Homeರಾಜಕೀಯಮೇಲ್ಜಾತಿಗಳ `ಯಜಮಾನಿಕೆ’ ಮತ್ತು ಸಿದ್ರಾಮಯ್ಯನವರ ಸಣ್ಣಪುಟ್ಟ ಮಿಸ್ಟೇಕ್‍ಗಳು

ಮೇಲ್ಜಾತಿಗಳ `ಯಜಮಾನಿಕೆ’ ಮತ್ತು ಸಿದ್ರಾಮಯ್ಯನವರ ಸಣ್ಣಪುಟ್ಟ ಮಿಸ್ಟೇಕ್‍ಗಳು

- Advertisement -
- Advertisement -

ಕರ್ನಾಟಕದ ಮತದಾರ ಯಾರೂ ಗೆಲ್ಲದ ಮತ್ತು ಎಲ್ಲರೂ ಸೋತ ಸ್ಥಿತಿಯನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ರೂಪಿಸಿದ್ದಾನೆ. ಅದನ್ನು ಪ್ರಬುದ್ಧತೆ ಅನ್ನಬೇಕೋ? ಅಸಹಾಯಕತೆ ಅನ್ನಬೇಕೋ? ಮೂರ್ಖತನ ಅನ್ನಬೇಕೋ ಅರ್ಥವಾಗುತ್ತಿಲ್ಲ. ಎಲ್ಲವೂ ಸೇರಿದ ಕಲಸುಮೇಲೋಗರ. ಯಾವುದನ್ನು ಹೇಳಿದರೂ, ಅಂದುಕೊಂಡರೂ ಉಳಿದೆರಡು ಅದಕ್ಕೆ ಪೈಪೋಟಿ ನೀಡಲು ಮುಂದೆ ಬರುತ್ತವೆ. ಮೇಲ್ಜಾತಿಯ ಮನೋಧರ್ಮ ಮತ್ತು ಕೆಳಜಾತಿಯ ದೌರ್ಬಲ್ಯಗಳೆರಡೂ ಅನಾವರಣಗೊಂಡಿವೆ. ಕೆಳಜಾತಿಯ ನಾಯಕನೊಬ್ಬ ‘ಐದು ವರ್ಷ’ದ ಅವಧಿ ಪೂರೈಸಿದ್ದು ಸೋಕಾಲ್ಡ್ ಮೇಲ್ಜಾತಿಯ ಮನಸ್ಸುಗಳಿಗೆ ಇಷ್ಟವಾಗಲಿಲ್ಲ. ಅದು ಕೇವಲ ಇಷ್ಟಾನಿಷ್ಟದ ಪ್ರಶ್ನೆ ಮಾತ್ರ ಆಗಿ ಉಳಿಯಲಿಲ್ಲ. ‘ಸೋಲಿಸಲೇ ಬೇಕು’ ಎನ್ನುವ ಜಿದ್ದಾಜಿದ್ದಿನ ಕಣವಾಗಿ ಪರಿವರ್ತಿತವಾಯಿತು. ಚಾಮುಂಡೇಶ್ವರಿಯ ಫಲಿತಾಂಶ ಅದನ್ನು ಸ್ಪಷ್ಟವಾಗಿ ಬಿಚ್ಚಿಡುತ್ತದೆ.

