Homeಅಂಕಣಗಳುಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

ಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

- Advertisement -
- Advertisement -

ಜರ್ವೇಶನ್‍ನಿಂದ ಡಾಕ್ಟರಾದೋರು ಎಂಥಾ ಚಿಕಿತ್ಸೆ ಕೊಡ್ತಾರೆ?’ ‘35% ಮಾಕ್ರ್ಸ್ ತಗೊಂಡು ಡಾಕ್ಟರ್ ಆದೋನು ಅವನೆಂಥಾ ಡಾಕ್ಟರ್?’ ಎಂಬ ಮಾತುಗಳು ಈಗ ಹಾದಿಬೀದಿಯಲ್ಲಿ ಕೇಳಿಬರುತ್ತಿವೆ. ಇಂಥಾ ವಾದವನ್ನು ಮುಂದಿಡುವ `ಮೆರಿಟ್‍ಪಂಥೀಯ’ ಜನ ತಮ್ಮ ವಾದಕ್ಕೆ ಯಾವ ಸೂಕ್ತ ಆಧಾರಗಳನ್ನೂ ಕೊಡದಿದ್ದರೂ, ತಮ್ಮ ಒಣತರ್ಕಗಳನ್ನು ಮಾತ್ರ ತೇಲಿ ಬಿಡುತ್ತಿದ್ದಾರೆ. ಕಾರ್ಪೊರೇಟ್ ಮೀಡಿಯಾಗಳು ಮಾತ್ರ ಇಂಥ ಪರಮಸತ್ಯವನ್ನು ಪದೇಪದೇ ಬಿತ್ತರಿಸುವುದರಿಂದ ಈ ಬಗ್ಗೆ ಸಹಜವಾಗಿ ಸಮಾಜದಲ್ಲಿ ಒಂದಷ್ಟು ಗೊಂದಲ ಏರ್ಪಟ್ಟಿದೆ.
ಕಟುಸತ್ಯಗಳನ್ನು ಸಾರಿ ಹೇಳುತ್ತಿರುವ ವಾಸ್ತವಗಳನ್ನು ನೋಡೋಣ. ಮುಖ್ಯವಾಹಿನಿ ಪತ್ರಿಕೆಯಾದ ಟೈಮ್ಸ್ ಆಫ್ ಇಂಡಿಯಾ ಕಳೆದ ವರ್ಷ ಮೆಡಿಕಲ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನೀಟ್ ಪರೀಕ್ಷೆಯ ಅಂಕಗಳ ಮಾಹಿತಿ ಪಡೆದು ವಿಶ್ಲೇಷಣೆಗೆ ಒಳಪಡಿಸಿ ವರದಿಯೊಂದನ್ನು ತಯಾರಿಸಿದೆ. ಆ ವರದಿ ಪ್ರಕಾರ ದೇಶಾದ್ಯಂತ 409 ಕಾಲೇಜುಗಳಲ್ಲಿ ಒಟ್ಟು 56,000 ವಿದ್ಯಾರ್ಥಿಗಳು ಮೆಡಿಕಲ್‍ಗೆ ದಾಖಲಾಗಿದ್ದಾರೆ. ಅದರಲ್ಲಿ 39,000 ವಿದ್ಯಾರ್ಥಿಗಳು ಸರಕಾರಿ ಕೋಟಾದಡಿಯಲ್ಲೂ, 17,000 ಜನ ವಿದ್ಯಾರ್ಥಿಗಳು ಖಾಸಗಿ ಕೋಟಾದಲ್ಲಿ ದಾಖಲಾತಿ ಪಡೆದಿದ್ದಾರೆ. ಸರಕಾರಿ ಕೋಟಾದಲ್ಲಿ(ಅಂದರೆ ಮೀಸಲಾತಿಯನ್ನೂ ಒಳಗೊಂಡಿದ್ದು) ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೂ, ಹೆಚ್ಚು ಶುಲ್ಕ ಪಾವತಿಸಿ ಆಯ್ಕೆಯಾದ ಶ್ರೀಮಂತ ಮತ್ತು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಗುಣಮಟ್ಟಕ್ಕೂ ಅಜಗಜಾಂತರ ವ್ಯತ್ಯಾಸಗಳಿವೆ. ಸಂಬಂಧಿತ ನೀಟ್ ಪರೀಕ್ಷೆಯಲ್ಲಿ ಗರಿಷ್ಟ ಒಟ್ಟು 720 ಅಂಕಗಳಲ್ಲಿ ಸರಕಾರಿ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳು ಸರಾಸರಿ 448 ಅಂಕಗಳನ್ನು(62%) ಪಡೆದಿದ್ದರೆ, ಮ್ಯಾನೇಜ್‍ಮೆಂಟ್ ಕೋಟಾದ ವಿದ್ಯಾರ್ಥಿಗಳು ಸರಾಸರಿ 306(42%) ಅಂಕಗಳನ್ನು ಪಡೆದಿದ್ದಾರೆ. ಹಣಬಲದಿಂದ ಮೆಡಿಕಲ್ ಸೀಟು ಪಡೆದವರು ಸರ್ಕಾರಿ ಕೋಟಾದಡಿ ಆಯ್ಕೆಯಾದವರಿಗಿಂತ 20% ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಸತ್ಯ ಆಶ್ಚರ್ಯವಾದರೂ ಅದೇ ಕಹಿಸತ್ಯ. ಇನ್ನು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಮತ್ತಷ್ಟು ಹೀನಾಯ. ನೀಟ್ ಪರೀಕ್ಷೆಯಲ್ಲಿ ಎನ್‍ಆರ್‍ಐಗಳು ಗಳಿಸಿರುವ ಸರಾಸರಿ ಕೇವಲ 221 ಅಂಕಗಳು(29%).
ಒಟ್ಟು ಸರ್ಕಾರಿ ಕೋಟಾದ ವಿವರಣೆಗಳಿಗೆ ಹೋದರೆ ಮತ್ತಷ್ಟು ಕಣ್ಣು ತೆರೆಸುವ ಮಾಹಿತಿ ಸಿಗುತ್ತದೆ. ಉದಾಹರಣೆಗೆ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ಸರಾಸರಿ ಅಂಕ 398(53%). ಮ್ಯಾನೇಜ್‍ಮೆಂಟ್ ಕೋಟಾದಡಿ ಬಂದ ವಿದ್ಯಾರ್ಥಿಗಳ ಸರಾಸರಿ 306 ಅಂಕ(42%). ಅಂದರೆ ಮೀಸಲಾತಿಯಲ್ಲಿ ಬಂದ ಪರಿಶಿಷ್ಟ ವಿದ್ಯಾರ್ಥಿಗಳು ಹಣಬಲದ ವಿದ್ಯಾರ್ಥಿಗಳಿಗಿಂತಲೂ 11% ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ಪಂಜಾಬ್‍ನ ನೀಟ್ ಪರೀಕ್ಷೆಯ ವಿಶ್ಲೇಷಣೆಯೂ ಇದೇ ಕತೆಯನ್ನು ಹೇಳುತ್ತಿದೆ. ಇಲ್ಲಿ ಸರ್ಕಾರಿ ಕೋಟಾದ ವಿದ್ಯಾರ್ಥಿಗಳು ಗಳಿಸಿದ್ದ ಅಂಕ ಗರಿಷ್ಟ 86% ರಿಂದ ಕನಿಷ್ಟ 75%. ಆದರೆ ಖಾಸಗಿ ಕೋಟಾದಡಿಯ ವಿದ್ಯಾರ್ಥಿಗಳ ಅಂಕ 73% ರಿಂದ 65% ಮಾತ್ರ. ಪ್ರೈವೇಟ್ ಯೂನಿವರ್ಸಿಟಿಗಳೆಂದು ಕರೆದುಕೊಳ್ಳುವ ಸಂಸ್ಥೆಗಳ ಸ್ಥಿತಿ ಇನ್ನೂ ಅಧ್ವಾನ. ಕನಿಷ್ಟ 41% ಅಂಕ ಗಳಿಸಿದವರಿಗೂ ಇಲ್ಲಿ ಮೆಡಿಕಲ್ ಸೀಟ್ ಲಭ್ಯವಾಗಿದೆ. ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ? ಅನಾದಿಯಿಂದಲೂ `ಮೆರಿಟ್‍ಪಂಥೀಯ’ ವಾಕ್ಪಟುಗಳು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂಬುದನ್ನು ಮೇಲಿನ ಅಂಕಿಅಂಶಗಳು ಅನುಮಾನಕ್ಕೆಡೆಯಿಲ್ಲದಂತೆ ಸಾರಿ ಹೇಳುತ್ತಿವೆ.
