ಮುಗಿದು ಖಾತೆ ಹಂಚಿಕೆಯಾಗಬೇಕಿತ್ತು. ಆದರೆ ಅದ್ಯಾಕೋ, ಬಂಪರ್ ಬೆಳೆ ತೆಗೆದರು ಸಹಾ ದಿಲ್ಲಿ ನಾಯಕರಿಂದ ಯಡ್ಯೂರಪ್ಪನವರಿಗೆ ಇದುವರೆಗೆ ಬುಲಾವ್ ಬಂದಿಲ್ಲ. ನವದೆಹಲಿಯ ಫರ್ಮಾನು ಇಲ್ಲದೆ ಸ್ವಂತಕ್ಕೆ ಸಂಪುಟ ವಿಸ್ತರಿಸುವ ಸ್ವಾತಂತ್ರ್ಯವೂ ಯಡ್ಯೂರಪ್ಪನವರಿಗೆ ಇಲ್ಲ. ಹಾಗಾಗಿ, ನಿನ್ನೆ ಮಾಧ್ಯಮದವರು ನೀವು ಯಾವಾಗ ದಿಲ್ಲಿಗೆ ಹೋಗುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಇನ್ನು ಮೂರ್‍ನಾಲ್ಕು ದಿನವಂತೂ ನಾನು ದಿಲ್ಲಿ ಕಡೆಗೆ ಹೋಗಲ್ಲ, ಯಾವಾಗ ರಾಷ್ಟ್ರೀಯ ಅಧ್ಯಕ್ಷರು ಕರೀತಾರೋ (ಅಮಿತ್ ಶಾ) ಆಗ ಹೋಗ್ತೀನಿ. ಬಹುಶಃ ಮುಂದಿನ ವಾರವೇ ನನಗೆ ದಿಲ್ಲಿಗೆ ಹೋಗಲು ಸಾಧ್ಯವಾಗುತ್ತೇನೊ ಎಂಬ ಉತ್ತರ ಕೊಟ್ಟಿದ್ದಾರೆ.

ಇದೇ ೧೬ರಂದು (ಬರುವ ಸೋಮವಾರದಿಂದ) ಧನುರ್ಮಾಸ ಶುರುವಾಗಲಿದೆ. ಕವಡೆ ಶಾಸ್ತ್ರ, ಜ್ಯೋತಿಷ್ಯ, ಪಂಚಾಂಗಗಳನ್ನು ವಿಪರೀತ ನಂಬುವ ಯಡ್ಯೂರಪ್ಪನವರು ಧನುರ್ಮಾಸದಲ್ಲಿ ತಮ್ಮ ಸಂಪುಟ ಪನರ್ರಚನೆಗಾಗಲಿ, ವಿಸ್ತರಣೆಗಾಗಲಿ ಕೈಹಾಕಲಾರರು ಅನ್ನೋ ಮಾತನ್ನು ಅವರ ಒಡನಾಡಿಗಳು ಹೇಳುತ್ತಿದ್ದಾರೆ. ಧನುರ್ಮಾಸದಲ್ಲಿ ಯಾವ ಶುಭಕಾರ್ಯಗಳು ನಡೆಯಬಾರದು, ನಡೆದರೆ ವಿಘ್ನ ಎದುರಾಗಲಿದೆ ಎಂಬ ಮೂಢನಂಬಿಕೆಯೇ ಇದಕ್ಕೆ ಕಾರಣ. ಈಗ ಶುರುವಾಗುವ ಇದು ಜನವರಿ ಮೂರನೇ ವಾರದಲ್ಲಿ ಮಕರ ಸಂಕ್ರಮಣದೊಂದಿಗೆ ಮುಕ್ತಾಯವಾಗಲಿದೆ. ಅಲ್ಲೀವರೆಗೂ ಯಡ್ಯೂರಪ್ಪನವರ ಸಂಪುಟದ ಗಾತ್ರ ಹಿಗ್ಗದು ಎಂದೇ ಅಂದಾಜಿಸಲಾಗಿದೆ. ಹಾಗೇನಾದರು ಆದಲ್ಲಿ ಚುನಾವಣೆಯಲ್ಲಿ ಗೆದ್ದು ಅರ್ಹರಾದರು ಮಂತ್ರಿಭಾಗ್ಯ ಕಾಣಲು ಮಾಜಿ ಅನರ್ಹರು ಒಂದು ತಿಂಗಳು ವಿರಹವೇದನೆ ಅನುಭವಿಸದೆ ವಿಧಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...