Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...