ದೇಶಿಯ ಮತ್ತು ಅಂತರರಾಷ್ಟ್ರೀಯ ಕಾರ್ಪೊರೇಟ್ ಸಂಸ್ಥೆಗಳು ದೇಶದುದ್ದಕ್ಕೂ ಆರೋಗ್ಯ ಸೇವೆಯ ಹೆಸರಲ್ಲಿ ಹಲವು ಖಾಸಗಿ ಕಾಲೇಜು ಮತ್ತು ಆಸ್ಪತ್ರೆಗಳನ್ನು ತೆರೆದು ಕೂತಿವೆ. ಇದರ ಪರಿಣಾಮವೆಂಬಂತೆ 1974ರಲ್ಲಿ ಶೇ.18ರಷ್ಟಿದ್ದ ಖಾಸಗಿ ಆಸ್ಪತ್ರೆಗಳು 2014 ಹೊತ್ತಿಗೆ ಶೇ.75ರಷ್ಟು ಹೆಚ್ಚಾಗಿವೆ. 1974ರಲ್ಲಿ ಶೇ.21ರಷ್ಟು ಹಾಸಿಗೆಗಳನ್ನು ಹೊಂದಿದ್ದ ಖಾಸಗಿ ಆಸ್ಪತ್ರೆಗಳು 2014 ರಷ್ಟೊತ್ತಿಗೆ ಶೇ.54ಕ್ಕೇರಿಸಿಕೊಂಡಿವೆ. ಶೇ.75ರಷ್ಟು ಔಷಧಾಲಯಗಳು, ಶೇ.80 ರಷ್ಟು ಅರ್ಹ ವೈದ್ಯರನ್ನು ಖಾಸಗಿ ಆಸ್ಪತ್ರೆಗಳು ಹೊಂದಿವೆ. ಶೇ.60ರಷ್ಟು ಒಳರೋಗಿಗಳು, ಶೇ.80ರಷ್ಟು ಹೊರರೋಗಿಗಳು ಖಾಸಗಿ ಆಸ್ಪತ್ರೆಯ ಸಂಪರ್ಕದಲ್ಲಿದ್ದಾರೆ. ಇಲ್ಲಿಂದ ಮುಂದೆ ಇದು ದೊಡ್ಡ ಬಂಡವಾಳ ಹೂಡುವ ಕ್ಷೇತ್ರವಾಗಿ ಮಾರ್ಪಟ್ಟು ಲಾಭ ಮತ್ತು ಅತಿಲಾಭದ ಲೆಕ್ಕಾಚಾರದಲ್ಲಿ ಕಾರ್ಪೊರೇಟ್ ಸಂಸ್ಥೆಗಳು ತೊಡಗಿವೆ. ಇದಕ್ಕೆ ಬೇಕಾದ ಸಂಪನ್ಮೂಲವನ್ನು ಸೃಷ್ಟಿಸುವ ನಿಟ್ಟಿನಲ್ಲಿ ವೈದ್ಯಕೀಯ ವಿದ್ಯಾಸಂಸ್ಥೆಗಳು ರೂಪುಗೊಂಡವು. ಅದರಲ್ಲೂ ಸರ್ಕಾರಿ ವೈದ್ಯಕೀಯ ವಿದ್ಯಾಸಂಸ್ಥೆಗಳನ್ನು ದೂರತಳ್ಳಿ ಖಾಸಗಿ ಸಂಸ್ಥೆಗಳು ಬೇರುಬಿಡತೊಡಗಿದವು. ಇದರ ಫಲವೆಂಬಂತೆ 1950ರಲ್ಲಿ ಶೇ.4ರಷ್ಟಿದ್ದ ಖಾಸಗಿ ವೈದ್ಯಕೀಯ ವಿದ್ಯಾಸಂಸ್ಥೆಗಳು 2014ರಲ್ಲಿ ಶೇ.54ರಷ್ಟು ಹೆಚ್ಚಾದವು. ಈ ಖಾಸಗಿ ಮೆಡಿಕಲ್ ಕಾಲೇಜುಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ತಮ್ಮ ಶುಲ್ಕವನ್ನು ಹತ್ತಾರು ಪಟ್ಟು ಹೆಚ್ಚು ಮಾಡುತ್ತಲೇ ಬಂದಿವೆ. ಇದರಿಂದ ‘ವೈದ್ಯಸೇವೆ’ ಎಂಬ ಪದವನ್ನು ಅಚ್ಚುಕಟ್ಟಾಗಿ ದೂರಸರಿಸಿ ವೈದ್ಯಲೋಕವನ್ನು ಹಣ ಹೂಡಿ ಹಣ ಗಳಿಸುವ ದಂಧೆಯನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿವೆ.
