Homeಅಂಕಣಗಳುಮುದ್ದೆ ರಫ್ತು ಮಾಡಿದ್ರೆ ಹೆಂಗೆ?

ಮುದ್ದೆ ರಫ್ತು ಮಾಡಿದ್ರೆ ಹೆಂಗೆ?

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ಸಂಭವಿಸಲಿದೆ ಅಂದರೆ ಅಪ್ಪಳಿಸಲಿದೆ. ಈ ಹಿಂದಿನವೆಲ್ಲಾ ಚುನಾವಣೆಗಳಾದರೆ, ಈಗಿನದ್ದು ಸಮರ ಚುನಾವಣಾ ಸಾಮಗ್ರಿಗಳೊಡಗೂಡಿದ ಸಮರ. ಇಲ್ಲಿ ಬಳಕೆಯಾಗುವ ಎಲ್ಲ ಆಯುಧಗಳಿಗಿಂತಲೂ ಮತೀಯವಾದ ಆಯುಧ ಭಯಾನಕವಾದದ್ದು. ಮೂರು ಪಾರ್ಟಿಗಳೂ ಈ ಆಯುಧಗಳನ್ನು ಕೈಗೆತ್ತಿಕೊಂಡಿವೆ. ಕಾಂಗ್ರೆಸ್ ಪಾರ್ಟಿ ಅಹಿಂದ ಜಪ ಕಡಿಮೆ ಮಾಡಿ ಅಹಿಂದದ ಜೊತೆಗೆ ಲಿಂಗ ಸೇರಿಸಿಕೊಂಡಿದೆ. ಆದರೆ ಒಲ್ಲದ ಗಂಡನೊಡನೆ ಬಾಳುವೆ ಮಾಡಿದಂತೆ ವೀರಶೈವರೊಟ್ಟಿಗಿದ್ದ ಲಿಂಗಾಯತರು ತಮ್ಮಸ್ಥಾನದಿಂದ ಕೆಳಗಿಳಿದು ಅಹಿಂದರೊಟ್ಟಿಗೆ ನಿಲ್ಲುವುದು ಸಾಧ್ಯವೇ ಎಂದು ಸಮಾಜ ವಿಜ್ಞಾನಿಗಳು ಚರ್ಚೆ ಮಾಡುತ್ತಿರುವಾಗಲೇ, ಶಾ ಎಂಬ ಭಾರತದ ಶನಿ ಹೆದರಬೇಡಿ ಬೇರೆ ಧರ್ಮ ಮಾನ್ಯತೆ ಕೊಡುವುದಿಲ್ಲ ಎಂದುಬಿಟ್ಟಿದ್ದಾನಲ್ಲಾ.
ಈತನ ಅಜ್ಞಾನದ ಮುಸುಡಿಗೆ ಇಕ್ಕಿರುವ ಮಾತೆಮಾದೇವಿ ನಿನ್ನ ಬುದ್ಧಿ ದಾರಿದ್ರ್ಯಕ್ಕಿಷ್ಟು ಬೆಂಕಿಹಾಕ. ನೀನು ಮಾತ್ರ ಜೈನ ಧರ್ಮ ಪಡಕೊಂಡಿ, ನಮಗೆ ಲಿಂಗಧರ್ಮ ಬೇಡವೆ ಎಂದರಂತಲ್ಲಾ, ಥೂತ್ತೇರಿ!

