Homeರಾಜಕೀಯಮಾಯಕೊಂಡದ ಮಾಯಾ`ಬಜಾರಿ’ನಲ್ಲಿ....

ಮಾಯಕೊಂಡದ ಮಾಯಾ`ಬಜಾರಿ’ನಲ್ಲಿ….

- Advertisement -
- Advertisement -
  • ಟಿ.ಎನ್.ಷಣ್ಮುಖ |

ಇತ್ತ ದಾವಣಗೆರೆಯ ಸೆರಗಿಗೂ, ಅತ್ತ ಚಿತ್ರದುರ್ಗದ ಚುಂಗಿಗೂ ಆತುಕೊಂಡಂತಿರುವ ಮಾಯಕೊಂಡದ ಎಲೆಕ್ಷನ್ ಕಣದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಅದರಲ್ಲೂ ಬಿಜೆಪಿಗೆ ಮಾಯಕೊಂಡ ಬಿಸಿ ತುಪ್ಪದಂತಾಗಿದೆ. ಯಾಕಂದ್ರೆ ಬಿಜೆಪಿ ಅಲ್ಲಿ ಇಬ್ಬಿಬ್ಬರು ಬಂಡಾಯಗಾರರನ್ನು ಎದುರಿಸುವಂತಾಗಿದೆ. ಕಳೆದ ಬಾರಿ ಯಡಿಯೂರಪ್ಪ ಕೆಜೆಪಿ ಕಟ್ಟಿ, ಮಾಯಕೊಂಡದಿಂದ ಪ್ರೊ.ಲಿಂಗಪ್ಪನ ಕೈಗೆ ತೆಂಗಿನಕಾಯಿ ಕೊಟ್ಟು ಈಡುಗಾಡಿ ಹೊಡೆಯಲು ಹೇಳಿದ್ದರು. ಹಾಗಾಗಿ ಬಿಜೆಪಿ ಬಸವರಾಜ ನಾಯ್ಕ ಎಂಬ ಅಪರಿಚಿತನನ್ನು ಕಣಕ್ಕಿಳಿಸಿತ್ತು. ಆದರೆ ಈ ಸಲ ಕೆಜೆಪಿ ಬಿಜೆಪಿಯೊಳಗೆ ಐಕ್ಯಗೊಂಡಿದೆ. ಸೋ, ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಸವರಾಜ ನಾಯ್ಕನಿಗೆ ಟಿಕೇಟು ಕೊಡಬೇಕೊ ಅಥವಾ ಯಡಿಯೂರಪ್ಪನವರನ್ನು ನಂಬಿ ಈಡುಗಾಯಿ ಹೊಡೆದಿದ್ದ ಲಿಂಗಪ್ಪನಿಗೆ ಟಿಕೇಟು ಕೊಡಬೇಕೊ ಎಂಬ ಜಿಜ್ಞಾಸೆ ಆರಂಭದಿಂದಲೂ ಬಿಜೆಪಿಯನ್ನು ಹೈರಾಣು ಮಾಡಿತ್ತು. ಅದರ ನಡುವೆ ಎಚ್.ಆನಂದಪ್ಪ ಅನ್ನೋ ಮತ್ತೊಬ್ಬ ಗಿರಾಕಿ ಬಿಜೆಪಿ ಟಿಕೇಟಿಗೆ ತಾಲೀಮು ನಡೆಸಿದ್ದ.

