Homeಅಂಕಣಗಳುಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

ಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

- Advertisement -
- Advertisement -

ಜರ್ವೇಶನ್‍ನಿಂದ ಡಾಕ್ಟರಾದೋರು ಎಂಥಾ ಚಿಕಿತ್ಸೆ ಕೊಡ್ತಾರೆ?’ ‘35% ಮಾಕ್ರ್ಸ್ ತಗೊಂಡು ಡಾಕ್ಟರ್ ಆದೋನು ಅವನೆಂಥಾ ಡಾಕ್ಟರ್?’ ಎಂಬ ಮಾತುಗಳು ಈಗ ಹಾದಿಬೀದಿಯಲ್ಲಿ ಕೇಳಿಬರುತ್ತಿವೆ. ಇಂಥಾ ವಾದವನ್ನು ಮುಂದಿಡುವ `ಮೆರಿಟ್‍ಪಂಥೀಯ’ ಜನ ತಮ್ಮ ವಾದಕ್ಕೆ ಯಾವ ಸೂಕ್ತ ಆಧಾರಗಳನ್ನೂ ಕೊಡದಿದ್ದರೂ, ತಮ್ಮ ಒಣತರ್ಕಗಳನ್ನು ಮಾತ್ರ ತೇಲಿ ಬಿಡುತ್ತಿದ್ದಾರೆ. ಕಾರ್ಪೊರೇಟ್ ಮೀಡಿಯಾಗಳು ಮಾತ್ರ ಇಂಥ ಪರಮಸತ್ಯವನ್ನು ಪದೇಪದೇ ಬಿತ್ತರಿಸುವುದರಿಂದ ಈ ಬಗ್ಗೆ ಸಹಜವಾಗಿ ಸಮಾಜದಲ್ಲಿ ಒಂದಷ್ಟು ಗೊಂದಲ ಏರ್ಪಟ್ಟಿದೆ.
ಕಟುಸತ್ಯಗಳನ್ನು ಸಾರಿ ಹೇಳುತ್ತಿರುವ ವಾಸ್ತವಗಳನ್ನು ನೋಡೋಣ. ಮುಖ್ಯವಾಹಿನಿ ಪತ್ರಿಕೆಯಾದ ಟೈಮ್ಸ್ ಆಫ್ ಇಂಡಿಯಾ ಕಳೆದ ವರ್ಷ ಮೆಡಿಕಲ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನೀಟ್ ಪರೀಕ್ಷೆಯ ಅಂಕಗಳ ಮಾಹಿತಿ ಪಡೆದು ವಿಶ್ಲೇಷಣೆಗೆ ಒಳಪಡಿಸಿ ವರದಿಯೊಂದನ್ನು ತಯಾರಿಸಿದೆ. ಆ ವರದಿ ಪ್ರಕಾರ ದೇಶಾದ್ಯಂತ 409 ಕಾಲೇಜುಗಳಲ್ಲಿ ಒಟ್ಟು 56,000 ವಿದ್ಯಾರ್ಥಿಗಳು ಮೆಡಿಕಲ್‍ಗೆ ದಾಖಲಾಗಿದ್ದಾರೆ. ಅದರಲ್ಲಿ 39,000 ವಿದ್ಯಾರ್ಥಿಗಳು ಸರಕಾರಿ ಕೋಟಾದಡಿಯಲ್ಲೂ, 17,000 ಜನ ವಿದ್ಯಾರ್ಥಿಗಳು ಖಾಸಗಿ ಕೋಟಾದಲ್ಲಿ ದಾಖಲಾತಿ ಪಡೆದಿದ್ದಾರೆ. ಸರಕಾರಿ ಕೋಟಾದಲ್ಲಿ(ಅಂದರೆ ಮೀಸಲಾತಿಯನ್ನೂ ಒಳಗೊಂಡಿದ್ದು) ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೂ, ಹೆಚ್ಚು ಶುಲ್ಕ ಪಾವತಿಸಿ ಆಯ್ಕೆಯಾದ ಶ್ರೀಮಂತ ಮತ್ತು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಗುಣಮಟ್ಟಕ್ಕೂ ಅಜಗಜಾಂತರ ವ್ಯತ್ಯಾಸಗಳಿವೆ. ಸಂಬಂಧಿತ ನೀಟ್ ಪರೀಕ್ಷೆಯಲ್ಲಿ ಗರಿಷ್ಟ ಒಟ್ಟು 720 ಅಂಕಗಳಲ್ಲಿ ಸರಕಾರಿ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳು ಸರಾಸರಿ 448 ಅಂಕಗಳನ್ನು(62%) ಪಡೆದಿದ್ದರೆ, ಮ್ಯಾನೇಜ್‍ಮೆಂಟ್ ಕೋಟಾದ ವಿದ್ಯಾರ್ಥಿಗಳು ಸರಾಸರಿ 306(42%) ಅಂಕಗಳನ್ನು ಪಡೆದಿದ್ದಾರೆ. ಹಣಬಲದಿಂದ ಮೆಡಿಕಲ್ ಸೀಟು ಪಡೆದವರು ಸರ್ಕಾರಿ ಕೋಟಾದಡಿ ಆಯ್ಕೆಯಾದವರಿಗಿಂತ 20% ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಸತ್ಯ ಆಶ್ಚರ್ಯವಾದರೂ ಅದೇ ಕಹಿಸತ್ಯ. ಇನ್ನು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಮತ್ತಷ್ಟು ಹೀನಾಯ. ನೀಟ್ ಪರೀಕ್ಷೆಯಲ್ಲಿ ಎನ್‍ಆರ್‍ಐಗಳು ಗಳಿಸಿರುವ ಸರಾಸರಿ ಕೇವಲ 221 ಅಂಕಗಳು(29%).
ಒಟ್ಟು ಸರ್ಕಾರಿ ಕೋಟಾದ ವಿವರಣೆಗಳಿಗೆ ಹೋದರೆ ಮತ್ತಷ್ಟು ಕಣ್ಣು ತೆರೆಸುವ ಮಾಹಿತಿ ಸಿಗುತ್ತದೆ. ಉದಾಹರಣೆಗೆ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ಸರಾಸರಿ ಅಂಕ 398(53%). ಮ್ಯಾನೇಜ್‍ಮೆಂಟ್ ಕೋಟಾದಡಿ ಬಂದ ವಿದ್ಯಾರ್ಥಿಗಳ ಸರಾಸರಿ 306 ಅಂಕ(42%). ಅಂದರೆ ಮೀಸಲಾತಿಯಲ್ಲಿ ಬಂದ ಪರಿಶಿಷ್ಟ ವಿದ್ಯಾರ್ಥಿಗಳು ಹಣಬಲದ ವಿದ್ಯಾರ್ಥಿಗಳಿಗಿಂತಲೂ 11% ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ಪಂಜಾಬ್‍ನ ನೀಟ್ ಪರೀಕ್ಷೆಯ ವಿಶ್ಲೇಷಣೆಯೂ ಇದೇ ಕತೆಯನ್ನು ಹೇಳುತ್ತಿದೆ. ಇಲ್ಲಿ ಸರ್ಕಾರಿ ಕೋಟಾದ ವಿದ್ಯಾರ್ಥಿಗಳು ಗಳಿಸಿದ್ದ ಅಂಕ ಗರಿಷ್ಟ 86% ರಿಂದ ಕನಿಷ್ಟ 75%. ಆದರೆ ಖಾಸಗಿ ಕೋಟಾದಡಿಯ ವಿದ್ಯಾರ್ಥಿಗಳ ಅಂಕ 73% ರಿಂದ 65% ಮಾತ್ರ. ಪ್ರೈವೇಟ್ ಯೂನಿವರ್ಸಿಟಿಗಳೆಂದು ಕರೆದುಕೊಳ್ಳುವ ಸಂಸ್ಥೆಗಳ ಸ್ಥಿತಿ ಇನ್ನೂ ಅಧ್ವಾನ. ಕನಿಷ್ಟ 41% ಅಂಕ ಗಳಿಸಿದವರಿಗೂ ಇಲ್ಲಿ ಮೆಡಿಕಲ್ ಸೀಟ್ ಲಭ್ಯವಾಗಿದೆ. ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ? ಅನಾದಿಯಿಂದಲೂ `ಮೆರಿಟ್‍ಪಂಥೀಯ’ ವಾಕ್ಪಟುಗಳು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂಬುದನ್ನು ಮೇಲಿನ ಅಂಕಿಅಂಶಗಳು ಅನುಮಾನಕ್ಕೆಡೆಯಿಲ್ಲದಂತೆ ಸಾರಿ ಹೇಳುತ್ತಿವೆ.
