Homeರಾಜಕೀಯಮಾಯಕೊಂಡದ ಮಾಯಾ`ಬಜಾರಿ’ನಲ್ಲಿ....

ಮಾಯಕೊಂಡದ ಮಾಯಾ`ಬಜಾರಿ’ನಲ್ಲಿ….

- Advertisement -
- Advertisement -
  • ಟಿ.ಎನ್.ಷಣ್ಮುಖ |

ಇತ್ತ ದಾವಣಗೆರೆಯ ಸೆರಗಿಗೂ, ಅತ್ತ ಚಿತ್ರದುರ್ಗದ ಚುಂಗಿಗೂ ಆತುಕೊಂಡಂತಿರುವ ಮಾಯಕೊಂಡದ ಎಲೆಕ್ಷನ್ ಕಣದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಅದರಲ್ಲೂ ಬಿಜೆಪಿಗೆ ಮಾಯಕೊಂಡ ಬಿಸಿ ತುಪ್ಪದಂತಾಗಿದೆ. ಯಾಕಂದ್ರೆ ಬಿಜೆಪಿ ಅಲ್ಲಿ ಇಬ್ಬಿಬ್ಬರು ಬಂಡಾಯಗಾರರನ್ನು ಎದುರಿಸುವಂತಾಗಿದೆ. ಕಳೆದ ಬಾರಿ ಯಡಿಯೂರಪ್ಪ ಕೆಜೆಪಿ ಕಟ್ಟಿ, ಮಾಯಕೊಂಡದಿಂದ ಪ್ರೊ.ಲಿಂಗಪ್ಪನ ಕೈಗೆ ತೆಂಗಿನಕಾಯಿ ಕೊಟ್ಟು ಈಡುಗಾಡಿ ಹೊಡೆಯಲು ಹೇಳಿದ್ದರು. ಹಾಗಾಗಿ ಬಿಜೆಪಿ ಬಸವರಾಜ ನಾಯ್ಕ ಎಂಬ ಅಪರಿಚಿತನನ್ನು ಕಣಕ್ಕಿಳಿಸಿತ್ತು. ಆದರೆ ಈ ಸಲ ಕೆಜೆಪಿ ಬಿಜೆಪಿಯೊಳಗೆ ಐಕ್ಯಗೊಂಡಿದೆ. ಸೋ, ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸವರಾಜ ನಾಯ್ಕನಿಗೆ ಟಿಕೇಟು ಕೊಡಬೇಕೊ ಅಥವಾ ಯಡಿಯೂರಪ್ಪನವರನ್ನು ನಂಬಿ ಈಡುಗಾಯಿ ಹೊಡೆದಿದ್ದ ಲಿಂಗಪ್ಪನಿಗೆ ಟಿಕೇಟು ಕೊಡಬೇಕೊ ಎಂಬ ಜಿಜ್ಞಾಸೆ ಆರಂಭದಿಂದಲೂ ಬಿಜೆಪಿಯನ್ನು ಹೈರಾಣು ಮಾಡಿತ್ತು. ಅದರ ನಡುವೆ ಎಚ್.ಆನಂದಪ್ಪ ಅನ್ನೋ ಮತ್ತೊಬ್ಬ ಗಿರಾಕಿ ಬಿಜೆಪಿ ಟಿಕೇಟಿಗೆ ತಾಲೀಮು ನಡೆಸಿದ್ದ.