ಲಿಂಗಪ್ಪ

ಕೊನೆಗೆ ಯಡಿಯೂರಪ್ಪನ ಪವರ್ರೇ ಗೆದ್ದು, ಕೆಜೆಪಿಯಿಂದ ಬಂದ ಲಿಂಗಪ್ಪನಿಗೇ ಟಿಕೇಟು ಸಿಗುವಂತಾಯ್ತು. ಇದರಿಂದ ಬಂಡೆದ್ದ ಬಸವರಾಜ ನಾಯ್ಕ ಮಹಿಮಾ ಪಟೇಲರ ಸಾರಥ್ಯದ ಜೆಡಿಯು ಹೊಕ್ಕು ಆ ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿಯತ್ತ ಬಾಣ ನೆಟ್ಟಿದ್ದಾನೆ. ಇತ್ತ ಮತ್ತೋರ್ವ ಟಿಕೇಟ್ ಆಕಾಂಕ್ಷಿ ಆನಂದಪ್ಪ ಕೂಡಾ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾನೆ. `ಬಿಜೆಪಿ ನಮಗೆ ನಂಬಿಕೆ ದ್ರೋಹ ಮಾಡಿದೆ. ನಮ್ಮನ್ನು ರಾಜಕೀಯವಾಗಿ ತುಳಿಯಲು ಹವಣಿಸಿದೆ. ಹಾಗಾಗಿ ನಾವು ಆ ಪಾರ್ಟಿಯನ್ನು ಮಾಯಕೊಂಡದಲ್ಲಿ ನಿರ್ನಾಮ ಮಾಡ್ತೀವಿ’ ಅನ್ನೋ ಕಾಮನ್ ಸ್ಲೋಗನ್ ಇಟ್ಟುಕೊಂಡು ಇವರಿಬ್ಬರೂ ಬಬ್ರುವಾಹನ ಸ್ಟೈಲಿನಲ್ಲಿ ಅಬ್ಬರಿಸುತ್ತಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.

ಅದರಲ್ಲೂ ಹಾಲಿ ಜೆಡಿಯು ಅಭ್ಯರ್ಥಿಯಾಗಿರುವ ಬಸವರಾಜ ನಾಯ್ಕನ ಜೊತೆ ಬಿಜೆಪಿ ವರ್ತಿಸಿದ ರೀತಿ ಇದೆಯಲ್ಲ ಅದು, ಈ ಕ್ಷೇತ್ರದ ಬಹುಸಂಖ್ಯಾತ ಮತದಾರರಾದ ಲಂಬಾಣಿ ನಾಯ್ಕ ಮತಗಳನ್ನು ರೊಚ್ಚಿಗೆಬ್ಬಿಸಿದೆ. ಲಿಂಗಾಯತ ಮದಗಜ ಕಾದಾಟದ ನಡುವೆ ಒಬ್ಬ ಶೂದ್ರನನ್ನು ಬಲಿಕೊಟ್ಟ ಈ ವೃತ್ತಾಂತಕ್ಕೆ ಐದು ವರ್ಷಗಳ ಇತಿಹಾಸವಿದೆ. ದಾವಣಗೆರೆಯ ಕೇಸರಿ ಮೇಳದಲ್ಲಿ ತಾಳಮೇಳ ತಪ್ಪಿ ಒಂದು ದಶಕವೇ ಕಳೆದುಹೋಗಿದೆ. ಮಾಜಿ ತರ್ಕಾರಿ ಮಂತ್ರಿ ಎಸ್.ಎ.ರವೀಂದ್ರನಾಥನ ಕ್ಷೀಣಬಣ ಒಂದು ಕಡೆಗಾದರೆ, ಯಡ್ಯೂರಪ್ಪನವರ ಬಣ ಮತ್ತೊಂದು ಕಡೆ. ಸಂಸದ ಸಿದ್ದೇಶ್ವರ ಆದಿಯಾಗಿ ಬಹುತೇಕ ಹಾಲಿ, ಮಾಜಿ ಎಂಎಲ್‍ಎಗಳು ಯಡ್ಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಬಸವರಾಜ ನಾಯ್ಕ ರವೀಂದ್ರನಾಥನ ಕಟ್ಟಾಳುವಾಗಿದ್ದ. 2013ರಲ್ಲಿ ಯಡಿಯೂರಪ್ಪ ಬಿಜೆಪಿ ಕಟ್ಟಿದಾಗ ರವೀಂದ್ರನಾಥ ಮಾಯಕೊಂಡದ ಬಿಜೆಪಿ ಟಿಕೇಟು ಕೊಡಿಸಿ ಕಾದಾಟಕ್ಕೆ ತಳ್ಳಿದ್ದು ಇದೇ ಬಸವರಾಜ ನಾಯ್ಕನನ್ನು.

