Homeಅಂಕಣಗಳುಮುದ್ದೆ ರಫ್ತು ಮಾಡಿದ್ರೆ ಹೆಂಗೆ?

ಮುದ್ದೆ ರಫ್ತು ಮಾಡಿದ್ರೆ ಹೆಂಗೆ?

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ಸಂಭವಿಸಲಿದೆ ಅಂದರೆ ಅಪ್ಪಳಿಸಲಿದೆ. ಈ ಹಿಂದಿನವೆಲ್ಲಾ ಚುನಾವಣೆಗಳಾದರೆ, ಈಗಿನದ್ದು ಸಮರ ಚುನಾವಣಾ ಸಾಮಗ್ರಿಗಳೊಡಗೂಡಿದ ಸಮರ. ಇಲ್ಲಿ ಬಳಕೆಯಾಗುವ ಎಲ್ಲ ಆಯುಧಗಳಿಗಿಂತಲೂ ಮತೀಯವಾದ ಆಯುಧ ಭಯಾನಕವಾದದ್ದು. ಮೂರು ಪಾರ್ಟಿಗಳೂ ಈ ಆಯುಧಗಳನ್ನು ಕೈಗೆತ್ತಿಕೊಂಡಿವೆ. ಕಾಂಗ್ರೆಸ್ ಪಾರ್ಟಿ ಅಹಿಂದ ಜಪ ಕಡಿಮೆ ಮಾಡಿ ಅಹಿಂದದ ಜೊತೆಗೆ ಲಿಂಗ ಸೇರಿಸಿಕೊಂಡಿದೆ. ಆದರೆ ಒಲ್ಲದ ಗಂಡನೊಡನೆ ಬಾಳುವೆ ಮಾಡಿದಂತೆ ವೀರಶೈವರೊಟ್ಟಿಗಿದ್ದ ಲಿಂಗಾಯತರು ತಮ್ಮಸ್ಥಾನದಿಂದ ಕೆಳಗಿಳಿದು ಅಹಿಂದರೊಟ್ಟಿಗೆ ನಿಲ್ಲುವುದು ಸಾಧ್ಯವೇ ಎಂದು ಸಮಾಜ ವಿಜ್ಞಾನಿಗಳು ಚರ್ಚೆ ಮಾಡುತ್ತಿರುವಾಗಲೇ, ಶಾ ಎಂಬ ಭಾರತದ ಶನಿ ಹೆದರಬೇಡಿ ಬೇರೆ ಧರ್ಮ ಮಾನ್ಯತೆ ಕೊಡುವುದಿಲ್ಲ ಎಂದುಬಿಟ್ಟಿದ್ದಾನಲ್ಲಾ.
ಈತನ ಅಜ್ಞಾನದ ಮುಸುಡಿಗೆ ಇಕ್ಕಿರುವ ಮಾತೆಮಾದೇವಿ ನಿನ್ನ ಬುದ್ಧಿ ದಾರಿದ್ರ್ಯಕ್ಕಿಷ್ಟು ಬೆಂಕಿಹಾಕ. ನೀನು ಮಾತ್ರ ಜೈನ ಧರ್ಮ ಪಡಕೊಂಡಿ, ನಮಗೆ ಲಿಂಗಧರ್ಮ ಬೇಡವೆ ಎಂದರಂತಲ್ಲಾ, ಥೂತ್ತೇರಿ!