ದೇಶಿಯ ಮತ್ತು ಅಂತರರಾಷ್ಟ್ರೀಯ ಕಾರ್ಪೊರೇಟ್ ಸಂಸ್ಥೆಗಳು ದೇಶದುದ್ದಕ್ಕೂ ಆರೋಗ್ಯ ಸೇವೆಯ ಹೆಸರಲ್ಲಿ ಹಲವು ಖಾಸಗಿ ಕಾಲೇಜು ಮತ್ತು ಆಸ್ಪತ್ರೆಗಳನ್ನು ತೆರೆದು ಕೂತಿವೆ. ಇದರ ಪರಿಣಾಮವೆಂಬಂತೆ 1974ರಲ್ಲಿ ಶೇ.18ರಷ್ಟಿದ್ದ ಖಾಸಗಿ ಆಸ್ಪತ್ರೆಗಳು 2014 ಹೊತ್ತಿಗೆ ಶೇ.75ರಷ್ಟು ಹೆಚ್ಚಾಗಿವೆ. 1974ರಲ್ಲಿ ಶೇ.21ರಷ್ಟು ಹಾಸಿಗೆಗಳನ್ನು ಹೊಂದಿದ್ದ ಖಾಸಗಿ ಆಸ್ಪತ್ರೆಗಳು 2014 ರಷ್ಟೊತ್ತಿಗೆ ಶೇ.54ಕ್ಕೇರಿಸಿಕೊಂಡಿವೆ. ಶೇ.75ರಷ್ಟು ಔಷಧಾಲಯಗಳು, ಶೇ.80 ರಷ್ಟು ಅರ್ಹ ವೈದ್ಯರನ್ನು ಖಾಸಗಿ ಆಸ್ಪತ್ರೆಗಳು ಹೊಂದಿವೆ. ಶೇ.60ರಷ್ಟು ಒಳರೋಗಿಗಳು, ಶೇ.80ರಷ್ಟು ಹೊರರೋಗಿಗಳು ಖಾಸಗಿ ಆಸ್ಪತ್ರೆಯ ಸಂಪರ್ಕದಲ್ಲಿದ್ದಾರೆ. ಇಲ್ಲಿಂದ ಮುಂದೆ ಇದು ದೊಡ್ಡ ಬಂಡವಾಳ ಹೂಡುವ ಕ್ಷೇತ್ರವಾಗಿ ಮಾರ್ಪಟ್ಟು ಲಾಭ ಮತ್ತು ಅತಿಲಾಭದ ಲೆಕ್ಕಾಚಾರದಲ್ಲಿ ಕಾರ್ಪೊರೇಟ್ ಸಂಸ್ಥೆಗಳು ತೊಡಗಿವೆ. ಇದಕ್ಕೆ ಬೇಕಾದ ಸಂಪನ್ಮೂಲವನ್ನು ಸೃಷ್ಟಿಸುವ ನಿಟ್ಟಿನಲ್ಲಿ ವೈದ್ಯಕೀಯ ವಿದ್ಯಾಸಂಸ್ಥೆಗಳು ರೂಪುಗೊಂಡವು. ಅದರಲ್ಲೂ ಸರ್ಕಾರಿ ವೈದ್ಯಕೀಯ ವಿದ್ಯಾಸಂಸ್ಥೆಗಳನ್ನು ದೂರತಳ್ಳಿ ಖಾಸಗಿ ಸಂಸ್ಥೆಗಳು ಬೇರುಬಿಡತೊಡಗಿದವು. ಇದರ ಫಲವೆಂಬಂತೆ 1950ರಲ್ಲಿ ಶೇ.4ರಷ್ಟಿದ್ದ ಖಾಸಗಿ ವೈದ್ಯಕೀಯ ವಿದ್ಯಾಸಂಸ್ಥೆಗಳು 2014ರಲ್ಲಿ ಶೇ.54ರಷ್ಟು ಹೆಚ್ಚಾದವು. ಈ ಖಾಸಗಿ ಮೆಡಿಕಲ್ ಕಾಲೇಜುಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ತಮ್ಮ ಶುಲ್ಕವನ್ನು ಹತ್ತಾರು ಪಟ್ಟು ಹೆಚ್ಚು ಮಾಡುತ್ತಲೇ ಬಂದಿವೆ. ಇದರಿಂದ ‘ವೈದ್ಯಸೇವೆ’ ಎಂಬ ಪದವನ್ನು ಅಚ್ಚುಕಟ್ಟಾಗಿ ದೂರಸರಿಸಿ ವೈದ್ಯಲೋಕವನ್ನು ಹಣ ಹೂಡಿ ಹಣ ಗಳಿಸುವ ದಂಧೆಯನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿವೆ.
