Homeಅಂಕಣಗಳುಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

ಮಾದೇಗೌಡರ ಮಾನ ಮೂರು ಕಾಸಿಗೆ ಹೋಯ್ತಂತಲ್ಲಾ

- Advertisement -
 ಯಾಹೂ |
ನೇರ ನಡೆ ನುಡಿಗೆ ಹೆಸರಾಗಿದ್ದ ಜಿ. ಮಾದೇಗೌಡರು, ಜೆಡಿಎಸ್ ಕಡೆಯಿಂದ ಹಣ ಬರುತ್ತದೆಂದು ಮಂಡ್ಯದ ಗಾಂಧಿಭವನದ ಎದುರು ಕುಳಿತು ಕಾದು ಸಾಕಾಗಿ, ಕಡೆಗೆ ಪುಟ್ಟರಾಜನಿಗೆ ಫೋನು ಮಾಡಿ ‘ಎಲ್ಲೊದುಡ್ಡು’ ಎಂದರಂತಲ್ಲಾ, ಪುಟ್ಟರಾಜನಿಗೆ ಮಾದೇಗೌಡರಿಂದ ಸಾಲ ಪಡೆದು ಬಡ್ಡಿಯನ್ನು ಕೊಡದೆ ಕುಂತವನ ದನಿಯಲ್ಲಿ, “ಅಪ್ಪಾಜಿಆರೇಂಜ್ ಮಾಡ್ತಿನಿ” ಎಂದುಗೋಗರೆದಂತರಲ್ಲಾ.ಮಾದೇಗೌಡರು, ಮಂಡ್ಯದ ಸೊಗಡಿಗೆ ಹೆಸರಾದವರು, ಗಾಂಧಿಮಾರ್ಗಿ ಬೇರೆ, ಅದಕ್ಕಾಗಿ ಗಾಂಧಿ ಭವನ ನಿರ್ಮಿಸಿ ಇಳಿ ಹೊತ್ತಿನಲ್ಲಿ ಅದರ ಮುಂದೆ ಕುಳಿತು ಈ ನಾಡಿನ ಬಗ್ಗೆ ಚಿಂತಿಸದವರು. ಆದರೆ ಸ್ವಂತದ ಬಗ್ಗೆ ತುಂಬಾ ಯೋಚಿಸಿ ದವರು. ಈ ಹಿಂದೆ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ದೂರಿ ಕಾಂಗ್ರೆಸ್ ತೊರೆದು ಬಿ.ಜೆ.ಪಿ ಅವರಿಗೆ ಒಗ್ಗಲಿಲ್ಲ. ಮತ್ತೆ ಕಾಂಗ್ರೆಸ್‍ಗೆ ಮರಳಿ ಮಗನ ಕೈಲಿ ಹಣ ಕಳಿದು. ಇಲ್ಲ ಯಾರು ಕೊಡ್ತಾರೊ ಅವುರೆಸರೇಳು ನಾವೇ ವಸೂಲು ಮಾಡ್ತಿವಿ” ಎಂದಿರೋದು .ವಯಸ್ಸಾದಂತೆ ತಲೆಯೊಳಗಿನ ಸಿದ್ಧಾಂತಗಳು ಸಾಯುತ್ತ, ಕುಟುಂಬದ ವ್ಯಾಮೋಹ ಅಮರಿಕೊಳ್ಳುವುದು, ಈ ಮಾದೇಗೌಡನನ್ನ ಬಿಡಲಿಲ್ಲವಲ್ಲಾ. ಅದೇನಾದರಾಗಲಿ. ಕಡೇಗಳಿಗೆಯಲ್ಲಿ ಚಿಲ್ಲರೆ ಕಾಸಿಗೆ ಪುಟ್ಟರಾಜನನ್ನ ಕೇಳಿ ಮಾದೇಗೌಡನ ಮಾನ ಮೂರು ಕಾಸಿಗೆ ಹರಾಜಾಯ್ತಲ್ಲಾ ಥೂತ್ತೆರಿ.
