Homeಸುಳ್ಳಪ್ಪೋ ಸುಳ್ಳುಚಲಾನಾ... ಜಲಾನಾ... ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

ಚಲಾನಾ… ಜಲಾನಾ… ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

- Advertisement -
- Advertisement -

ಮಿಥ್ಯ: ‘ಹಮ್ ಭಾರತ್ ಬಂದ್ ಕರನಾ ಜಾನತೆ ಹೈ, ತೊ ಹಮ್ ಭಾರತ್ ಜಲಾನಾ ಭೀ ಜಾನತೆ ಹೈ’
(ಭಾರತ್ ಬಂದ್ ಮಾಡುವುದು ಗೊತ್ತಿರುವ ನಮಗೆ ಭಾರತವನ್ನು ಸುಡುವುದೂ ಗೊತ್ತು)

ಭಾರತ ಸುಡುವ ಇಂತಹ ಪ್ರಚೋದನಾತ್ಮಕ ಹೇಳಿಕೆಯನ್ನು ಭೀಮ್ ಆರ್ಮಿ ಸಂಸ್ಥಾಪಕ, ದಲಿತ ನಾಯಕ ಚಂದ್ರಶೇಖರ್ ಅಜಾದ್ ರಾವಣ್ ಬಹಿರಂಗ ಸಭೆಯಲ್ಲಿ ಆಡಿರುವರೆಂದು ಮೂರು ದಿನಗಳ ಹಿಂದೆ ಝೀ ನ್ಯೂಸ್ (ಹಿಂದಿ) ಮತ್ತು ನ್ಯೂಸ್ 18 ಚಾನೆಲ್‌ಗಳು ಅಪಾದಿಸಿವೆ. ತಮ್ಮ ವೆಬ್‌ಸೈಟಿನಲ್ಲಿನ ಲೇಖನ ಮತ್ತು ಟ್ವಿಟರ್‌ನಲ್ಲಿ ಅವು, ‘ಮುಝಾಫರ್ ನಗರದಲ್ಲಿ ದಲಿತ ಸಭೆಯೊಂದರಲ್ಲಿ ಮಾತನಾಡುವಾಗ ಚಂದ್ರಶೇಖರ್ ಅವರು, ಜನರು ನನ್ನ ಸಿಗ್ನಲ್‌ಗೆ ಕಾಯುತ್ತಿದ್ದಾರೆ, ನಾವು ಭಾರತ್ ಬಂದ್ ಮಾಡಬಲ್ಲೆವಾದರೆ, ಭಾರತವನ್ನು ಸುಡಲೂಬಲ್ಲೆವು…,ನಮ್ಮ ಸಹನೆಗೂ ಒಂದು ಮಿತಿಯಿದೆ, ದೌರ್ಜನ್ಯಗಳಿಗೂ ಒಂದು ಮಿತಿ ಇದೆ ಎಂದು ಹೇಳಿಕೆ ನೀಡಿದರು’ ಎಂದಿವೆ.

ಸತ್ಯ: ಸತ್ಯ ಬೇರೇನೇ ಇದೆ. ಅದಕ್ಕೂ ಮೊದಲು ಝೀ ನ್ಯೂಸ್, ನ್ಯೂಸ್ 18ಗಳ ಈ ಸುದ್ದಿಗೆ ‘ಹಿಂದುತ್ವವಾದಿಗಳು’ ಸ್ಪಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ್ ವಿರುದ್ಧ ವಿಪರೀತ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಅತ್ಯಂತ ಪ್ರಚೋದನಾಕಾರಿ ಸಂದೇಶಗಳನ್ನು ಹಾಕಿದ್ದನ್ನು ನೋಡೋಣ.

ತನ್ನನ್ನು ರಾಷ್ಟ್ರೀಯವಾದಿ ಎಂದುಕೊಳ್ಳುವ ‘ಭಯ್ಯಾಜಿ’ (ಟ್ವಿಟರ್ ಹ್ಯಾಂಡಲ್ @shiraloksharma) ಎಂಬ ವ್ಯಕ್ತಿ ಟ್ವೀಟ್ ಮಾಡಿ, ‘ಹಾಗೆ ಭಾರತ ಸುಡುತ್ತೇನೆ ಎಂದು ಬೆದರಿಸುವವರನ್ನು ಅದೇ ಬೆಂಕಿಯಲ್ಲಿ ಹಾಕಿ ಬರ‍್ಯಾನಿ ಮಾಡಿ, ಬೀದಿನಾಯಿಗಳಿಗೆ ಹಾಕುತ್ತೇವೆ. ಪ್ರಯತ್ನ ಮಾಡಿ ನೋಡಿ, ಪರಿಣಾಮ ಏನಾಗುತ್ತೆ ನೋಡಿ’ ಎಂದು ಬೆದರಿಸುತ್ತಾನೆ. ಇದೇ ಬಗೆಯಲ್ಲಿ ಹಲವಾರು ‘ದೇಶಭಕ್ತರು’ ಚಂದ್ರಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