*******

ಕರ್ನಾಟಕದ ಮತದಾರರ ಎದುರು ಮೂರು ಪಾರ್ಟಿಗಳು ತಮ್ಮತಮ್ಮ ಸಾಧನೆಗಳನ್ನು ಅನಾವರಣ ಮಾಡಿಕೊಳ್ಳುತ್ತಿವೆಯಲ್ಲಾ. ಆ ಪೈಕಿ ಕಾಂಗ್ರೆಸ್ ಈ ಐದು ವರ್ಷ ತಾನು ಮಾಡಿದ ಸಾಧನೆಗಳನ್ನು ಸಾರಲು ಹೆಣಗುತ್ತಿರುವಾಗ, ಅತ್ತ ಬಿಜೆಪಿ ಹೇಳಿಕೊಳ್ಳಲು ಏನೂ ಇಲ್ಲದ ಕಾರಣ ಸಿದ್ದು ಸರ್ಕಾರ ಶುದ್ಧ ಭ್ರಷ್ಟ ಸರ್ಕಾರ. ಅದರಲ್ಲೂ ನಂ. 1 ಭ್ರಷ್ಟ ಸರ್ಕಾರ ಎಂದು ಹೇಳುತ್ತಲೇ `ಶಾ’ರವರು ಸಿದ್ದು ಹೆಸರಿನ ಜಾಗಕ್ಕೆ ಎಡೂರಪ್ಪನನ್ನು ತಂದು ಕೂರಿಸಿದ್ದು ಕರ್ನಾಟಕವನ್ನೆ ನಗಿಸಿತಂತಲ್ಲಾ. ಇನ್ನು ಜೆಡಿಎಸ್‍ನಿಂದ ಇಂತಹ ಪ್ರಮಾದಗಳಿಲ್ಲವಿದ್ದರೂ ಮಾನ್ಯ ಮಾಜಿ ಪ್ರಧಾನಿ ದೇವೇಗೌಡರು ಸಿರಾಮಯ್ಯನಂಥ ನೀಚನನ್ನು ನಾನು ಬೆಳೆಸಿ ಉಪಮುಖ್ಯಮಂತ್ರಿ ಮಾಡಿದ್ದೇ ತಪ್ಪು ಎಂದು ಹಲುಬಿದ್ದಾರಂತಲ್ಲಾ. ಆಗ ಅಲ್ಲೇ ಇದ್ದ ಅಡಗೂರಿನ ಬುಂಡೆಖ್ಯಾತ ಅಂದರೆ ಎಚ್. ವಿಶ್ವನಾಥ್ ನಾನು ಸಿದ್ದರಾಮಯ್ಯನ ಕೊರಳಿಗೆ ಹಗ್ಗಹಾಕಿ ಸೋನಿಯಾ ಮನೆಗೆ ಎಳೆದುಕೊಂಡು ಹೋಗಿದ್ದು ಈ ಶತಮಾನದಲ್ಲಿ ನಾನು ಮಾಡಿದ ಘೋರ ತಪ್ಪು ಎಂದರಂತಲ್ಲಾ ಥೂತ್ತೇರಿ.