ಬಸವರಾಜ ನಾಯ್ಕ್

ಆದರೆ ಯಾವಾಗ ಯಡಿಯೂರಪ್ಪ ಬಿಜೆಪಿಗೆ ವಾಪಾಸಾದರೋ ಆಗಿನಿಂದ ಅವರ ವಿರೋಧಿಗಳನ್ನು ವ್ಯವಸ್ಥಿತವಾಗಿ ಮಟ್ಟ ಹಾಕುತ್ತಾ ಬಂದರು. ಅಂಥಾ ಈಶ್ವರಪ್ಪನೇ ಥಂಡಾ ಹೊಡೆದು ರಾಯಣ್ಣ ಬ್ರಿಗೇಡ್ ನೆಪದಲ್ಲಿ ಟಿಕೇಟಿಗೆ ಹೆಣಗಾಡಬೇಕಾಯ್ತು. ಇತ್ತ ದಾವಣಗೆರೆಯಲ್ಲೂ ರವೀಂದ್ರನಾಥರ ಬಣದ ಮೇಲೆ ಅದೇ ದುಷ್ಮನಿಯ ಕಣ್ಣಿಟ್ಟ ಯಡಿಯೂರಪ್ಪ ಅವರ ಬೆಂಬಲಿಗರಿಗೆ ಬಿಸಿನೀರು ಬಿಡುತ್ತಾ ಬಂದರು. ರವೀಂದ್ರನಾಥಗೂ ಟಿಕೇಟ್ ತಪ್ಪಿಸಲು ಯಡ್ಯೂರಪ್ಪ ಯತ್ನಿಸಿದರಾದರೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ್‍ಗೆ ಪ್ರಬಲ ಸ್ಪರ್ಧೆಯೊಡ್ಡುವಂತವರು ಬಿಜೆಪಿಯಲ್ಲಿ ಯಾರೂ ಇರದ ಕಾರಣ ರವೀಂದ್ರನಾಥ್‍ಗೆ ಟಿಕೇಟ್ ತಪ್ಪಿಸಲು ಸಾಧ್ಯವಾಗಲಿಲ್ಲ. ಆದರೆ ರವೀಂದ್ರನಾಥ್ ಮೇಲಿನ ಸಿಟ್ಟಿಗೆ ಬಸವರಾಜ ನಾಯ್ಕನಿಗೆ ಟಿಕೇಟ್ ತಪ್ಪಿಸಿ, ಕೆಜೆಪಿಯ ಲಿಂಗಪ್ಪನಿಗೆ ಬಿ ಫಾರಂ ದಯಪಾಲಿಸಿದ್ದಾರೆ. ಯಡ್ಯೂರಪ್ಪ-ರವೀಂದ್ರನಾಥ್ ಎಂಬ ಇಬ್ಬರು ಬಿಜೆಪಿ ಲಿಂಗವಂತರ ಕಾದಾಟಕ್ಕೆ ನಮ್ಮ ಬಸರಾಜ ನಾಯ್ಕ ಬಲಿಪಶು ಆಗುವಂತೆ ಆಯ್ತಲ್ಲ ಎಂಬ ಸಿಟ್ಟು ಈಗ ಲಂಬಾಣಿ ಜನರದ್ದು.

