Homeಸುಳ್ಳಪ್ಪೋ ಸುಳ್ಳುಚಲಾನಾ... ಜಲಾನಾ... ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

ಚಲಾನಾ… ಜಲಾನಾ… ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

- Advertisement -
- Advertisement -

ಮಿಥ್ಯ: ‘ಹಮ್ ಭಾರತ್ ಬಂದ್ ಕರನಾ ಜಾನತೆ ಹೈ, ತೊ ಹಮ್ ಭಾರತ್ ಜಲಾನಾ ಭೀ ಜಾನತೆ ಹೈ’
(ಭಾರತ್ ಬಂದ್ ಮಾಡುವುದು ಗೊತ್ತಿರುವ ನಮಗೆ ಭಾರತವನ್ನು ಸುಡುವುದೂ ಗೊತ್ತು)

ಭಾರತ ಸುಡುವ ಇಂತಹ ಪ್ರಚೋದನಾತ್ಮಕ ಹೇಳಿಕೆಯನ್ನು ಭೀಮ್ ಆರ್ಮಿ ಸಂಸ್ಥಾಪಕ, ದಲಿತ ನಾಯಕ ಚಂದ್ರಶೇಖರ್ ಅಜಾದ್ ರಾವಣ್ ಬಹಿರಂಗ ಸಭೆಯಲ್ಲಿ ಆಡಿರುವರೆಂದು ಮೂರು ದಿನಗಳ ಹಿಂದೆ ಝೀ ನ್ಯೂಸ್ (ಹಿಂದಿ) ಮತ್ತು ನ್ಯೂಸ್ 18 ಚಾನೆಲ್‌ಗಳು ಅಪಾದಿಸಿವೆ. ತಮ್ಮ ವೆಬ್‌ಸೈಟಿನಲ್ಲಿನ ಲೇಖನ ಮತ್ತು ಟ್ವಿಟರ್‌ನಲ್ಲಿ ಅವು, ‘ಮುಝಾಫರ್ ನಗರದಲ್ಲಿ ದಲಿತ ಸಭೆಯೊಂದರಲ್ಲಿ ಮಾತನಾಡುವಾಗ ಚಂದ್ರಶೇಖರ್ ಅವರು, ಜನರು ನನ್ನ ಸಿಗ್ನಲ್‌ಗೆ ಕಾಯುತ್ತಿದ್ದಾರೆ, ನಾವು ಭಾರತ್ ಬಂದ್ ಮಾಡಬಲ್ಲೆವಾದರೆ, ಭಾರತವನ್ನು ಸುಡಲೂಬಲ್ಲೆವು…,ನಮ್ಮ ಸಹನೆಗೂ ಒಂದು ಮಿತಿಯಿದೆ, ದೌರ್ಜನ್ಯಗಳಿಗೂ ಒಂದು ಮಿತಿ ಇದೆ ಎಂದು ಹೇಳಿಕೆ ನೀಡಿದರು’ ಎಂದಿವೆ.

ಸತ್ಯ: ಸತ್ಯ ಬೇರೇನೇ ಇದೆ. ಅದಕ್ಕೂ ಮೊದಲು ಝೀ ನ್ಯೂಸ್, ನ್ಯೂಸ್ 18ಗಳ ಈ ಸುದ್ದಿಗೆ ‘ಹಿಂದುತ್ವವಾದಿಗಳು’ ಸ್ಪಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ್ ವಿರುದ್ಧ ವಿಪರೀತ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಅತ್ಯಂತ ಪ್ರಚೋದನಾಕಾರಿ ಸಂದೇಶಗಳನ್ನು ಹಾಕಿದ್ದನ್ನು ನೋಡೋಣ.

ತನ್ನನ್ನು ರಾಷ್ಟ್ರೀಯವಾದಿ ಎಂದುಕೊಳ್ಳುವ ‘ಭಯ್ಯಾಜಿ’ (ಟ್ವಿಟರ್ ಹ್ಯಾಂಡಲ್ @shiraloksharma) ಎಂಬ ವ್ಯಕ್ತಿ ಟ್ವೀಟ್ ಮಾಡಿ, ‘ಹಾಗೆ ಭಾರತ ಸುಡುತ್ತೇನೆ ಎಂದು ಬೆದರಿಸುವವರನ್ನು ಅದೇ ಬೆಂಕಿಯಲ್ಲಿ ಹಾಕಿ ಬರ‍್ಯಾನಿ ಮಾಡಿ, ಬೀದಿನಾಯಿಗಳಿಗೆ ಹಾಕುತ್ತೇವೆ. ಪ್ರಯತ್ನ ಮಾಡಿ ನೋಡಿ, ಪರಿಣಾಮ ಏನಾಗುತ್ತೆ ನೋಡಿ’ ಎಂದು ಬೆದರಿಸುತ್ತಾನೆ. ಇದೇ ಬಗೆಯಲ್ಲಿ ಹಲವಾರು ‘ದೇಶಭಕ್ತರು’ ಚಂದ್ರಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