‘ಭಯ್ಯಾಜಿ’ ಎನ್ನುವಾತನ ಆಕ್ರೋಶಭರಿತ, ದಲಿತವಿರೋಧಿ ಟ್ವೀಟ್

ಆದರೆ, ಆ ಸಭೆಯ ವಿಡಿಯೋವನ್ನು ಪಡೆದು ಪರೀಕ್ಷಿಸಿದಾಗ, ಚಂದ್ರಶೇಖರ್ ಹೇಳಿದ್ದು: ‘ಭಾರತ್ ಚಲಾನಾ’ (ಭಾರತ ನಡೆಸುವುದು, ಭಾರತ ಆಳುವುದು, ರನ್ನಿಂಗ್ ಇಂಡಿಯಾ) ಎಂದೇ ಹೊರತು, ‘ಭಾರತ್ ಜಲಾನಾ’ (ಭಾರತ ಸುಡುವುದು, ಬರ್ನಿಂಗ್ ಇಂಡಿಯಾ) ಎಂದು ಅಲ್ಲವೇ ಅಲ್ಲ.

ಝೀ ನ್ಯೂಸ್, ನ್ಯೂಸ್18 ಮಾಧ್ಯಮಗಳು ಬೇಕೆಂತಲೇ ‘ಚಲಾನಾ’ ಎಂಬುದನ್ನು ‘ಜಲಾನಾ’ ಎಂದು ತಿರುಚಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿವೆ. ಇಂತಹ ಬಹುತೇಕ ಮಾಧ್ಯಮಗಳ ಮಾಲಿಕರು ಮತ್ತು ಮ್ಯಾನೇಜ್‌ಮೆಂಟ್ ದಲಿತ ವಿರೋಧಿ ಆಗಿರುವುದೇ ಇದಕ್ಕೆಲ್ಲ ಕಾರಣ….

ವಿಡಿಯೊ ಲಿಂಕ್ ವಿಳಾಸ:  https://vimeo.com/315073201 (ವಿಡಿಯೊವನ್ನು ಸ್ಲೋ ಮಾಡಿ ಪರೀಕ್ಷಿಸಿದ್ದು)
ಇದಕ್ಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ‘ಬೇಕೆಂತಲೇ ವಿಷಯ ತಿರುಚಿ ಗದ್ದಲ ಎಬ್ಬಿಸಲು ನೋಡಿದ ಈ ದಲಿತ ವಿರೋಧಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ’ ಎಂದಿದ್ದಾರೆ.

ಮಾನಗೇಡಿ ಚಾನೆಲ್‌ಗಳ ವಿರುದ್ಧ ಚಂದ್ರಶೇಖರ್ ಟ್ವೀಟ್

ಚಲಾನಾ ಎಂಬುದನ್ನು ಜಲಾನಾ ಮಾಡಿ ‘ಬೆಂಕಿ ಹಚ್ಚುವ’ ಇಂತಹ ಮಾಧ್ಯಮಗಳಿಗೆ ನಮ್ಮ ಧಿಕ್ಕಾರವಿರಲಿ. ಅಂದಂತೆ, ಜೆಎನ್‌ಯುನಲ್ಲಿ ಕನ್ಹಯ್ಯಕುಮಾರ್ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಮೊದಲು ಪ್ರಸಾರ ಮಾಡಿದ್ದೇ ಇದೇ ಝೀ ನ್ಯೂಸ್ (ಹಿಂದಿ) ಚಾನೆಲ್. ಇದು ಮೋದಿ ಮತ್ತು ಬಿಜೆಪಿಯ ಕಾಲು ನೆಕ್ಕುವ ಚಾನೆಲ್ ಎಂದು ಪದೇ ಪದೇ ಸಾಬೀತಾಗಿದೆ.

(ಕೃಪೆ: ಅಲ್ಟ್ನ್ಯೂಸ್.ಕಾಮ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...