Homeಸುಳ್ಳಪ್ಪೋ ಸುಳ್ಳುಚಲಾನಾ... ಜಲಾನಾ... ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

ಚಲಾನಾ… ಜಲಾನಾ… ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

- Advertisement -
- Advertisement -

ಮಿಥ್ಯ: ‘ಹಮ್ ಭಾರತ್ ಬಂದ್ ಕರನಾ ಜಾನತೆ ಹೈ, ತೊ ಹಮ್ ಭಾರತ್ ಜಲಾನಾ ಭೀ ಜಾನತೆ ಹೈ’
(ಭಾರತ್ ಬಂದ್ ಮಾಡುವುದು ಗೊತ್ತಿರುವ ನಮಗೆ ಭಾರತವನ್ನು ಸುಡುವುದೂ ಗೊತ್ತು)

ಭಾರತ ಸುಡುವ ಇಂತಹ ಪ್ರಚೋದನಾತ್ಮಕ ಹೇಳಿಕೆಯನ್ನು ಭೀಮ್ ಆರ್ಮಿ ಸಂಸ್ಥಾಪಕ, ದಲಿತ ನಾಯಕ ಚಂದ್ರಶೇಖರ್ ಅಜಾದ್ ರಾವಣ್ ಬಹಿರಂಗ ಸಭೆಯಲ್ಲಿ ಆಡಿರುವರೆಂದು ಮೂರು ದಿನಗಳ ಹಿಂದೆ ಝೀ ನ್ಯೂಸ್ (ಹಿಂದಿ) ಮತ್ತು ನ್ಯೂಸ್ 18 ಚಾನೆಲ್‌ಗಳು ಅಪಾದಿಸಿವೆ. ತಮ್ಮ ವೆಬ್‌ಸೈಟಿನಲ್ಲಿನ ಲೇಖನ ಮತ್ತು ಟ್ವಿಟರ್‌ನಲ್ಲಿ ಅವು, ‘ಮುಝಾಫರ್ ನಗರದಲ್ಲಿ ದಲಿತ ಸಭೆಯೊಂದರಲ್ಲಿ ಮಾತನಾಡುವಾಗ ಚಂದ್ರಶೇಖರ್ ಅವರು, ಜನರು ನನ್ನ ಸಿಗ್ನಲ್‌ಗೆ ಕಾಯುತ್ತಿದ್ದಾರೆ, ನಾವು ಭಾರತ್ ಬಂದ್ ಮಾಡಬಲ್ಲೆವಾದರೆ, ಭಾರತವನ್ನು ಸುಡಲೂಬಲ್ಲೆವು…,ನಮ್ಮ ಸಹನೆಗೂ ಒಂದು ಮಿತಿಯಿದೆ, ದೌರ್ಜನ್ಯಗಳಿಗೂ ಒಂದು ಮಿತಿ ಇದೆ ಎಂದು ಹೇಳಿಕೆ ನೀಡಿದರು’ ಎಂದಿವೆ.

ಸತ್ಯ: ಸತ್ಯ ಬೇರೇನೇ ಇದೆ. ಅದಕ್ಕೂ ಮೊದಲು ಝೀ ನ್ಯೂಸ್, ನ್ಯೂಸ್ 18ಗಳ ಈ ಸುದ್ದಿಗೆ ‘ಹಿಂದುತ್ವವಾದಿಗಳು’ ಸ್ಪಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ್ ವಿರುದ್ಧ ವಿಪರೀತ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಅತ್ಯಂತ ಪ್ರಚೋದನಾಕಾರಿ ಸಂದೇಶಗಳನ್ನು ಹಾಕಿದ್ದನ್ನು ನೋಡೋಣ.

ತನ್ನನ್ನು ರಾಷ್ಟ್ರೀಯವಾದಿ ಎಂದುಕೊಳ್ಳುವ ‘ಭಯ್ಯಾಜಿ’ (ಟ್ವಿಟರ್ ಹ್ಯಾಂಡಲ್ @shiraloksharma) ಎಂಬ ವ್ಯಕ್ತಿ ಟ್ವೀಟ್ ಮಾಡಿ, ‘ಹಾಗೆ ಭಾರತ ಸುಡುತ್ತೇನೆ ಎಂದು ಬೆದರಿಸುವವರನ್ನು ಅದೇ ಬೆಂಕಿಯಲ್ಲಿ ಹಾಕಿ ಬರ‍್ಯಾನಿ ಮಾಡಿ, ಬೀದಿನಾಯಿಗಳಿಗೆ ಹಾಕುತ್ತೇವೆ. ಪ್ರಯತ್ನ ಮಾಡಿ ನೋಡಿ, ಪರಿಣಾಮ ಏನಾಗುತ್ತೆ ನೋಡಿ’ ಎಂದು ಬೆದರಿಸುತ್ತಾನೆ. ಇದೇ ಬಗೆಯಲ್ಲಿ ಹಲವಾರು ‘ದೇಶಭಕ್ತರು’ ಚಂದ್ರಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