*******

ಕರ್ನಾಟಕದ ಮತದಾರರ ಎದುರು ಮೂರು ಪಾರ್ಟಿಗಳು ತಮ್ಮತಮ್ಮ ಸಾಧನೆಗಳನ್ನು ಅನಾವರಣ ಮಾಡಿಕೊಳ್ಳುತ್ತಿವೆಯಲ್ಲಾ. ಆ ಪೈಕಿ ಕಾಂಗ್ರೆಸ್ ಈ ಐದು ವರ್ಷ ತಾನು ಮಾಡಿದ ಸಾಧನೆಗಳನ್ನು ಸಾರಲು ಹೆಣಗುತ್ತಿರುವಾಗ, ಅತ್ತ ಬಿಜೆಪಿ ಹೇಳಿಕೊಳ್ಳಲು ಏನೂ ಇಲ್ಲದ ಕಾರಣ ಸಿದ್ದು ಸರ್ಕಾರ ಶುದ್ಧ ಭ್ರಷ್ಟ ಸರ್ಕಾರ. ಅದರಲ್ಲೂ ನಂ. 1 ಭ್ರಷ್ಟ ಸರ್ಕಾರ ಎಂದು ಹೇಳುತ್ತಲೇ `ಶಾ’ರವರು ಸಿದ್ದು ಹೆಸರಿನ ಜಾಗಕ್ಕೆ ಎಡೂರಪ್ಪನನ್ನು ತಂದು ಕೂರಿಸಿದ್ದು ಕರ್ನಾಟಕವನ್ನೆ ನಗಿಸಿತಂತಲ್ಲಾ. ಇನ್ನು ಜೆಡಿಎಸ್‍ನಿಂದ ಇಂತಹ ಪ್ರಮಾದಗಳಿಲ್ಲವಿದ್ದರೂ ಮಾನ್ಯ ಮಾಜಿ ಪ್ರಧಾನಿ ದೇವೇಗೌಡರು ಸಿರಾಮಯ್ಯನಂಥ ನೀಚನನ್ನು ನಾನು ಬೆಳೆಸಿ ಉಪಮುಖ್ಯಮಂತ್ರಿ ಮಾಡಿದ್ದೇ ತಪ್ಪು ಎಂದು ಹಲುಬಿದ್ದಾರಂತಲ್ಲಾ. ಆಗ ಅಲ್ಲೇ ಇದ್ದ ಅಡಗೂರಿನ ಬುಂಡೆಖ್ಯಾತ ಅಂದರೆ ಎಚ್. ವಿಶ್ವನಾಥ್ ನಾನು ಸಿದ್ದರಾಮಯ್ಯನ ಕೊರಳಿಗೆ ಹಗ್ಗಹಾಕಿ ಸೋನಿಯಾ ಮನೆಗೆ ಎಳೆದುಕೊಂಡು ಹೋಗಿದ್ದು ಈ ಶತಮಾನದಲ್ಲಿ ನಾನು ಮಾಡಿದ ಘೋರ ತಪ್ಪು ಎಂದರಂತಲ್ಲಾ ಥೂತ್ತೇರಿ.