ಲಿಂಗಪ್ಪ

ಕೊನೆಗೆ ಯಡಿಯೂರಪ್ಪನ ಪವರ್ರೇ ಗೆದ್ದು, ಕೆಜೆಪಿಯಿಂದ ಬಂದ ಲಿಂಗಪ್ಪನಿಗೇ ಟಿಕೇಟು ಸಿಗುವಂತಾಯ್ತು. ಇದರಿಂದ ಬಂಡೆದ್ದ ಬಸವರಾಜ ನಾಯ್ಕ ಮಹಿಮಾ ಪಟೇಲರ ಸಾರಥ್ಯದ ಜೆಡಿಯು ಹೊಕ್ಕು ಆ ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿಯತ್ತ ಬಾಣ ನೆಟ್ಟಿದ್ದಾನೆ. ಇತ್ತ ಮತ್ತೋರ್ವ ಟಿಕೇಟ್ ಆಕಾಂಕ್ಷಿ ಆನಂದಪ್ಪ ಕೂಡಾ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾನೆ. `ಬಿಜೆಪಿ ನಮಗೆ ನಂಬಿಕೆ ದ್ರೋಹ ಮಾಡಿದೆ. ನಮ್ಮನ್ನು ರಾಜಕೀಯವಾಗಿ ತುಳಿಯಲು ಹವಣಿಸಿದೆ. ಹಾಗಾಗಿ ನಾವು ಆ ಪಾರ್ಟಿಯನ್ನು ಮಾಯಕೊಂಡದಲ್ಲಿ ನಿರ್ನಾಮ ಮಾಡ್ತೀವಿ’ ಅನ್ನೋ ಕಾಮನ್ ಸ್ಲೋಗನ್ ಇಟ್ಟುಕೊಂಡು ಇವರಿಬ್ಬರೂ ಬಬ್ರುವಾಹನ ಸ್ಟೈಲಿನಲ್ಲಿ ಅಬ್ಬರಿಸುತ್ತಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.

ಅದರಲ್ಲೂ ಹಾಲಿ ಜೆಡಿಯು ಅಭ್ಯರ್ಥಿಯಾಗಿರುವ ಬಸವರಾಜ ನಾಯ್ಕನ ಜೊತೆ ಬಿಜೆಪಿ ವರ್ತಿಸಿದ ರೀತಿ ಇದೆಯಲ್ಲ ಅದು, ಈ ಕ್ಷೇತ್ರದ ಬಹುಸಂಖ್ಯಾತ ಮತದಾರರಾದ ಲಂಬಾಣಿ ನಾಯ್ಕ ಮತಗಳನ್ನು ರೊಚ್ಚಿಗೆಬ್ಬಿಸಿದೆ. ಲಿಂಗಾಯತ ಮದಗಜ ಕಾದಾಟದ ನಡುವೆ ಒಬ್ಬ ಶೂದ್ರನನ್ನು ಬಲಿಕೊಟ್ಟ ಈ ವೃತ್ತಾಂತಕ್ಕೆ ಐದು ವರ್ಷಗಳ ಇತಿಹಾಸವಿದೆ. ದಾವಣಗೆರೆಯ ಕೇಸರಿ ಮೇಳದಲ್ಲಿ ತಾಳಮೇಳ ತಪ್ಪಿ ಒಂದು ದಶಕವೇ ಕಳೆದುಹೋಗಿದೆ. ಮಾಜಿ ತರ್ಕಾರಿ ಮಂತ್ರಿ ಎಸ್.ಎ.ರವೀಂದ್ರನಾಥನ ಕ್ಷೀಣಬಣ ಒಂದು ಕಡೆಗಾದರೆ, ಯಡ್ಯೂರಪ್ಪನವರ ಬಣ ಮತ್ತೊಂದು ಕಡೆ. ಸಂಸದ ಸಿದ್ದೇಶ್ವರ ಆದಿಯಾಗಿ ಬಹುತೇಕ ಹಾಲಿ, ಮಾಜಿ ಎಂಎಲ್‍ಎಗಳು ಯಡ್ಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಬಸವರಾಜ ನಾಯ್ಕ ರವೀಂದ್ರನಾಥನ ಕಟ್ಟಾಳುವಾಗಿದ್ದ. 2013ರಲ್ಲಿ ಯಡಿಯೂರಪ್ಪ ಬಿಜೆಪಿ ಕಟ್ಟಿದಾಗ ರವೀಂದ್ರನಾಥ ಮಾಯಕೊಂಡದ ಬಿಜೆಪಿ ಟಿಕೇಟು ಕೊಡಿಸಿ ಕಾದಾಟಕ್ಕೆ ತಳ್ಳಿದ್ದು ಇದೇ ಬಸವರಾಜ ನಾಯ್ಕನನ್ನು.

