Homeಕರ್ನಾಟಕಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

ಮಾಜಿ ‘ಅನರ್ಹ’ರ ಮಂತ್ರಿಗಿರಿ ಹುಮ್ಮಸ್ಸಿಗೆ ‘ಧನುರ್ಮಾಸ’ದ ಅಡ್ಡಗಾಲು

- Advertisement -
- Advertisement -

ಉಪಚುನಾವಣೆಯಲ್ಲಿ ಗೆದ್ದ ಮಾಜಿ ಅನರ್ಹ ಕಂ ಹಾಲಿ ಅರ್ಹ ಶಾಸಕರು ಯಡ್ಯೂರಪ್ಪನವರ ಸಂಪುಟದಲ್ಲಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲ ಮೇಲೆ ನಿಂತಿರೋದೇನೊ ನಿಜ. ಆದರೆ ಇನ್ನೂ ಒಂದು ತಿಂಗಳ ಕಾಲ ಅವರು ಮಂತ್ರಿಗಿರಿಯಿಂದ ದೂರವೇ ಉಳಿಯಬೇಕಾದ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಅವರ ಪಾಲಿಗೆ ವಿಲನ್ ಆಗಿ ಕಾಡುತ್ತಿರೋದು ಡಿಸೆಂಬರ್ ಮಾಹೆಯ ಮಧ್ಯಂತರದಲ್ಲಿ ಶುರುವಾಗಲಿರುವ ಧನುರ್ಮಾಸವಂತೆ!

ಹೌದು, ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಯಡ್ಯೂರಪ್ಪನವರು ದಿಲ್ಲಿಗೆ ದೌಡಾಯಿಸಿ, ಅಮಿತ್ ಶಾಗೆ ವರದಿ ಒಪ್ಪಿಸಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದು ಬರಬೇಕಿತ್ತು. ಈ ವಾರಾಂತ್ಯದೊಳಗೆ ನೂತನ ಸಚಿವರ ಪ್ರಮಾಣ ವಚನವೂ ಮುಗಿದು ಖಾತೆ ಹಂಚಿಕೆಯಾಗಬೇಕಿತ್ತು. ಆದರೆ ಅದ್ಯಾಕೋ, ಬಂಪರ್ ಬೆಳೆ ತೆಗೆದರು ಸಹಾ ದಿಲ್ಲಿ ನಾಯಕರಿಂದ ಯಡ್ಯೂರಪ್ಪನವರಿಗೆ ಇದುವರೆಗೆ ಬುಲಾವ್ ಬಂದಿಲ್ಲ. ನವದೆಹಲಿಯ ಫರ್ಮಾನು ಇಲ್ಲದೆ ಸ್ವಂತಕ್ಕೆ ಸಂಪುಟ ವಿಸ್ತರಿಸುವ ಸ್ವಾತಂತ್ರ್ಯವೂ ಯಡ್ಯೂರಪ್ಪನವರಿಗೆ ಇಲ್ಲ. ಹಾಗಾಗಿ, ನಿನ್ನೆ ಮಾಧ್ಯಮದವರು ನೀವು ಯಾವಾಗ ದಿಲ್ಲಿಗೆ ಹೋಗುತ್ತೀರಿ? ಎಂದು ಕೇಳಿದ ಪ್ರಶ್ನೆಗೆ ಇನ್ನು ಮೂರ್‍ನಾಲ್ಕು ದಿನವಂತೂ ನಾನು ದಿಲ್ಲಿ ಕಡೆಗೆ ಹೋಗಲ್ಲ, ಯಾವಾಗ ರಾಷ್ಟ್ರೀಯ ಅಧ್ಯಕ್ಷರು ಕರೀತಾರೋ (ಅಮಿತ್ ಶಾ) ಆಗ ಹೋಗ್ತೀನಿ. ಬಹುಶಃ ಮುಂದಿನ ವಾರವೇ ನನಗೆ ದಿಲ್ಲಿಗೆ ಹೋಗಲು ಸಾಧ್ಯವಾಗುತ್ತೇನೊ ಎಂಬ ಉತ್ತರ ಕೊಟ್ಟಿದ್ದಾರೆ.

ಇದೇ ೧೬ರಂದು (ಬರುವ ಸೋಮವಾರದಿಂದ) ಧನುರ್ಮಾಸ ಶುರುವಾಗಲಿದೆ. ಕವಡೆ ಶಾಸ್ತ್ರ, ಜ್ಯೋತಿಷ್ಯ, ಪಂಚಾಂಗಗಳನ್ನು ವಿಪರೀತ ನಂಬುವ ಯಡ್ಯೂರಪ್ಪನವರು ಧನುರ್ಮಾಸದಲ್ಲಿ ತಮ್ಮ ಸಂಪುಟ ಪನರ್ರಚನೆಗಾಗಲಿ, ವಿಸ್ತರಣೆಗಾಗಲಿ ಕೈಹಾಕಲಾರರು ಅನ್ನೋ ಮಾತನ್ನು ಅವರ ಒಡನಾಡಿಗಳು ಹೇಳುತ್ತಿದ್ದಾರೆ. ಧನುರ್ಮಾಸದಲ್ಲಿ ಯಾವ ಶುಭಕಾರ್ಯಗಳು ನಡೆಯಬಾರದು, ನಡೆದರೆ ವಿಘ್ನ ಎದುರಾಗಲಿದೆ ಎಂಬ ಮೂಢನಂಬಿಕೆಯೇ ಇದಕ್ಕೆ ಕಾರಣ. ಈಗ ಶುರುವಾಗುವ ಇದು ಜನವರಿ ಮೂರನೇ ವಾರದಲ್ಲಿ ಮಕರ ಸಂಕ್ರಮಣದೊಂದಿಗೆ ಮುಕ್ತಾಯವಾಗಲಿದೆ. ಅಲ್ಲೀವರೆಗೂ ಯಡ್ಯೂರಪ್ಪನವರ ಸಂಪುಟದ ಗಾತ್ರ ಹಿಗ್ಗದು ಎಂದೇ ಅಂದಾಜಿಸಲಾಗಿದೆ. ಹಾಗೇನಾದರು ಆದಲ್ಲಿ ಚುನಾವಣೆಯಲ್ಲಿ ಗೆದ್ದು ಅರ್ಹರಾದರು ಮಂತ್ರಿಭಾಗ್ಯ ಕಾಣಲು ಮಾಜಿ ಅನರ್ಹರು ಒಂದು ತಿಂಗಳು ವಿರಹವೇದನೆ ಅನುಭವಿಸದೆ ವಿಧಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...