ಮಂಡ್ಯ ಚುನಾವಣೆಯ ರಂಗು ತಾರಕಕ್ಕೇರಿರುವುದರ ದ್ಯೋತಕವಾಗಿ, ಎನ್.ಡಿ.ಟಿ.ವಿ.ಯ ಮಾಯಾ ಶರ್ಮಾ ಸುಮಲತಾರ ಹಿಂದೆತಿರುಗುತ್ತಿರುವುದು ಗೊತ್ತಾಗಿ, ಮಾಯಾಗೆ ಫೋನ್ ಮಾಡಿದರೆ ಅವರು ಫೋನ್ ತೆಗೆಯಲಿಲ್ಲ. ಎನ್.ಡಿ ಟಿವಿ ಮಾಯಾ ಇವರಿಗಿಂತಲೂ ನಮ್ಮ ವಾಟಿಸ್ಸೆ ಸರಿಯಾಗಿ ಸುದ್ದಿ ನೀಡಲು ಸೂಕ್ತ ವ್ಯಕ್ತಿಯೆಂದು ಫೋನ್ ಮಾಡಲಾಗಿರಿಂಗಾಯ್ತು, ರಿಂಗ್‍ಟೂನ್ “ಬಲೆ ಚಾನ್ಸಿದೆ, ಲಕ್ಕಿ ಚಾನ್ಸಿದೆ, ಬಲೆ ಚಾನ್ಸಿದು’ ‘ಗುಡ್‍ಯುವುನಿಂಗ್ ಸಾರ್’
“ಎಲ್ಲಿದ್ದಿ ವಾಟಿಸ್ಸೆ”
“ಬಿಂಡಿಗನವಿಲೆ ಹೆಸರು ಕೇಳಿದ್ದಿರ ಸಾರ್.”
“ಗೊತ್ತು ಗರುಡಾಚಾರ್ರೂರು”
“ಅಷ್ಟೆ ಅಲ್ಲ ಸಾರ್. ಅಣು ವಿಜ್ಞಾನಿ, ರಾಜಾರಾಮಣ್ಣನ ಊರು. ಸಿನಿಮಾ ಡೈರೆಕ್ಟರು, ಬಿ.ಎಸ್.ರಂಗನ್‍ಊರಿದು”
“ಹೌದಾ”
“ಇಂತ ಪ್ರತಿಭಾವಂತ್ರೆ ಒಂದು ಡಜನ್ ಇರೊ ಊರಿದು”
“ಅಷ್ಟೊಂದು ಪ್ರತಿಭಾವಂತ್ರಿದ್ದರ”
“ನಾವಲ್ಲ ಸಾ ಅವುರ್ಯಲ್ಲ ಅಯ್ಯಂಗಾರ್ರು”
“ಸರಿ ಬುಡು”
“ಈ ಊರಿಗೆ ನಿಖಿಲ್ ಬತ್ತನೆಅಂತ ಭಾರಿಜನ ಸೇರ್ಯವುರೆ”
“ಅಷ್ಟೊಂದು ಜನ ಬಂದವುರಾ”
“ಪರೆಡ್‍ಗೆ ತವುಜೆಂಡಿಂದ ತ್ರೀ ಅಂಡ್ರೆಡ್‍ವರಿಗೂ ಬಟಾವಡೆ ಆಗ್ಯದೆ ಸಾ”
“ಇನ್ನ ಓಟಿಗೆಷ್ಟು ಕೊಡ್ತಾರಪ್ಪ”
“ಅದ ಹೇಳಕ್ಕೆ ಬರದಿಲ್ಲ ಸಾರ್. ಪ್ರತಿಎಮ್ಮೆಲ್ಲೆಗೂ 25 ಕೋಟಿ ಟಾರ್ಗೆಟ್ ಕೊಟ್ಟವುನಂತೆ ಕುಮಾರಣ್ಣ”
“ಅಂದ್ರೆ ಅವುರು ಕೈಯಿಂದ ಖರ್ಚು ಮಾಡಬೇಕಾ”