ಶಾಮನೂರು ದಣಿಗಳನ್ನು ವಿಪರೀತ ವಿರೋಧ ಮಾಡಿಕೊಂಡಿದ್ದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ ಕಳೆದ ಎಲೆಕ್ಷನ್‍ನಲ್ಲೇ ಟಿಕೇಟು ಮಿಸ್ ಮಾಡಿಕೊಳ್ಳಬೇಕಿತ್ತು. ಆದರೆ ಹೈಕಮಾಂಡ್ ತಂತ್ರಗಾರಿಕೆ ಬಳಸಿ ಟಿಕೇಟ್ ಗಿಟ್ಟಿಸಿದ್ದಲ್ಲದೆ ಬಿಜೆಪಿ-ಕೆಜೆಪಿ ಕಾದಾಟದ ನಡುವೆ ಗೆದ್ದು ಶಾಸಕನೂ ಆಗಿದ್ದ. ಆಮೇಲೆ ಆತ ಕ್ಷೇತ್ರದತ್ತ ಮುಖ ಮಾಡಿ ನೋಡಿದವನಲ್ಲ. ತನಗೆ ಮಂತ್ರಿಗಿರಿ ಕೊಡಲಿಲ್ಲ ಅಂತ ವಿಧಾನಸೌಧದ ಮುಂದೆ ಧರಣಿ ಕೂತು ನಗೆಪಾಟಲಿಗೆ ಈಡಾದ ಶಿವಮೂರ್ತಿ ನಾಯ್ಕನ ಬೆಂಬಲಕ್ಕೆ ಅವನ ಕ್ಷೇತ್ರದಿಂದ ಒಬ್ಬನೇ ಒಬ್ಬ ಕಾರ್ಯಕರ್ತನೂ ಬರಲಿಲ್ಲ ಎಂದಮೇಲೆ ಅವನ ಜನಪ್ರಿಯತೆ ಇನ್ನೆಂತದ್ದಿರಬೇಡ. ಅದೇ ಕಾರಣಕ್ಕೆ ಈ ಸಲ ಶಿವಮೂರ್ತಿ ನಾಯ್ಕನಿಗೆ ಖೊಕ್ ಕೊಟ್ಟು ಆನಗೋಡು ಜಿಲ್ಲಾ ಪಂಚಾಯ್ತಿ ಮೆಂಬರು ಬಸವರಾಜನಿಗೆ ಟಿಕೇಟ್ ನೀಡಲಾಗಿದೆ. ಈ ಬಸವರಾಜ, ಹಾಲಿ ಸಮಾಜ ಕಲ್ಯಾಣ ಮಂತ್ರಿ ಎಚ್.ಆಂಜನೇಯರ ಖಾಸಾ ಅಳಿಯ. ಅದಕ್ಕಿಂತಲೂ ಮುಖ್ಯವಾಗಿ ಕ್ಷೇತ್ರದಲ್ಲಿ ಜನರ ಒಡನಾಟ ಉಳಿಸಿಕೊಂಡಿರುವಾತ. ಬಸವರಾಜ್ ಅಭ್ಯರ್ಥಿಯಾಗಿರೋದ್ರಿಂದ ಬಂಡಾಯದಿಂದ ಬೆಂಡಾಗಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ಬಸವರಾಜ್