*******

“ಸಿದ್ದುವನ್ನು ನಾನು ಬೆಳೆಸಿದೆ” ಎಂಬ ದೇವೇಗೌಡರ ಮಾತಿಗೆ ಸಾಕ್ಷಿಯೊದಗಿಸಿರುವ ಕೊಳ್ಳೇಗಾಲದ ಪ್ರಸಾದ ಎಂಬ ಸಿದ್ದು ಸೇವಕ. ಗೌಡರು ಹೇಳಿದ್ದು ನೂರಕ್ಕೆ ನೂರಮೂರು ಸತ್ಯ.
ಸಿದ್ದರಾಮನ ಹುಂಡಿಯಲ್ಲಿ, ಹರುಕಲು ಅಂಗಿ, ತೂತಾದ ಚೆಡ್ಡಿ, ಇಕ್ಕಿಕೊಂಡು ಎಣ್ಣೆಗಾಣದ ತಲೆ ಕೆದರಿಕೊಂಡು ಕುರಿ ಕಾಯುತ್ತಿದ್ದ ಸಿದ್ದುವನ್ನು ಹಿಡಿದು ತಂದ ದೇವೇಗೌಡರು, ರೇವಣ್ಣನಿಗಿಂತಲೂ ಹಿರಿಯವನೆಂದು ಸಾಕಿ ಎಲ್‍ಎಲ್‍ಬಿ ಮಾಡಿಸಿ, ಲಾಯರ್ ಮಾಡಿ, ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿ, ಕನ್ನಡ ಅಭಿವೃದ್ಧಿ ಅಧ್ಯಕ್ಷನನ್ನಾಗಿ ಮಾಡಿ, ನಂತರ ಆಡುಕುರಿ ದನಗಳ ಮಂತ್ರಿ ಮಾಡಿ, ಆರಾಣೆ ಎಣಿಸಲು ಬಾರದಿದ್ದರೂ ಅರ್ಥಮಂತ್ರಿ ಮಾಡಿ, ಉಪಮುಖ್ಯಮಂತ್ರಿ ಮಾಡಿದ್ದೂ ಅಲ್ಲದೆ, ಚಾಮುಂಡೇಶ್ವರಿ ಚುನಾವಣೆಯಲ್ಲಿ ಕೇವಲ 274 ಮತಗಳ ಅಂತರದಲ್ಲಿ ಗೆಲ್ಲಿಸಿ ಕೊಟ್ಟ ದೇವೇಗೌಡರು ಸಿದ್ದು ಪಾಲಿಗೆ ದೇವರಾಗಬೇಕಿತ್ತು. ಅದುಬಿಟ್ಟು ಕರ್ನಾಟಕವನ್ನು ಕಾಡುತ್ತಿರುವ ದೆವ್ವನಂತೆ ಪರಿಗಣಿಸಬಾರದಿತ್ತು. ಯಾರಾದರಾಗಲಿ ದೆವ್ವನನ್ನು ಆರಾಧಿಸಬೇಕೆ ಹೊರತು ಸಿಟ್ಟು ತರಿಸಬಾರದು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*******

ಸಿದ್ದು ಸರ್ಕಾರ ಮರಳಿ ಬಂದುದಾದರೆ ಕರುಣಿಸಿರುವ ಭಾಗ್ಯಗಳು ಮುಂದುವರಿಯುತ್ತವಂತೆ. ಅದೇ ಬಿಜೆಪಿ ಸರ್ಕಾರ ಬಂದರೆ ಹಿಂದಿನ ಸಾಧನೆಗಳು ಮುಂದುವರಿಯುತ್ತವಂತೆ! ಹಾಗೆಯೇ ಇಪ್ಪತ್ತೇ ತಿಂಗಳಿದ್ದು ಇಬ್ಬರು ಹೆಂಡಿರ ಮನೆ ಮರೆತು ಗ್ರಾಮ ವಾಸ್ತವ್ಯ ಮಾಡಿದ ಕುಮಾರಣ್ಣನ ಕೆಲಸಗಳೂ ಮುಂದುವರಿಯುತ್ತವಂತೆ. ಜೊತೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಂಡ 25 ಗಂಟೆ ಅವಧಿಯಲ್ಲಿ ರೈತರ 51 ಸಾವಿರ ಕೋಟಿ ಸಾಲಮನ್ನ, ಗರ್ಭಿಣಿಯರು. ಗರ್ಭಿಣಿಯಾಗುವ ತಿಂಗಳಿನಿಂದಲೇ ಮಾಸಾಶನ ಮಾಡುತ್ತೇನೆ. ಇದೆಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು ಮನೆಯಿಂದ ಈಚೆ ಬರದಂತಹ ಕೆಲಸ ಕೊಡುತ್ತೇನೆ. ಅಂದರೆ ಮನೆ ಕೈಗಾರಿಕೆಗಳು ಜಾರಿಯಾಗುತ್ತವೆ. ಮುಖ್ಯವಾಗಿ ನಮ್ಮ ತಂದೆಯವರಿಗೆ ಪ್ರಿಯವಾದ ಮುದ್ದೆ ತಯಾರಿಸುವಂತೆ ಮಾಡಿ. ಅದರ ಜೊತೆಗೆ ರೊಟ್ಟಿಯನ್ನು ತಯಾರಿಸಿ ಮಾರ್ಕೆಟಿಂಗ್ ವ್ಯವಸ್ಥೆ ಮಾಡುತ್ತೇನೆ. ಮುದ್ದೆ ಖರ್ಚಾಗದಿದ್ದರೆ ಬೃಹತ್ ಶೀತಲೀಕರಣ ನಿರ್ಮಿಸಿ ಕೆಡದಂತೆ ಸಂಗ್ರಹಿಸಿ ರಫ್ತು ಮಾಡುತ್ತೇವೆ ಎಂದು ಇನ್ನು ಹೇಳಿಲ್ಲವಂತಲ್ಲಾ, ಥೂತ್ತೇರಿ.