*******

“ಸಿದ್ದುವನ್ನು ನಾನು ಬೆಳೆಸಿದೆ” ಎಂಬ ದೇವೇಗೌಡರ ಮಾತಿಗೆ ಸಾಕ್ಷಿಯೊದಗಿಸಿರುವ ಕೊಳ್ಳೇಗಾಲದ ಪ್ರಸಾದ ಎಂಬ ಸಿದ್ದು ಸೇವಕ. ಗೌಡರು ಹೇಳಿದ್ದು ನೂರಕ್ಕೆ ನೂರಮೂರು ಸತ್ಯ.
ಸಿದ್ದರಾಮನ ಹುಂಡಿಯಲ್ಲಿ, ಹರುಕಲು ಅಂಗಿ, ತೂತಾದ ಚೆಡ್ಡಿ, ಇಕ್ಕಿಕೊಂಡು ಎಣ್ಣೆಗಾಣದ ತಲೆ ಕೆದರಿಕೊಂಡು ಕುರಿ ಕಾಯುತ್ತಿದ್ದ ಸಿದ್ದುವನ್ನು ಹಿಡಿದು ತಂದ ದೇವೇಗೌಡರು, ರೇವಣ್ಣನಿಗಿಂತಲೂ ಹಿರಿಯವನೆಂದು ಸಾಕಿ ಎಲ್‍ಎಲ್‍ಬಿ ಮಾಡಿಸಿ, ಲಾಯರ್ ಮಾಡಿ, ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿ, ಕನ್ನಡ ಅಭಿವೃದ್ಧಿ ಅಧ್ಯಕ್ಷನನ್ನಾಗಿ ಮಾಡಿ, ನಂತರ ಆಡುಕುರಿ ದನಗಳ ಮಂತ್ರಿ ಮಾಡಿ, ಆರಾಣೆ ಎಣಿಸಲು ಬಾರದಿದ್ದರೂ ಅರ್ಥಮಂತ್ರಿ ಮಾಡಿ, ಉಪಮುಖ್ಯಮಂತ್ರಿ ಮಾಡಿದ್ದೂ ಅಲ್ಲದೆ, ಚಾಮುಂಡೇಶ್ವರಿ ಚುನಾವಣೆಯಲ್ಲಿ ಕೇವಲ 274 ಮತಗಳ ಅಂತರದಲ್ಲಿ ಗೆಲ್ಲಿಸಿ ಕೊಟ್ಟ ದೇವೇಗೌಡರು ಸಿದ್ದು ಪಾಲಿಗೆ ದೇವರಾಗಬೇಕಿತ್ತು. ಅದುಬಿಟ್ಟು ಕರ್ನಾಟಕವನ್ನು ಕಾಡುತ್ತಿರುವ ದೆವ್ವನಂತೆ ಪರಿಗಣಿಸಬಾರದಿತ್ತು. ಯಾರಾದರಾಗಲಿ ದೆವ್ವನನ್ನು ಆರಾಧಿಸಬೇಕೆ ಹೊರತು ಸಿಟ್ಟು ತರಿಸಬಾರದು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*******

ಸಿದ್ದು ಸರ್ಕಾರ ಮರಳಿ ಬಂದುದಾದರೆ ಕರುಣಿಸಿರುವ ಭಾಗ್ಯಗಳು ಮುಂದುವರಿಯುತ್ತವಂತೆ. ಅದೇ ಬಿಜೆಪಿ ಸರ್ಕಾರ ಬಂದರೆ ಹಿಂದಿನ ಸಾಧನೆಗಳು ಮುಂದುವರಿಯುತ್ತವಂತೆ! ಹಾಗೆಯೇ ಇಪ್ಪತ್ತೇ ತಿಂಗಳಿದ್ದು ಇಬ್ಬರು ಹೆಂಡಿರ ಮನೆ ಮರೆತು ಗ್ರಾಮ ವಾಸ್ತವ್ಯ ಮಾಡಿದ ಕುಮಾರಣ್ಣನ ಕೆಲಸಗಳೂ ಮುಂದುವರಿಯುತ್ತವಂತೆ. ಜೊತೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಂಡ 25 ಗಂಟೆ ಅವಧಿಯಲ್ಲಿ ರೈತರ 51 ಸಾವಿರ ಕೋಟಿ ಸಾಲಮನ್ನ, ಗರ್ಭಿಣಿಯರು. ಗರ್ಭಿಣಿಯಾಗುವ ತಿಂಗಳಿನಿಂದಲೇ ಮಾಸಾಶನ ಮಾಡುತ್ತೇನೆ. ಇದೆಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು ಮನೆಯಿಂದ ಈಚೆ ಬರದಂತಹ ಕೆಲಸ ಕೊಡುತ್ತೇನೆ. ಅಂದರೆ ಮನೆ ಕೈಗಾರಿಕೆಗಳು ಜಾರಿಯಾಗುತ್ತವೆ. ಮುಖ್ಯವಾಗಿ ನಮ್ಮ ತಂದೆಯವರಿಗೆ ಪ್ರಿಯವಾದ ಮುದ್ದೆ ತಯಾರಿಸುವಂತೆ ಮಾಡಿ. ಅದರ ಜೊತೆಗೆ ರೊಟ್ಟಿಯನ್ನು ತಯಾರಿಸಿ ಮಾರ್ಕೆಟಿಂಗ್ ವ್ಯವಸ್ಥೆ ಮಾಡುತ್ತೇನೆ. ಮುದ್ದೆ ಖರ್ಚಾಗದಿದ್ದರೆ ಬೃಹತ್ ಶೀತಲೀಕರಣ ನಿರ್ಮಿಸಿ ಕೆಡದಂತೆ ಸಂಗ್ರಹಿಸಿ ರಫ್ತು ಮಾಡುತ್ತೇವೆ ಎಂದು ಇನ್ನು ಹೇಳಿಲ್ಲವಂತಲ್ಲಾ, ಥೂತ್ತೇರಿ.