ಮಾಯಕೊಂಡದಲ್ಲಿ 52 ಸಾವಿರದಷ್ಟಿರುವ ಲಿಂಗಾಯತ ಮತಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇವೆಯಾದರೂ, ಹೆಚ್ಚೂಕಮ್ಮಿ ಸಮಪ್ರಮಾಣದಲ್ಲಿರುವ ಇತರೆ ಜಾತಿಗಳ ಮತಗಳೂ ನಿರ್ಣಾಯಕ. ಮಾದಿಗ, ಲಂಬಾಣಿ ಮತ್ತು ನಾಯಕ ಜಾತಿಯ ತಲಾ 40 ಸಾವಿರ ಮತಗಳು ತಮ್ಮ ಪೊಲಿಟಿಕಲ್ ಅಸ್ಮಿತೆಯ ಮಹತ್ವವನ್ನು ಸಾರಿ ಹೇಳುತ್ತವೆ. ಕೈ ಪಾರ್ಟಿಯ ಬಸವರಾಜ ಮತ್ತು ಬಿಜೆಪಿಯ ಲಿಂಗಪ್ಪ ಇಬ್ಬರೂ ಮಾದಿಗ ಸಮುದಾಯದವರು. ಆದರೆ ಈ ಮತಗಳ ಮೇಲೆ ಮಂತ್ರಿ ಆಂಜನೇಯರ ಬಿಗಿ ಪ್ರಭಾವ ಇರೋದ್ರಿಂದ ಅವು ಕಾಂಗ್ರೆಸ್‍ಗೆ ಹರಿದು ಬರೋದ್ರಲ್ಲಿ ಸಂಶಯವಿಲ್ಲ. ಅದೂಅಲ್ಲದೇ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ದಲಿತ ವಿರೋಧಿ ನಡವಳಿಕೆ ಹೆಚ್ಚಾಗುತ್ತಿರೋದ್ರಿಂದ ದಲಿತರ ಮತಗಳು ಬಿಜೆಪಿಗೆ ಹೋಗೋದೆ ಡೌಟು. ಇನ್ನು ಬಸವರಾಜ ನಾಯ್ಕನಿಗೆ ಟಿಕೇಟು ತಪ್ಪಿಸಿದ ಬಿಜೆಪಿಯ ಆಂತರಿಕ ಗುದಮುರಗಿ ವಿರುದ್ಧ ಸಿಡಿದೆದ್ದಿರುವ ಲಂಬಾಣಿ ಮತಗಳು ಜೆಡಿಯು ಬಸವರಾಜ ನಾಯ್ಕ, ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹಂಚಿಹೋಗುವುದರ ನಡುವೆ `ಅಹಿಂದ’ ಹಾದಿಗುಂಟ ಕಾಂಗ್ರೆಸ್ಸನ್ನೂ ಎಡತಾಕಲಿವೆ. ಪಾರಂಪರಿಕ ಬಿಜೆಪಿ ಮತಗಳೂ ಆನಂದಪ್ಪನ ಬಂಡಾಯ ಸ್ಪರ್ಧೆಯಿಂದ ಮುಕ್ಕಾಗಲಿವೆ. ನಾಯಕ ಜನಾಂಗದ ಮತಗಳಂತೂ ಕಾಂಗ್ರೆಸ್ ಹಸ್ತದಲ್ಲಿ ಭದ್ರವಾಗಿವೆ. ಮಾಯಕೊಂಡದ ಲಿಂಗಾಯತ ಮತಗಳ ಮೇಲೆ ಯಡಿಯೂರಪ್ಪನ ಖದರ್ರು ಇರೋದಕ್ಕಿಂತ ಶಾಮನೂರು ಧಣಿಗಳ ಛಾಪು ಇದೆ. ಹಾಗಾಗಿ ಏನಿಲ್ಲವೆಂದರೂ ಅವುಗಳಲ್ಲಿ ಕನಿಷ್ಠ ಅರ್ಧದಷ್ಟಾದರು ಕಾಂಗ್ರೆಸ್‍ಗೆ ಬರಲಿವೆ. ಜೊತೆಗೆ, ಸಾಧು ಲಿಂಗಾಯತರ ರವೀಂದ್ರ ನಾಥ ಪಕ್ಷದೊಳಗೆ ಯಡಿಯೂರಪ್ಪನ ಪ್ರಭಾವ ಕುಗ್ಗಿಸಲು ಆತನ ಶಿಷ್ಯನ ವಿರುದ್ಧ ಕರಾಮತ್ತು ಮಾಡುವ ಸಾಧ್ಯತೆಯೂ ಕಾಣುತ್ತಿದೆ. ಹಾಗೇನಾದರು ಆದಲ್ಲಿ ಕಾಂಗ್ರೆಸ್ ಸೇರುವ ಲಿಂಗಾಯತರ ಮತಗಳ ಪ್ರಮಾಣದಲ್ಲಿ ಮತ್ತಷ್ಟೂ ಏರಿಕೆಯಾಗಲಿದೆ. ಈ ಸಮೀಕರಣವನ್ನೆಲ್ಲ ತಾಳೆ ಹಾಕಿ ನೋಡಿದರೆ ಮಾಯಕೊಂಡದಲ್ಲಿ ಕಾಂಗ್ರೆಸ್ ಅಧಿಕಾರವೇ ಮುಂದುವರೆಯುವ ಲಕ್ಷಣಗಳೇ ದಟ್ಟವಾಗಿವೆ. ಫಲಿತಾಂಶದ ದಿನ ಸ್ಪಷ್ಟ ಉತ್ತರ ಸಿಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...