“ಪುಟ್ಟರಾಜ ತಮ್ಮಣ್ಣ ನಾವೇ ಹಾಯ್ಕಂಡು ಖರ್ಚು ಮಾಡ್ತಿವಿ ಅಂದಿದ್ದರಂತೆ”
“ಅನ್ನಲೇಬೇಕು ಬುಡು. ಇದೇ ತಮ್ಮಣ್ಣನ ಆಸ್ತಿ ವಿಷಯದಲ್ಲಿ ಮಾದೇಗೌಡ್ರು ಹಿಂದೆನೆ ಹೋರಾಡಿದ್ರು”
“ಮಾದೇಗೌಡ ಬುಡಿ ಸಾ. ಅವುನು ಮಾತಾಡಿದ್ರೆ ಅಂಬರೀಶು “ಲೇ ಮುದುಕ ಸುಮ್ಮನಿರು ಇಲ್ಲ ಅಂದ್ರೆ ನಿನ್ನ  ಕತ್ತಿಸಗತಿನಿ ಅಂತಿದ್ನಂತೆ”
“ತಮಾಸಿಗೆ ಅಂಗಂತಿದ್ರು”
“ತಮಾಸಿನೆ ಆದ್ರು ಈ ಮುದುಕ ಹಾಳಾದನಲ್ಲ ಸಾ”
“ಏನು ಹಾಳಾಗಿಲ್ಲ. ಚುನಾವಣೆ ಕರ್ಚಿಗೆ ದುಡ್ಡು ಕೇಳ್ಯವುರೆ ಅಷ್ಟೆ”
“ಮಾದೇಗೌಡ ಪುಟ್ಟರಾಜನ್ನ ಕೇಳಿದಕ್ಕಿಂತ, ಕುಮಾರಣ್ಣನ್ನ ಕೇಳಬೇಕಾಗಿತ್ತು ಸಾ”
“ಕುಮಾರಣ್ಣ ಯಮ್ಮೆಲ್ಲೆಗಳಿಗೆ ವಯಿಸಿಬುಟ್ಟವುನೆ”
“ಮಗನ್ನ ಗೆಲ್ಲಿಸಿಕೊಂಡು ಬರೊ ಜವಾಬ್ದಾರಿಯ ಎಮ್ಮೆಲ್ಲೆಗಳೇ ವಯಿಸಿಕೊಂಡವಂತಲ್ಲ ಸಾ. ಪಾಪ ಆ ಹುಡುಗನಿಗೆ ಬಾಸಣ ಬರವಿಲ್ಲ”
“ವ ಪರವಾಗಿಲ್ಲ ಮಾತಾಡ್ತನೆ”
“ಏನು ಮಾತಾಡ್ತನೆ ಸಾ. ನಾನು ಕುಮಾರಸ್ವಾಮಿ ಹೊಟ್ಟೆಲುಟ್ಟಕ್ಕೆ ಪುಣ್ಯ ಮಾಡಿದ್ದೆಅಂತದೆ.ನಮ್ಮಪ್ಪ ಮಂಡ್ಯಕೆಎಂಟು ಸಾವುರ ಕೋಟಿ ಕೊಟ್ಟವುನೆ ಅಂತದೆ. ನಮ್ಮ ಪಾರ್ಟಿ ಕಾರ್ಯಕರ್ತರಿಗೆ ಯಾರಾದ್ರು ಮೈ ಮುಟ್ಟಿದ್ರೆ ಹುಶಾರು ಅಂದರೆ. ಎಲ್ಲಿತ್ತು ಈ ಕರ್ಮ”
“ಇನ್ನು ಮುಂದೈತೆ ನಿಮಗ್ಯಲ್ಲ”
“ಯಾಕೊ ಅಂಗೆ ಕಾಣ್ತದೆ ಸಾ. ಈ ದ್ಯಾವೇಗೌಡ ಮಕ್ಕಳು ಮರಿನ್ಯಲ್ಲ ರಾಜಕಾರಣಕ್ಕೆ ತರದೇ ಆಗಿದ್ರೆ, ಅವುಕೆ ಒಳ್ಳೆ ಮಾತು, ನಡವಳಿಕೆ, ವಿದ್ಯೆ, ಬುದ್ಧಿ, ಕಲಿಸಿ ಕಳಿಸಬೇಕಾಗಿತ್ತು ಸಾ”