*******

ಹಸುವಿನಿಂದ ಬೇರೆಯಾದ ಕರುವಿನಂತೆ ಕರ್ನಾಟಕವನ್ನು ಸುತ್ತುತ್ತ. ಇವನಾರ್ವ ಇವನಾರ್ವ ಎನ್ನುತ್ತಿರುವ ರಾಹುಲ್ ಗಾಂಧಿಯನ್ನು ನೋಡಿ ಪಾಪ ಪಾಂಡು ಎಂದು ಆಡಿಕೊಂಡಿರುವ ಅಡುಕುರಿ ವಿಶ್ವನಾಥ್‍ನನ್ನು ನೋಡಿ, ಕೆರಳಿದ ಕಾಂಗೈಗಳೂ ಬುಂಡೆಕ್ಯಾತನೆಂದು ನಾಮಕರಣ ಮಾಡಿವೆಯಲ್ಲಾ. ಅಷ್ಟಕ್ಕೂ ಈ ಬುಂಡೆಕ್ಯಾತ ಮಗ ಅಯ್ಯು ಚಿತ್ರದ್ದು. ಆ ಚಿತ್ರದಲ್ಲಿ ಬುಂಡೇಕ್ಯಾತನ ಯಾರೆಂದು ಇತಿಹಾಸವನ್ನು ಕೆದಕಿದಾಗ ಬುಂಡೆಕ್ಯಾತ ಎಂಬ ಪಾತ್ರ ಬೂತಯ್ಯನ ಕೆಲಸವೇನೆಂದರೆ, ಭೂತಯ್ಯನ ಜೊತೆಗಿದ್ದೇ ವಿರೋಧಿಗಳಿಗೆ ಭೂತಯ್ಯನ ನಾಶ ಸಂಚನ್ನು ಹೇಳಿಕೊಡುವುದು. ನಾಯಕನ ಹಿಂದಿರುತ್ತಲೇ ಎದುರಾಳಿಗೆ ಕಣ್ಸನ್ನೆ ಮಾಡುವ ಈ ಪಾತ್ರಗಳಿಗೆ ದೊಡ್ಡ ಇತಿಹಾಸವೇ ಇದೆ. ಅದೇನಾದರಾಗಲಿ ದೇವೇಗೌಡರು ಟೀಕೆ ಮಾಡುವ ಯಾವ ಅವಕಾಶವನ್ನು ಕಳೆದುಕೊಳ್ಳದೇ ಟೀಕಿಸಿ ಚಪ್ಪಾಳೆ ಗಿಟ್ಟಿಸಿದ್ದ ವಿಶ್ವನಾಥ್, ಈಗ ದೇವೇಗೌಡರ ಹಿಂದೆ ಇದ್ದು,ಈ ಬುರುಡೆ ಅವರೇದ್ದೊ ಇವರದ್ದೊ ಎಂಬ ಅನುಮಾನ ಹುಟ್ಟಿಸುವಂತೆ ಹತ್ತಿರದಲ್ಲೇ ಇರುವುದು ಮೌಲ್ಯಗಳನ್ನು ಕುರಿತು ಚಿಂತಿಸುವವರ ಮನಕರಗಿಸುವಂತಿದೆಯಲ್ಲಾ ಥೂತ್ತೇರಿ!!!

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...