Homeಸುಳ್ಳಪ್ಪೋ ಸುಳ್ಳುಚಲಾನಾ... ಜಲಾನಾ... ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

ಚಲಾನಾ… ಜಲಾನಾ… ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

- Advertisement -
- Advertisement -

ಮಿಥ್ಯ: ‘ಹಮ್ ಭಾರತ್ ಬಂದ್ ಕರನಾ ಜಾನತೆ ಹೈ, ತೊ ಹಮ್ ಭಾರತ್ ಜಲಾನಾ ಭೀ ಜಾನತೆ ಹೈ’
(ಭಾರತ್ ಬಂದ್ ಮಾಡುವುದು ಗೊತ್ತಿರುವ ನಮಗೆ ಭಾರತವನ್ನು ಸುಡುವುದೂ ಗೊತ್ತು)

ಭಾರತ ಸುಡುವ ಇಂತಹ ಪ್ರಚೋದನಾತ್ಮಕ ಹೇಳಿಕೆಯನ್ನು ಭೀಮ್ ಆರ್ಮಿ ಸಂಸ್ಥಾಪಕ, ದಲಿತ ನಾಯಕ ಚಂದ್ರಶೇಖರ್ ಅಜಾದ್ ರಾವಣ್ ಬಹಿರಂಗ ಸಭೆಯಲ್ಲಿ ಆಡಿರುವರೆಂದು ಮೂರು ದಿನಗಳ ಹಿಂದೆ ಝೀ ನ್ಯೂಸ್ (ಹಿಂದಿ) ಮತ್ತು ನ್ಯೂಸ್ 18 ಚಾನೆಲ್‌ಗಳು ಅಪಾದಿಸಿವೆ. ತಮ್ಮ ವೆಬ್‌ಸೈಟಿನಲ್ಲಿನ ಲೇಖನ ಮತ್ತು ಟ್ವಿಟರ್‌ನಲ್ಲಿ ಅವು, ‘ಮುಝಾಫರ್ ನಗರದಲ್ಲಿ ದಲಿತ ಸಭೆಯೊಂದರಲ್ಲಿ ಮಾತನಾಡುವಾಗ ಚಂದ್ರಶೇಖರ್ ಅವರು, ಜನರು ನನ್ನ ಸಿಗ್ನಲ್‌ಗೆ ಕಾಯುತ್ತಿದ್ದಾರೆ, ನಾವು ಭಾರತ್ ಬಂದ್ ಮಾಡಬಲ್ಲೆವಾದರೆ, ಭಾರತವನ್ನು ಸುಡಲೂಬಲ್ಲೆವು…,ನಮ್ಮ ಸಹನೆಗೂ ಒಂದು ಮಿತಿಯಿದೆ, ದೌರ್ಜನ್ಯಗಳಿಗೂ ಒಂದು ಮಿತಿ ಇದೆ ಎಂದು ಹೇಳಿಕೆ ನೀಡಿದರು’ ಎಂದಿವೆ.

ಸತ್ಯ: ಸತ್ಯ ಬೇರೇನೇ ಇದೆ. ಅದಕ್ಕೂ ಮೊದಲು ಝೀ ನ್ಯೂಸ್, ನ್ಯೂಸ್ 18ಗಳ ಈ ಸುದ್ದಿಗೆ ‘ಹಿಂದುತ್ವವಾದಿಗಳು’ ಸ್ಪಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ್ ವಿರುದ್ಧ ವಿಪರೀತ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಅತ್ಯಂತ ಪ್ರಚೋದನಾಕಾರಿ ಸಂದೇಶಗಳನ್ನು ಹಾಕಿದ್ದನ್ನು ನೋಡೋಣ.

ತನ್ನನ್ನು ರಾಷ್ಟ್ರೀಯವಾದಿ ಎಂದುಕೊಳ್ಳುವ ‘ಭಯ್ಯಾಜಿ’ (ಟ್ವಿಟರ್ ಹ್ಯಾಂಡಲ್ @shiraloksharma) ಎಂಬ ವ್ಯಕ್ತಿ ಟ್ವೀಟ್ ಮಾಡಿ, ‘ಹಾಗೆ ಭಾರತ ಸುಡುತ್ತೇನೆ ಎಂದು ಬೆದರಿಸುವವರನ್ನು ಅದೇ ಬೆಂಕಿಯಲ್ಲಿ ಹಾಕಿ ಬರ‍್ಯಾನಿ ಮಾಡಿ, ಬೀದಿನಾಯಿಗಳಿಗೆ ಹಾಕುತ್ತೇವೆ. ಪ್ರಯತ್ನ ಮಾಡಿ ನೋಡಿ, ಪರಿಣಾಮ ಏನಾಗುತ್ತೆ ನೋಡಿ’ ಎಂದು ಬೆದರಿಸುತ್ತಾನೆ. ಇದೇ ಬಗೆಯಲ್ಲಿ ಹಲವಾರು ‘ದೇಶಭಕ್ತರು’ ಚಂದ್ರಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