“ದ್ಯಾವೇಗೌಡ್ರೆ ಅಂಗಿದ್ದ ಮೇಲೆ ಅವುಕೆಲ್ಲಿ ಕಲಿಸ್ಯಾರು”
“ಅದು ಸರಿನೆ ಬುಡಿ, ಗೌಡ್ರು ಪಾರ್ಟಿ ಸಿದ್ಧಾಂತಕ್ಕೆ ಒಗ್ಗಿಕಳೊ ಬದ್ಲು ಪಾರ್ಟಿನೆತನಿಗೆ ಬೇಕಾದಂತೆ ಬಗ್ಗಿಸಿಗಂಡ್ರು”
“ಪರವಾಗಿಲ್ಲ ಗೌಡ್ರು ಬಗ್ಗೆ ತಿಳಿಕಂಡಿದ್ದಿ”
“ಯಾವುದಾದ್ರು ಯೂನಿವರ್ಸಿಟಿ ಪರಮಿಷನ್ ಕೊಟ್ರೆ ಡಾಕ್ಟರೇಟ್ ಮಾಡನ ಅಂತ ಇದ್ದಿನಿ ಸಾ”
“ಹಂಪೆ ಯೂನಿವರ್ಸಿಟಿಲಿ ನೊಂದಾಯಿಸಿ ಮಾಡು”
“ಹಂಪೆ ಅಂದೇಟಿಗೆ ಗೆಪ್ತಿಗೆ ಬತ್ತು ಸಾ. ಅಲ್ಲೊಬ್ಬಳು ಮಲ್ಲಿಕಾಗಂಟಿ ಅಂತ ಇದ್ಲು ಈಗ್ಲು ಇದ್ದಳಾ”
“ಇಲ್ಲ ಹೋದ್ಲು. ವಿಶಭಟ್ಟಗೊತ್ತ ನಿಂಗೆ”
“ಗೊತ್ತು ಸಾ. ಇಲ್ಲೆ ನಮ್ಮ ನಾಗ್ತಳ್ಳಿ ಚಂದ್ರನ ಬಗ್ಗೆ ಮಾತಾಡಕ್ಕೆರ ಬಂದಿದ್ದ. ಹುಟ್ಟ ಕಳ್ಳಿದ್ದಂಗಿದ್ದ”
“ಅವುನ್ನ ಈ ನಿಮ್ಮಗಂಟೆ ಸಮಾರಂಭಕ್ಕೆ ಕರೆದಿದ್ಲು”
“ಕರಿಬಾರ್ದ”
“ಕಳ್ಳನಂಗಿದ್ದ ಅಂತಿ ಕರಿಬಾರ್ದ ಅಂತಿ ಯಲ್ಲಯಾ. ಆ ಹುಟ್ಟು ಸುಳ್ಳಪ್ಪ ಕ್ಯಟ್ಟಚೆಡ್ಡಿ”
“ಚೆಡ್ಡಿಲಿ ವಳ್ಳೆ ಚೆಡ್ಡಿನೂ ಇದ್ದವಾ”
“ಅವೆ ಆದ್ರೆ ಇವುನು ಮಾತ್ರ ವಿಶಪಾತಕ .ಇಂಥೊನ್ನ ಆ ಗಂಟಿ ಸಮಾರಂಬಕ್ಕೆ ಕರಿಸಿಗಂಡು ಸರಿಯಾಗಿ ಉಗಿಸಿಗಂಡ್ಳು”
“ನಾವು ಯಾರ ಪರನೂ ಮಾತಾಡಂಗಿಲ್ಲ ಸಾ. ಯಾರು ಯಾವಟೈಮಲ್ಲಿ ಬದ್ಲಾಯ್ತಾರೊ ಏನೊ”
“ಬದಲಾವಣೆ ಕಾಲದ ನಿಯಮ”
“ಅದು ಮನುಸುನ ಮನಸಿಗೂ ಅನ್ವಯಿಸ್ತದಾ”
“ಊ ಮತ್ತೆ ಕರ್ನಾಟಕದಲ್ಲಿ ಈಗ ಯಂತ ಬದಲಾವಣೆ ಆಗ್ಯದೆಗೊತ್ತ”