ಬಸವರಾಜ ನಾಯ್ಕ್

ಆದರೆ ಯಾವಾಗ ಯಡಿಯೂರಪ್ಪ ಬಿಜೆಪಿಗೆ ವಾಪಾಸಾದರೋ ಆಗಿನಿಂದ ಅವರ ವಿರೋಧಿಗಳನ್ನು ವ್ಯವಸ್ಥಿತವಾಗಿ ಮಟ್ಟ ಹಾಕುತ್ತಾ ಬಂದರು. ಅಂಥಾ ಈಶ್ವರಪ್ಪನೇ ಥಂಡಾ ಹೊಡೆದು ರಾಯಣ್ಣ ಬ್ರಿಗೇಡ್ ನೆಪದಲ್ಲಿ ಟಿಕೇಟಿಗೆ ಹೆಣಗಾಡಬೇಕಾಯ್ತು. ಇತ್ತ ದಾವಣಗೆರೆಯಲ್ಲೂ ರವೀಂದ್ರನಾಥರ ಬಣದ ಮೇಲೆ ಅದೇ ದುಷ್ಮನಿಯ ಕಣ್ಣಿಟ್ಟ ಯಡಿಯೂರಪ್ಪ ಅವರ ಬೆಂಬಲಿಗರಿಗೆ ಬಿಸಿನೀರು ಬಿಡುತ್ತಾ ಬಂದರು. ರವೀಂದ್ರನಾಥಗೂ ಟಿಕೇಟ್ ತಪ್ಪಿಸಲು ಯಡ್ಯೂರಪ್ಪ ಯತ್ನಿಸಿದರಾದರೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ್‍ಗೆ ಪ್ರಬಲ ಸ್ಪರ್ಧೆಯೊಡ್ಡುವಂತವರು ಬಿಜೆಪಿಯಲ್ಲಿ ಯಾರೂ ಇರದ ಕಾರಣ ರವೀಂದ್ರನಾಥ್‍ಗೆ ಟಿಕೇಟ್ ತಪ್ಪಿಸಲು ಸಾಧ್ಯವಾಗಲಿಲ್ಲ. ಆದರೆ ರವೀಂದ್ರನಾಥ್ ಮೇಲಿನ ಸಿಟ್ಟಿಗೆ ಬಸವರಾಜ ನಾಯ್ಕನಿಗೆ ಟಿಕೇಟ್ ತಪ್ಪಿಸಿ, ಕೆಜೆಪಿಯ ಲಿಂಗಪ್ಪನಿಗೆ ಬಿ ಫಾರಂ ದಯಪಾಲಿಸಿದ್ದಾರೆ. ಯಡ್ಯೂರಪ್ಪ-ರವೀಂದ್ರನಾಥ್ ಎಂಬ ಇಬ್ಬರು ಬಿಜೆಪಿ ಲಿಂಗವಂತರ ಕಾದಾಟಕ್ಕೆ ನಮ್ಮ ಬಸರಾಜ ನಾಯ್ಕ ಬಲಿಪಶು ಆಗುವಂತೆ ಆಯ್ತಲ್ಲ ಎಂಬ ಸಿಟ್ಟು ಈಗ ಲಂಬಾಣಿ ಜನರದ್ದು.