ಮೀಸಲಾತಿಯಿಂದ ಪ್ರತಿಭೆಗೆ ಧಕ್ಕೆ ಒದಗುತ್ತಿದೆ ಎನ್ನುವವರು ಇದಕ್ಕೆ ಏನು ಹೇಳುತ್ತಿದ್ದಾರೆ. ಸರಾಸರಿ ಅಂಕ ಗಳಿಕೆಯಲ್ಲೂ ಕಡಿಮೆ ಇರುವ ಅನೇಕ ವಿದ್ಯಾರ್ಥಿಗಳು ಖಾಸಗಿ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದು ವೈದ್ಯಕೀಯ ಪದವಿಯನ್ನು ಪಡೆಯುತ್ತಿದ್ದಾರೆ. ಹಾಗಿದ್ದರೆ ಇವರೆಲ್ಲ ಪ್ರತಿಭಾವಂತರೆ? ಅರ್ಹತೆಯನ್ನು ಅಂಕಗಳಲ್ಲಿ ಅಳೆದು ‘ಮೀಸಲಾತಿಯಿಂದ ಕಡಿಮೆ ಅಂಕಗಳಿಸಿ ಬಂದವರು ವೈದ್ಯ ವೃತ್ತಿಯನ್ನು ಸರಿಯಾಗಿ ನಿಭಾಯಿಸಬಲ್ಲರೆ’ ಎನ್ನುವವರೇನೂ ಇಲ್ಲಿ ಕಡಿಮೆಯಿಲ್ಲ. ಕಡಿಮೆ ಅಂಕ ಗಳಿಸಿ ದುಡ್ಡಿನಿಂದ ಸೀಟು ಖರೀದಿಸುತ್ತಿರುವ ಹಣವಂತ ಪಡೆಗೆ ಅರ್ಹತೆಯ ಮಾನದಂಡವನ್ನು ಇವರೆಲ್ಲ ಹಿಡಿಯಬಲ್ಲರೆ? ಇವರ ಯಾವ ಮನಸ್ಸುಗಳೂ ಇದರ ಬಗ್ಗೆ ಚಕಾರ ಎತ್ತುವುದಿಲ್ಲ. ಹೋಗಲಿ, ಇಂತಹ ವಿದ್ಯಾರ್ಥಿಗಳಿಂದ ಎಂತಹ ಸಾರ್ವಜನಿಕ ಸೇವೆಯನ್ನು ನಿರೀಕ್ಷಿಸಲು ಸಾಧ್ಯ? ಈ ಪ್ರಶ್ನೆಯನ್ನು ಇವರಿಗೆ ಕೇಳುವ ಬದಲು ಮೀಸಲಾತಿಯಿಂದ ಬಂದವರಿಗೆ ಕೇಳಲಾಗುತ್ತಿದೆ. ದುಡ್ಡು ಕೊಟ್ಟು ಬಂದವರು ದುಡ್ಡನ್ನು ಸಂಪಾದಿಸಲಷ್ಟೇ ಯೋಚಿಸುತ್ತಾರೆ. ದುಡ್ಡು ಗಳಿಸಬೇಕು ಎನ್ನುವುದರ ಕಡೆ ಇವರ ತುಡಿತವಿದೆ. ಇಲ್ಲಿ ಹಣವೇ ಮೆರಿಟ್ ಆಗುತ್ತಿದೆ. ಇಂತವರಿಂದ ಗುಣಮಟ್ಟವನ್ನು ಅಪೇಕ್ಷಿಸಲು ಸಾಧ್ಯವೇ? ಅಪೇಕ್ಷಿಸಿದರೆ ಎಂತಹ ಗುಣಮಟ್ಟವನ್ನು ಅಪೇಕ್ಷಿಸಬಹುದು. ಇದೊಂದು ರೀತಿಯಲ್ಲಿ ಹಗಲು ದರೋಡೆಗೆ ಪ್ರೇರಣೆ ನೀಡಿದಂತೆಯೇ ಸರಿ. ಹಣವನ್ನು ದ್ವಿಗುಣಗೊಳಿಸುವ ಕಾರಣದಿಂದಾಗಿಯೇ ಕಾರ್ಪೊರೇಟ್ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದ ಮೇಲೆ ಅಪಾರ ಬಂಡವಾಳ ಹೂಡಿ, `ಮೀಸಲಾತಿ ವರ್ಸಸ್ ಮೆರಿಟ್’ ಎಂಬ ಅಪ್ಪಟ ಜನವಿರೋಧಿ ಸುಳ್ಳನ್ನು ಹರಡುತ್ತಿದೆ. ಆದರೆ ಭಾರತದ ವಾಸ್ತವಗಳು ಇವರ ದುರ್ಬಲ ಕಲ್ಪನೆಗಳನ್ನು ಮೀರಿ ಬೆಳೆಯುತ್ತಿವೆ. ಈ ದೇಶದ ಜನತಂತ್ರ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತೆಯನ್ನು ಉಳಿಸುವುದೆಂದರೆ ವಾಸ್ತವಗಳನ್ನು ಅರ್ಥ ಮಾಡಿಕೊಳ್ಳುವುದು, ಆ ವಾಸ್ತವಗಳ ಬೆಳಕಲ್ಲಿ ಹೊಸ ಭಾರತವನ್ನು ಕಟ್ಟುವುದೇ ಆಗಿದೆ.