‘ಭಯ್ಯಾಜಿ’ ಎನ್ನುವಾತನ ಆಕ್ರೋಶಭರಿತ, ದಲಿತವಿರೋಧಿ ಟ್ವೀಟ್

ಆದರೆ, ಆ ಸಭೆಯ ವಿಡಿಯೋವನ್ನು ಪಡೆದು ಪರೀಕ್ಷಿಸಿದಾಗ, ಚಂದ್ರಶೇಖರ್ ಹೇಳಿದ್ದು: ‘ಭಾರತ್ ಚಲಾನಾ’ (ಭಾರತ ನಡೆಸುವುದು, ಭಾರತ ಆಳುವುದು, ರನ್ನಿಂಗ್ ಇಂಡಿಯಾ) ಎಂದೇ ಹೊರತು, ‘ಭಾರತ್ ಜಲಾನಾ’ (ಭಾರತ ಸುಡುವುದು, ಬರ್ನಿಂಗ್ ಇಂಡಿಯಾ) ಎಂದು ಅಲ್ಲವೇ ಅಲ್ಲ.

ಝೀ ನ್ಯೂಸ್, ನ್ಯೂಸ್18 ಮಾಧ್ಯಮಗಳು ಬೇಕೆಂತಲೇ ‘ಚಲಾನಾ’ ಎಂಬುದನ್ನು ‘ಜಲಾನಾ’ ಎಂದು ತಿರುಚಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿವೆ. ಇಂತಹ ಬಹುತೇಕ ಮಾಧ್ಯಮಗಳ ಮಾಲಿಕರು ಮತ್ತು ಮ್ಯಾನೇಜ್‌ಮೆಂಟ್ ದಲಿತ ವಿರೋಧಿ ಆಗಿರುವುದೇ ಇದಕ್ಕೆಲ್ಲ ಕಾರಣ….

ವಿಡಿಯೊ ಲಿಂಕ್ ವಿಳಾಸ:  https://vimeo.com/315073201 (ವಿಡಿಯೊವನ್ನು ಸ್ಲೋ ಮಾಡಿ ಪರೀಕ್ಷಿಸಿದ್ದು)
ಇದಕ್ಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ‘ಬೇಕೆಂತಲೇ ವಿಷಯ ತಿರುಚಿ ಗದ್ದಲ ಎಬ್ಬಿಸಲು ನೋಡಿದ ಈ ದಲಿತ ವಿರೋಧಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ’ ಎಂದಿದ್ದಾರೆ.

ಮಾನಗೇಡಿ ಚಾನೆಲ್‌ಗಳ ವಿರುದ್ಧ ಚಂದ್ರಶೇಖರ್ ಟ್ವೀಟ್

ಚಲಾನಾ ಎಂಬುದನ್ನು ಜಲಾನಾ ಮಾಡಿ ‘ಬೆಂಕಿ ಹಚ್ಚುವ’ ಇಂತಹ ಮಾಧ್ಯಮಗಳಿಗೆ ನಮ್ಮ ಧಿಕ್ಕಾರವಿರಲಿ. ಅಂದಂತೆ, ಜೆಎನ್‌ಯುನಲ್ಲಿ ಕನ್ಹಯ್ಯಕುಮಾರ್ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಮೊದಲು ಪ್ರಸಾರ ಮಾಡಿದ್ದೇ ಇದೇ ಝೀ ನ್ಯೂಸ್ (ಹಿಂದಿ) ಚಾನೆಲ್. ಇದು ಮೋದಿ ಮತ್ತು ಬಿಜೆಪಿಯ ಕಾಲು ನೆಕ್ಕುವ ಚಾನೆಲ್ ಎಂದು ಪದೇ ಪದೇ ಸಾಬೀತಾಗಿದೆ.

(ಕೃಪೆ: ಅಲ್ಟ್ನ್ಯೂಸ್.ಕಾಮ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...