ಶಾಮನೂರು ದಣಿಗಳನ್ನು ವಿಪರೀತ ವಿರೋಧ ಮಾಡಿಕೊಂಡಿದ್ದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ ಕಳೆದ ಎಲೆಕ್ಷನ್‍ನಲ್ಲೇ ಟಿಕೇಟು ಮಿಸ್ ಮಾಡಿಕೊಳ್ಳಬೇಕಿತ್ತು. ಆದರೆ ಹೈಕಮಾಂಡ್ ತಂತ್ರಗಾರಿಕೆ ಬಳಸಿ ಟಿಕೇಟ್ ಗಿಟ್ಟಿಸಿದ್ದಲ್ಲದೆ ಬಿಜೆಪಿ-ಕೆಜೆಪಿ ಕಾದಾಟದ ನಡುವೆ ಗೆದ್ದು ಶಾಸಕನೂ ಆಗಿದ್ದ. ಆಮೇಲೆ ಆತ ಕ್ಷೇತ್ರದತ್ತ ಮುಖ ಮಾಡಿ ನೋಡಿದವನಲ್ಲ. ತನಗೆ ಮಂತ್ರಿಗಿರಿ ಕೊಡಲಿಲ್ಲ ಅಂತ ವಿಧಾನಸೌಧದ ಮುಂದೆ ಧರಣಿ ಕೂತು ನಗೆಪಾಟಲಿಗೆ ಈಡಾದ ಶಿವಮೂರ್ತಿ ನಾಯ್ಕನ ಬೆಂಬಲಕ್ಕೆ ಅವನ ಕ್ಷೇತ್ರದಿಂದ ಒಬ್ಬನೇ ಒಬ್ಬ ಕಾರ್ಯಕರ್ತನೂ ಬರಲಿಲ್ಲ ಎಂದಮೇಲೆ ಅವನ ಜನಪ್ರಿಯತೆ ಇನ್ನೆಂತದ್ದಿರಬೇಡ. ಅದೇ ಕಾರಣಕ್ಕೆ ಈ ಸಲ ಶಿವಮೂರ್ತಿ ನಾಯ್ಕನಿಗೆ ಖೊಕ್ ಕೊಟ್ಟು ಆನಗೋಡು ಜಿಲ್ಲಾ ಪಂಚಾಯ್ತಿ ಮೆಂಬರು ಬಸವರಾಜನಿಗೆ ಟಿಕೇಟ್ ನೀಡಲಾಗಿದೆ. ಈ ಬಸವರಾಜ, ಹಾಲಿ ಸಮಾಜ ಕಲ್ಯಾಣ ಮಂತ್ರಿ ಎಚ್.ಆಂಜನೇಯರ ಖಾಸಾ ಅಳಿಯ. ಅದಕ್ಕಿಂತಲೂ ಮುಖ್ಯವಾಗಿ ಕ್ಷೇತ್ರದಲ್ಲಿ ಜನರ ಒಡನಾಟ ಉಳಿಸಿಕೊಂಡಿರುವಾತ. ಬಸವರಾಜ್ ಅಭ್ಯರ್ಥಿಯಾಗಿರೋದ್ರಿಂದ ಬಂಡಾಯದಿಂದ ಬೆಂಡಾಗಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ಬಸವರಾಜ್