ಮೀಸಲಾತಿಯಿಂದ ಪ್ರತಿಭೆಗೆ ಧಕ್ಕೆ ಒದಗುತ್ತಿದೆ ಎನ್ನುವವರು ಇದಕ್ಕೆ ಏನು ಹೇಳುತ್ತಿದ್ದಾರೆ. ಸರಾಸರಿ ಅಂಕ ಗಳಿಕೆಯಲ್ಲೂ ಕಡಿಮೆ ಇರುವ ಅನೇಕ ವಿದ್ಯಾರ್ಥಿಗಳು ಖಾಸಗಿ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದು ವೈದ್ಯಕೀಯ ಪದವಿಯನ್ನು ಪಡೆಯುತ್ತಿದ್ದಾರೆ. ಹಾಗಿದ್ದರೆ ಇವರೆಲ್ಲ ಪ್ರತಿಭಾವಂತರೆ? ಅರ್ಹತೆಯನ್ನು ಅಂಕಗಳಲ್ಲಿ ಅಳೆದು ‘ಮೀಸಲಾತಿಯಿಂದ ಕಡಿಮೆ ಅಂಕಗಳಿಸಿ ಬಂದವರು ವೈದ್ಯ ವೃತ್ತಿಯನ್ನು ಸರಿಯಾಗಿ ನಿಭಾಯಿಸಬಲ್ಲರೆ’ ಎನ್ನುವವರೇನೂ ಇಲ್ಲಿ ಕಡಿಮೆಯಿಲ್ಲ. ಕಡಿಮೆ ಅಂಕ ಗಳಿಸಿ ದುಡ್ಡಿನಿಂದ ಸೀಟು ಖರೀದಿಸುತ್ತಿರುವ ಹಣವಂತ ಪಡೆಗೆ ಅರ್ಹತೆಯ ಮಾನದಂಡವನ್ನು ಇವರೆಲ್ಲ ಹಿಡಿಯಬಲ್ಲರೆ? ಇವರ ಯಾವ ಮನಸ್ಸುಗಳೂ ಇದರ ಬಗ್ಗೆ ಚಕಾರ ಎತ್ತುವುದಿಲ್ಲ. ಹೋಗಲಿ, ಇಂತಹ ವಿದ್ಯಾರ್ಥಿಗಳಿಂದ ಎಂತಹ ಸಾರ್ವಜನಿಕ ಸೇವೆಯನ್ನು ನಿರೀಕ್ಷಿಸಲು ಸಾಧ್ಯ? ಈ ಪ್ರಶ್ನೆಯನ್ನು ಇವರಿಗೆ ಕೇಳುವ ಬದಲು ಮೀಸಲಾತಿಯಿಂದ ಬಂದವರಿಗೆ ಕೇಳಲಾಗುತ್ತಿದೆ. ದುಡ್ಡು ಕೊಟ್ಟು ಬಂದವರು ದುಡ್ಡನ್ನು ಸಂಪಾದಿಸಲಷ್ಟೇ ಯೋಚಿಸುತ್ತಾರೆ. ದುಡ್ಡು ಗಳಿಸಬೇಕು ಎನ್ನುವುದರ ಕಡೆ ಇವರ ತುಡಿತವಿದೆ. ಇಲ್ಲಿ ಹಣವೇ ಮೆರಿಟ್ ಆಗುತ್ತಿದೆ. ಇಂತವರಿಂದ ಗುಣಮಟ್ಟವನ್ನು ಅಪೇಕ್ಷಿಸಲು ಸಾಧ್ಯವೇ? ಅಪೇಕ್ಷಿಸಿದರೆ ಎಂತಹ ಗುಣಮಟ್ಟವನ್ನು ಅಪೇಕ್ಷಿಸಬಹುದು. ಇದೊಂದು ರೀತಿಯಲ್ಲಿ ಹಗಲು ದರೋಡೆಗೆ ಪ್ರೇರಣೆ ನೀಡಿದಂತೆಯೇ ಸರಿ. ಹಣವನ್ನು ದ್ವಿಗುಣಗೊಳಿಸುವ ಕಾರಣದಿಂದಾಗಿಯೇ ಕಾರ್ಪೊರೇಟ್ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದ ಮೇಲೆ ಅಪಾರ ಬಂಡವಾಳ ಹೂಡಿ, `ಮೀಸಲಾತಿ ವರ್ಸಸ್ ಮೆರಿಟ್’ ಎಂಬ ಅಪ್ಪಟ ಜನವಿರೋಧಿ ಸುಳ್ಳನ್ನು ಹರಡುತ್ತಿದೆ. ಆದರೆ ಭಾರತದ ವಾಸ್ತವಗಳು ಇವರ ದುರ್ಬಲ ಕಲ್ಪನೆಗಳನ್ನು ಮೀರಿ ಬೆಳೆಯುತ್ತಿವೆ. ಈ ದೇಶದ ಜನತಂತ್ರ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತೆಯನ್ನು ಉಳಿಸುವುದೆಂದರೆ ವಾಸ್ತವಗಳನ್ನು ಅರ್ಥ ಮಾಡಿಕೊಳ್ಳುವುದು, ಆ ವಾಸ್ತವಗಳ ಬೆಳಕಲ್ಲಿ ಹೊಸ ಭಾರತವನ್ನು ಕಟ್ಟುವುದೇ ಆಗಿದೆ.