‘ಭಯ್ಯಾಜಿ’ ಎನ್ನುವಾತನ ಆಕ್ರೋಶಭರಿತ, ದಲಿತವಿರೋಧಿ ಟ್ವೀಟ್

ಆದರೆ, ಆ ಸಭೆಯ ವಿಡಿಯೋವನ್ನು ಪಡೆದು ಪರೀಕ್ಷಿಸಿದಾಗ, ಚಂದ್ರಶೇಖರ್ ಹೇಳಿದ್ದು: ‘ಭಾರತ್ ಚಲಾನಾ’ (ಭಾರತ ನಡೆಸುವುದು, ಭಾರತ ಆಳುವುದು, ರನ್ನಿಂಗ್ ಇಂಡಿಯಾ) ಎಂದೇ ಹೊರತು, ‘ಭಾರತ್ ಜಲಾನಾ’ (ಭಾರತ ಸುಡುವುದು, ಬರ್ನಿಂಗ್ ಇಂಡಿಯಾ) ಎಂದು ಅಲ್ಲವೇ ಅಲ್ಲ.

ಝೀ ನ್ಯೂಸ್, ನ್ಯೂಸ್18 ಮಾಧ್ಯಮಗಳು ಬೇಕೆಂತಲೇ ‘ಚಲಾನಾ’ ಎಂಬುದನ್ನು ‘ಜಲಾನಾ’ ಎಂದು ತಿರುಚಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿವೆ. ಇಂತಹ ಬಹುತೇಕ ಮಾಧ್ಯಮಗಳ ಮಾಲಿಕರು ಮತ್ತು ಮ್ಯಾನೇಜ್‌ಮೆಂಟ್ ದಲಿತ ವಿರೋಧಿ ಆಗಿರುವುದೇ ಇದಕ್ಕೆಲ್ಲ ಕಾರಣ….

ವಿಡಿಯೊ ಲಿಂಕ್ ವಿಳಾಸ:  https://vimeo.com/315073201 (ವಿಡಿಯೊವನ್ನು ಸ್ಲೋ ಮಾಡಿ ಪರೀಕ್ಷಿಸಿದ್ದು)
ಇದಕ್ಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ‘ಬೇಕೆಂತಲೇ ವಿಷಯ ತಿರುಚಿ ಗದ್ದಲ ಎಬ್ಬಿಸಲು ನೋಡಿದ ಈ ದಲಿತ ವಿರೋಧಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ’ ಎಂದಿದ್ದಾರೆ.

ಮಾನಗೇಡಿ ಚಾನೆಲ್‌ಗಳ ವಿರುದ್ಧ ಚಂದ್ರಶೇಖರ್ ಟ್ವೀಟ್

ಚಲಾನಾ ಎಂಬುದನ್ನು ಜಲಾನಾ ಮಾಡಿ ‘ಬೆಂಕಿ ಹಚ್ಚುವ’ ಇಂತಹ ಮಾಧ್ಯಮಗಳಿಗೆ ನಮ್ಮ ಧಿಕ್ಕಾರವಿರಲಿ. ಅಂದಂತೆ, ಜೆಎನ್‌ಯುನಲ್ಲಿ ಕನ್ಹಯ್ಯಕುಮಾರ್ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಮೊದಲು ಪ್ರಸಾರ ಮಾಡಿದ್ದೇ ಇದೇ ಝೀ ನ್ಯೂಸ್ (ಹಿಂದಿ) ಚಾನೆಲ್. ಇದು ಮೋದಿ ಮತ್ತು ಬಿಜೆಪಿಯ ಕಾಲು ನೆಕ್ಕುವ ಚಾನೆಲ್ ಎಂದು ಪದೇ ಪದೇ ಸಾಬೀತಾಗಿದೆ.

(ಕೃಪೆ: ಅಲ್ಟ್ನ್ಯೂಸ್.ಕಾಮ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...