ಮಾಯಕೊಂಡದಲ್ಲಿ 52 ಸಾವಿರದಷ್ಟಿರುವ ಲಿಂಗಾಯತ ಮತಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇವೆಯಾದರೂ, ಹೆಚ್ಚೂಕಮ್ಮಿ ಸಮಪ್ರಮಾಣದಲ್ಲಿರುವ ಇತರೆ ಜಾತಿಗಳ ಮತಗಳೂ ನಿರ್ಣಾಯಕ. ಮಾದಿಗ, ಲಂಬಾಣಿ ಮತ್ತು ನಾಯಕ ಜಾತಿಯ ತಲಾ 40 ಸಾವಿರ ಮತಗಳು ತಮ್ಮ ಪೊಲಿಟಿಕಲ್ ಅಸ್ಮಿತೆಯ ಮಹತ್ವವನ್ನು ಸಾರಿ ಹೇಳುತ್ತವೆ. ಕೈ ಪಾರ್ಟಿಯ ಬಸವರಾಜ ಮತ್ತು ಬಿಜೆಪಿಯ ಲಿಂಗಪ್ಪ ಇಬ್ಬರೂ ಮಾದಿಗ ಸಮುದಾಯದವರು. ಆದರೆ ಈ ಮತಗಳ ಮೇಲೆ ಮಂತ್ರಿ ಆಂಜನೇಯರ ಬಿಗಿ ಪ್ರಭಾವ ಇರೋದ್ರಿಂದ ಅವು ಕಾಂಗ್ರೆಸ್‍ಗೆ ಹರಿದು ಬರೋದ್ರಲ್ಲಿ ಸಂಶಯವಿಲ್ಲ. ಅದೂಅಲ್ಲದೇ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ದಲಿತ ವಿರೋಧಿ ನಡವಳಿಕೆ ಹೆಚ್ಚಾಗುತ್ತಿರೋದ್ರಿಂದ ದಲಿತರ ಮತಗಳು ಬಿಜೆಪಿಗೆ ಹೋಗೋದೆ ಡೌಟು. ಇನ್ನು ಬಸವರಾಜ ನಾಯ್ಕನಿಗೆ ಟಿಕೇಟು ತಪ್ಪಿಸಿದ ಬಿಜೆಪಿಯ ಆಂತರಿಕ ಗುದಮುರಗಿ ವಿರುದ್ಧ ಸಿಡಿದೆದ್ದಿರುವ ಲಂಬಾಣಿ ಮತಗಳು ಜೆಡಿಯು ಬಸವರಾಜ ನಾಯ್ಕ, ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹಂಚಿಹೋಗುವುದರ ನಡುವೆ `ಅಹಿಂದ’ ಹಾದಿಗುಂಟ ಕಾಂಗ್ರೆಸ್ಸನ್ನೂ ಎಡತಾಕಲಿವೆ. ಪಾರಂಪರಿಕ ಬಿಜೆಪಿ ಮತಗಳೂ ಆನಂದಪ್ಪನ ಬಂಡಾಯ ಸ್ಪರ್ಧೆಯಿಂದ ಮುಕ್ಕಾಗಲಿವೆ. ನಾಯಕ ಜನಾಂಗದ ಮತಗಳಂತೂ ಕಾಂಗ್ರೆಸ್ ಹಸ್ತದಲ್ಲಿ ಭದ್ರವಾಗಿವೆ. ಮಾಯಕೊಂಡದ ಲಿಂಗಾಯತ ಮತಗಳ ಮೇಲೆ ಯಡಿಯೂರಪ್ಪನ ಖದರ್ರು ಇರೋದಕ್ಕಿಂತ ಶಾಮನೂರು ಧಣಿಗಳ ಛಾಪು ಇದೆ. ಹಾಗಾಗಿ ಏನಿಲ್ಲವೆಂದರೂ ಅವುಗಳಲ್ಲಿ ಕನಿಷ್ಠ ಅರ್ಧದಷ್ಟಾದರು ಕಾಂಗ್ರೆಸ್‍ಗೆ ಬರಲಿವೆ. ಜೊತೆಗೆ, ಸಾಧು ಲಿಂಗಾಯತರ ರವೀಂದ್ರ ನಾಥ ಪಕ್ಷದೊಳಗೆ ಯಡಿಯೂರಪ್ಪನ ಪ್ರಭಾವ ಕುಗ್ಗಿಸಲು ಆತನ ಶಿಷ್ಯನ ವಿರುದ್ಧ ಕರಾಮತ್ತು ಮಾಡುವ ಸಾಧ್ಯತೆಯೂ ಕಾಣುತ್ತಿದೆ. ಹಾಗೇನಾದರು ಆದಲ್ಲಿ ಕಾಂಗ್ರೆಸ್ ಸೇರುವ ಲಿಂಗಾಯತರ ಮತಗಳ ಪ್ರಮಾಣದಲ್ಲಿ ಮತ್ತಷ್ಟೂ ಏರಿಕೆಯಾಗಲಿದೆ. ಈ ಸಮೀಕರಣವನ್ನೆಲ್ಲ ತಾಳೆ ಹಾಕಿ ನೋಡಿದರೆ ಮಾಯಕೊಂಡದಲ್ಲಿ ಕಾಂಗ್ರೆಸ್ ಅಧಿಕಾರವೇ ಮುಂದುವರೆಯುವ ಲಕ್ಷಣಗಳೇ ದಟ್ಟವಾಗಿವೆ. ಫಲಿತಾಂಶದ ದಿನ ಸ್ಪಷ್ಟ ಉತ್ತರ ಸಿಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...