‘ಭಯ್ಯಾಜಿ’ ಎನ್ನುವಾತನ ಆಕ್ರೋಶಭರಿತ, ದಲಿತವಿರೋಧಿ ಟ್ವೀಟ್

ಆದರೆ, ಆ ಸಭೆಯ ವಿಡಿಯೋವನ್ನು ಪಡೆದು ಪರೀಕ್ಷಿಸಿದಾಗ, ಚಂದ್ರಶೇಖರ್ ಹೇಳಿದ್ದು: ‘ಭಾರತ್ ಚಲಾನಾ’ (ಭಾರತ ನಡೆಸುವುದು, ಭಾರತ ಆಳುವುದು, ರನ್ನಿಂಗ್ ಇಂಡಿಯಾ) ಎಂದೇ ಹೊರತು, ‘ಭಾರತ್ ಜಲಾನಾ’ (ಭಾರತ ಸುಡುವುದು, ಬರ್ನಿಂಗ್ ಇಂಡಿಯಾ) ಎಂದು ಅಲ್ಲವೇ ಅಲ್ಲ.

ಝೀ ನ್ಯೂಸ್, ನ್ಯೂಸ್18 ಮಾಧ್ಯಮಗಳು ಬೇಕೆಂತಲೇ ‘ಚಲಾನಾ’ ಎಂಬುದನ್ನು ‘ಜಲಾನಾ’ ಎಂದು ತಿರುಚಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿವೆ. ಇಂತಹ ಬಹುತೇಕ ಮಾಧ್ಯಮಗಳ ಮಾಲಿಕರು ಮತ್ತು ಮ್ಯಾನೇಜ್‌ಮೆಂಟ್ ದಲಿತ ವಿರೋಧಿ ಆಗಿರುವುದೇ ಇದಕ್ಕೆಲ್ಲ ಕಾರಣ….

ವಿಡಿಯೊ ಲಿಂಕ್ ವಿಳಾಸ:  https://vimeo.com/315073201 (ವಿಡಿಯೊವನ್ನು ಸ್ಲೋ ಮಾಡಿ ಪರೀಕ್ಷಿಸಿದ್ದು)
ಇದಕ್ಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ‘ಬೇಕೆಂತಲೇ ವಿಷಯ ತಿರುಚಿ ಗದ್ದಲ ಎಬ್ಬಿಸಲು ನೋಡಿದ ಈ ದಲಿತ ವಿರೋಧಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ’ ಎಂದಿದ್ದಾರೆ.

ಮಾನಗೇಡಿ ಚಾನೆಲ್‌ಗಳ ವಿರುದ್ಧ ಚಂದ್ರಶೇಖರ್ ಟ್ವೀಟ್

ಚಲಾನಾ ಎಂಬುದನ್ನು ಜಲಾನಾ ಮಾಡಿ ‘ಬೆಂಕಿ ಹಚ್ಚುವ’ ಇಂತಹ ಮಾಧ್ಯಮಗಳಿಗೆ ನಮ್ಮ ಧಿಕ್ಕಾರವಿರಲಿ. ಅಂದಂತೆ, ಜೆಎನ್‌ಯುನಲ್ಲಿ ಕನ್ಹಯ್ಯಕುಮಾರ್ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಮೊದಲು ಪ್ರಸಾರ ಮಾಡಿದ್ದೇ ಇದೇ ಝೀ ನ್ಯೂಸ್ (ಹಿಂದಿ) ಚಾನೆಲ್. ಇದು ಮೋದಿ ಮತ್ತು ಬಿಜೆಪಿಯ ಕಾಲು ನೆಕ್ಕುವ ಚಾನೆಲ್ ಎಂದು ಪದೇ ಪದೇ ಸಾಬೀತಾಗಿದೆ.

(ಕೃಪೆ: ಅಲ್ಟ್ನ್ಯೂಸ್.ಕಾಮ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...