*******

ಹಸುವಿನಿಂದ ಬೇರೆಯಾದ ಕರುವಿನಂತೆ ಕರ್ನಾಟಕವನ್ನು ಸುತ್ತುತ್ತ. ಇವನಾರ್ವ ಇವನಾರ್ವ ಎನ್ನುತ್ತಿರುವ ರಾಹುಲ್ ಗಾಂಧಿಯನ್ನು ನೋಡಿ ಪಾಪ ಪಾಂಡು ಎಂದು ಆಡಿಕೊಂಡಿರುವ ಅಡುಕುರಿ ವಿಶ್ವನಾಥ್‍ನನ್ನು ನೋಡಿ, ಕೆರಳಿದ ಕಾಂಗೈಗಳೂ ಬುಂಡೆಕ್ಯಾತನೆಂದು ನಾಮಕರಣ ಮಾಡಿವೆಯಲ್ಲಾ. ಅಷ್ಟಕ್ಕೂ ಈ ಬುಂಡೆಕ್ಯಾತ ಮಗ ಅಯ್ಯು ಚಿತ್ರದ್ದು. ಆ ಚಿತ್ರದಲ್ಲಿ ಬುಂಡೇಕ್ಯಾತನ ಯಾರೆಂದು ಇತಿಹಾಸವನ್ನು ಕೆದಕಿದಾಗ ಬುಂಡೆಕ್ಯಾತ ಎಂಬ ಪಾತ್ರ ಬೂತಯ್ಯನ ಕೆಲಸವೇನೆಂದರೆ, ಭೂತಯ್ಯನ ಜೊತೆಗಿದ್ದೇ ವಿರೋಧಿಗಳಿಗೆ ಭೂತಯ್ಯನ ನಾಶ ಸಂಚನ್ನು ಹೇಳಿಕೊಡುವುದು. ನಾಯಕನ ಹಿಂದಿರುತ್ತಲೇ ಎದುರಾಳಿಗೆ ಕಣ್ಸನ್ನೆ ಮಾಡುವ ಈ ಪಾತ್ರಗಳಿಗೆ ದೊಡ್ಡ ಇತಿಹಾಸವೇ ಇದೆ. ಅದೇನಾದರಾಗಲಿ ದೇವೇಗೌಡರು ಟೀಕೆ ಮಾಡುವ ಯಾವ ಅವಕಾಶವನ್ನು ಕಳೆದುಕೊಳ್ಳದೇ ಟೀಕಿಸಿ ಚಪ್ಪಾಳೆ ಗಿಟ್ಟಿಸಿದ್ದ ವಿಶ್ವನಾಥ್, ಈಗ ದೇವೇಗೌಡರ ಹಿಂದೆ ಇದ್ದು,ಈ ಬುರುಡೆ ಅವರೇದ್ದೊ ಇವರದ್ದೊ ಎಂಬ ಅನುಮಾನ ಹುಟ್ಟಿಸುವಂತೆ ಹತ್ತಿರದಲ್ಲೇ ಇರುವುದು ಮೌಲ್ಯಗಳನ್ನು ಕುರಿತು ಚಿಂತಿಸುವವರ ಮನಕರಗಿಸುವಂತಿದೆಯಲ್ಲಾ ಥೂತ್ತೇರಿ!!!

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...