ಯಾವ ಕ್ಷೇತ್ರದಲ್ಲಿ ಪದೇ ಪದೇ ಮೀಸಲಾತಿಯ ವಿರೋಧಿ ಹೇಳಿಕೆಗಳು ಹೊರಬಂದು ಪ್ರತಿಭೆ ಪ್ರಶ್ನೆಯನ್ನು ಮುಂದಿಡಲಾಗುತ್ತಿದೆಯೋ ಆ ಕ್ಷೇತ್ರದಲ್ಲಿಯೇ ದುಡ್ಡಿನಿಂದ ಪದವಿಯನ್ನು ಕೊಳ್ಳುವ ದಂಧೆ ಎಗ್ಗಿಲ್ಲದೇ ಸಾಗಿದೆ. ಈ ಪಿಡುಗು ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಸೀಮಿತವಾದುದಲ್ಲ; ಪೇಮೆಂಟ್ ಕೋಟಾ ಹೆಸರಿನಲ್ಲಿ ಯಾವ ಪದವಿಯ ಅಂಕಗಳಿಗೂ ಮಾನ್ಯತೆ ಕೊಡದೆ ತುಂಬಲಾಗುತ್ತಿದೆ. ಅಂಕ ಕಡಿಮೆ ಇದ್ದರೂ ಹಣ ಕೊಟ್ಟು ಯಾವ ಪದವಿಗಾದರೂ ಸೇರಬಹುದು. ಆದರೆ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸರಾಸರಿ ಅಂಕ ಹೊಂದಿರುವ ವಿದ್ಯಾರ್ಥಿಗಳು ಮೀಸಲಾತಿ ಕೋಟಾದಲ್ಲಿ ಬಂದರೆ ಅರ್ಹತೆ, ಪ್ರತಿಭೆ ಮಾನದಂಡದ ಪ್ರಶ್ನೆಯನ್ನು ಮುಂಚೂಣಿಗೆ ತಂದು ಹುಯಿಲೆಬ್ಬಿಸಲಾಗುತ್ತದೆ. ಇನ್ನೊಂದು ಅಂಶವನ್ನು ಸ್ಪಷ್ಟಪಡಿಸುವುದಾದರೆ ಇಂದು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಸಾಮಾನ್ಯ ವರ್ಗಕ್ಕೆ ನಿಗದಿಯಾಗುವ ಅಂಕಗಳಿಗಿಂತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತಗೊಳ್ಳುವ ಅಂಕ ಒಂದೆರಡು ಕಡಿಮೆ ಅಂಕಗಳಷ್ಟು ಮಾತ್ರ. ಈ ಸತ್ಯ ನಮ್ಮೆಲ್ಲರ ಕಣ್ಣೆದುರಿಗೇ ಇದ್ದರೂ ಪೂರ್ವಗ್ರಹಪೀಡಿತ ಮನಸ್ಥಿತಿಯವರು ಕಣ್ಣುತೆರೆಯಲು ಸಿದ್ಧರಿಲ್ಲ. ಅದಕ್ಕೇನು ಮಾಡುವುದು?

– ಡಾ. ಉಮಾಶಂಕರ್ ಹೆಚ್.ಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...