“ಗೊತ್ತು ಸಾ. ಈ ಡಿಕೆಶಿ, ಕುಮಾರಸ್ವಾಮಿ ಹೊಡದಾಡಿಕಂಡೆ ಸತ್ತೊಯ್ತರೆ ಅನಕಂಡಿದ್ದೆ. ಈಗ ನೋಡಿದ್ರೆ ದ್ಯಾವೇಗೌಡನ ಹಣೆಗೆ ಅಕ್ಷತೆ ಆಗ್ಯವುರೆ”
“ಅಕ್ಷತೆನೆ”
“ಊ ಸಾ. ಡಿಕೆಶಿ ಹರಸಣ ಅಕ್ಕಿ ಸೇರಿದ್ರೆ ಅಕ್ಷತೆ ಅಂದ. ಅದ ಯಾರಿಗಿಡಬೇಕು ದ್ಯಾವೇಗೌಡನಿಗೆ ತಾನೆ”
“ನಿಜಕಣಯ್ಯ”
“ಇನ್ನ ಅಹಿಂದ ಸಭೆಲಿ ಈ ಸಿದ್ದರಾಮಯ್ಯ ದ್ಯಾವೇಗೌಡರನ್ನ ಬೋದಿದ್ದ ನೋಡಿದ್ರೆ, ಇನ್ನ ಮುಗಿತು. ಈ ಜಲುಮದಲ್ಲಿ ಇವುರು ಹಿಂಗೇ ಸತ್ತೋಯ್ತರೆ ಅನ್ನಕಂಡಿದ್ದೆ. ತೀರ ಇತ್ತೀಚಿಗೆ, ಈ ಸಿದ್ದರಾಮಯ್ಯನಂತ ನೀಚ ಮುಕ್ಯಮಂತ್ರಿನ ನೋಡೇ ಇಲ್ಲ ಅಂದ ದ್ಯಾವೇಗೌಡ, ಈಗ ನೋಡಿದ್ರೆ ಜಾತ್ರೆಗೆ ರೆಡಿಯಾಗಿರೋ ಜೋಡೆತ್ತಿನಂಗೆ ಜ್ವತೆಲೆ ನಿಂತವುರೆ ಇದಕೇನೇಳ್ತಿರಿ”
“ಒಳ್ಳೆ ಬದಲಾವಣೆ”
“ಯಾಕೆ ಸಾರ್’
“ಮೋದಿ ಟೀಮಂಗೆ ಯಲ್ಲ ಒಂದಾಗಬೇಕಾಗಿದೆ”
“ಅದೇನೂ ನಿಜಸಾ. ಈ ಹಾಳು ಚೆಡ್ಡಿಗಳು ಈಗ ಏನೇಳ್ತ ಅವುರೆಗೊತ್ತೆ, ಮೋದಿ ಏನಾರ ಸೋತ್ರೆ ಆ ಪಾಕೀಸ್ತಾನದೋರು ನಮ್ಮ ಮ್ಯಾಲೆ ಬಿದ್ದು ಇಚಿಡಿ ಯಾದೇಸನೆಗೆದ್ದ ಕತ್ತರಂತೆ”
“ವಳ್ಳೆದಾಯ್ತಲ್ಲಯ್ಯ”
“ಇದೇನ್ ಸಾ ಹಿಂಗೇಳ್ತಿರಿ”
“ಪಾಕಿಸ್ತಾನ ದೂರು ಇಂಡಿಯಾಗೆದ್ದು ಕೂಡ್ಳೆ ಅದೂ ಇಂಡಿಯಾ ಆಯ್ತದಲ್ಲಯ್ಯ”
“ಅಂಗಾದ್ರೆ ಗೆದ್ಕಳ್ಳಿ ಬುಡಿ ಸಾ”
“ಥೂತ್ತೆರಿ”
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...