ಯಾವ ಕ್ಷೇತ್ರದಲ್ಲಿ ಪದೇ ಪದೇ ಮೀಸಲಾತಿಯ ವಿರೋಧಿ ಹೇಳಿಕೆಗಳು ಹೊರಬಂದು ಪ್ರತಿಭೆ ಪ್ರಶ್ನೆಯನ್ನು ಮುಂದಿಡಲಾಗುತ್ತಿದೆಯೋ ಆ ಕ್ಷೇತ್ರದಲ್ಲಿಯೇ ದುಡ್ಡಿನಿಂದ ಪದವಿಯನ್ನು ಕೊಳ್ಳುವ ದಂಧೆ ಎಗ್ಗಿಲ್ಲದೇ ಸಾಗಿದೆ. ಈ ಪಿಡುಗು ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಸೀಮಿತವಾದುದಲ್ಲ; ಪೇಮೆಂಟ್ ಕೋಟಾ ಹೆಸರಿನಲ್ಲಿ ಯಾವ ಪದವಿಯ ಅಂಕಗಳಿಗೂ ಮಾನ್ಯತೆ ಕೊಡದೆ ತುಂಬಲಾಗುತ್ತಿದೆ. ಅಂಕ ಕಡಿಮೆ ಇದ್ದರೂ ಹಣ ಕೊಟ್ಟು ಯಾವ ಪದವಿಗಾದರೂ ಸೇರಬಹುದು. ಆದರೆ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸರಾಸರಿ ಅಂಕ ಹೊಂದಿರುವ ವಿದ್ಯಾರ್ಥಿಗಳು ಮೀಸಲಾತಿ ಕೋಟಾದಲ್ಲಿ ಬಂದರೆ ಅರ್ಹತೆ, ಪ್ರತಿಭೆ ಮಾನದಂಡದ ಪ್ರಶ್ನೆಯನ್ನು ಮುಂಚೂಣಿಗೆ ತಂದು ಹುಯಿಲೆಬ್ಬಿಸಲಾಗುತ್ತದೆ. ಇನ್ನೊಂದು ಅಂಶವನ್ನು ಸ್ಪಷ್ಟಪಡಿಸುವುದಾದರೆ ಇಂದು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಸಾಮಾನ್ಯ ವರ್ಗಕ್ಕೆ ನಿಗದಿಯಾಗುವ ಅಂಕಗಳಿಗಿಂತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತಗೊಳ್ಳುವ ಅಂಕ ಒಂದೆರಡು ಕಡಿಮೆ ಅಂಕಗಳಷ್ಟು ಮಾತ್ರ. ಈ ಸತ್ಯ ನಮ್ಮೆಲ್ಲರ ಕಣ್ಣೆದುರಿಗೇ ಇದ್ದರೂ ಪೂರ್ವಗ್ರಹಪೀಡಿತ ಮನಸ್ಥಿತಿಯವರು ಕಣ್ಣುತೆರೆಯಲು ಸಿದ್ಧರಿಲ್ಲ. ಅದಕ್ಕೇನು ಮಾಡುವುದು?

– ಡಾ. ಉಮಾಶಂಕರ್ ಹೆಚ್.ಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...