ಮಗ ಯತೀಂದ್ರ ಜೊತೆ ಸಿದ್ದು

ಹಾಲಿ ಮುಖ್ಯಮಂತ್ರಿ ಹಾಗೂ ಅಷ್ಟೇನು ದುರಾಡಳಿತ ನೀಡದ, ಸಣ್ಣಪುಟ್ಟ ಲೋಪಗಳ ನಡುವೆಯೂ ‘ಬಹುಜನ ಹಿತಾಯ’ ಕೆಲಸ ಮಾಡಿದ ನಾಯಕನನ್ನು ದಯನೀಯವಾಗಿ ಸೋಲಿಸಿದ ಮತ್ತು ‘ಸೋಲಿಸಲೇಬೇಕು’ ಎಂದು ಒಗ್ಗಟ್ಟಾಗಿ ನಿಂತು, ಅದಕ್ಕೆ ಪರಿಶ್ರಮ ವಹಿಸಿ ಆಗು ಮಾಡಿದ ಕರ್ನಾಟಕದ ಉಭಯ ಸಮುದಾಯಗಳ ‘ಯಜಮಾನಿಕೆ’ಯ ಸ್ವರೂಪ ಗೋಚರವಾಗುತ್ತದೆ. ಆದರೆ, ಅದಕ್ಕಿಂತ ವಿಚಿತ್ರ ಎಂದರೆ ಸೋಕಾಲ್ಡ್ ಕೆಳಜಾತಿ ಮತ್ತು ಮಧ್ಯಮ ವರ್ಗದ ಜನ ಅಪಾಯ ಅರಿಯದೇ ಶೋಷಕರ ಜೊತೆಗೇ ಹೋಗುವ ‘ದೌರ್ಬಲ್ಯ’. ವರುಣಾ ವಿಧಾನಸಭಾ ಕ್ಷೇತ್ರವನ್ನ ಮಗನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿಯತ್ತ ಮುಖ ಮಾಡುವ ‘ಸ್ವಾರ್ಥ’ ಸಿದ್ದರಾಮಯ್ಯನವರ ತಲೆಗೆ ಹೇಗೆ? ಯಾಕೆ ಹೊಕ್ಕಿತೋ ಗೊತ್ತಿಲ್ಲ. ಅದು ಅವರನ್ನು ಮತ್ತು ಅವರ ಪಕ್ಷವನ್ನು ಸೋಲಿನ ಬಾಗಿಲಿಗೆ ತಂದು ನಿಲ್ಲಿಸಿದೆ. ಸಿದ್ದರಾಮಯ್ಯ ಸ್ವಲ್ಪ ಉದಾರವಾಗಿ ವರ್ತಿಸಿದ್ದರೆ ಇಂತಹ ಸ್ಥಿತಿ ಉದ್ಭವ ಆಗುವ ಸಾಧ್ಯತೆಗಳು ಕಡಿಮೆ ಆಗಿರುತ್ತಿದ್ದವು. ಭಾವನಾತ್ಮಕ ಮೇಲುಗೈ ಸಾಧಿಸುವುದಕ್ಕೆ ಸ್ವತಃ ಸಿದ್ದರಾಮಯ್ಯ ಅವಕಾಶ ಮಾಡಿಕೊಟ್ಟರು. ಅದಕ್ಕೆ ಸ್ವತಃ ಅವರೂ ಸೇರಿದಂತೆ ಕಾಂಗ್ರೆಸ್ ಅದಕ್ಕಿಂತ ಹೆಚ್ಚಾಗಿ ರಾಜ್ಯದ ಜನ ತುಂಬಾ ದುಬಾರಿ ಬೆಲೆ ತೆರ ಬೇಕಾಗಿದೆ. ರಾಜಕೀಯವೂ ಒಂದು ಆಟ.

ಇಲ್ಲಿ ಎಲ್ಲವೂ ನನ್ನದೇ ಆಗಬೇಕೆಂದರೆ ಆಗುವುದಿಲ್ಲ. ಕೆಲವೊಮ್ಮೆ ಬಿಟ್ಟು ಕೊಡುವ ದೊಡ್ಡ ಮನಸ್ಸೂ ಮಾಡಬೇಕಾಗುತ್ತದೆ. ಎಂದೂ ಇಲ್ಲದ ರಾಜಕೀಯಕ್ಕೆ ಮಗನನ್ನು ತರುವ ಆಸೆ, ಪುತ್ರ ವ್ಯಾಮೋಹ ಯಾಕೆ ಬೇಕಿತ್ತು? ಕಾಂಗ್ರೆಸ್‍ನ ಕುಟುಂಬ ರಾಜಕಾರಣವನ್ನು ಟೀಕೆ ಮಾಡುವ ಸ್ಥಿತಿಯನ್ನು ಯಾವ ರಾಜಕೀಯ ಪಕ್ಷವೂ, ನಾಯಕರೂ ಇಂದು ಉಳಿಸಿಕೊಂಡಿಲ್ಲ. ಸ್ವತಃ ಸಮಾಜವಾದಿ ಎಂದು ಭಾವಿಸಿರುವ ಸಿದ್ದರಾಮಯ್ಯ ಸೈದ್ಧಾಂತಿಕವಾಗಿ ಕುಟುಂಬ ರಾಜಕಾರಣ ವಿರೋಧಿ ನೆಲೆಯವರು. ಕುಟುಂಬ ರಾಜಕಾರಣದ ಕಾರಣಕ್ಕಾಗಿಯೇ ಅಪಾರ ಪ್ರಮಾಣದ ನಷ್ಟ ಅನುಭವಿಸಿದವರು. ಕೈ ಸುಟ್ಟುಕೊಂಡವರು. ‘ಬೆಂಕಿ’ಯ ಅನುಭವ ಪಾಠ ಕಲಿಸದಿದ್ದರೆ- ಕಲಿಯದಿದ್ದರೆ ಹೇಗೆ?

ಸೋಲುವುದಕ್ಕಿಂತ ಸೋಲಿನ ಭೀತಿ ಹೆಚ್ಚು ಅಪಾಯಕಾರಿ. ಚಾಮುಂಡೇಶ್ವರಿಯ ಅಪಾಯದ ಮುನ್ಸೂಚನೆಗೆ ಇದ್ದ ಕಾರಣ ತುಂಬಾ ಸ್ಪಷ್ಟ. ಮೇಲ್ಜಾತಿ- ಮೇಲ್ವರ್ಗಗಳು ಸೋಲಿಸಲು ಕಟಿಬದ್ಧವಾಗಿವೆ ಎಂಬುದರ ವಾಸನೆ ಬಂದಿತ್ತು. ಅದು ರಾಜ್ಯದಾದ್ಯಂತ ಇದ್ದ- ಇರಬಹುದಾದ ಅತೃಪ್ತಿಯ ಮೇಲೆ ಎಂದು ಅರ್ಥಮಾಡಿಕೊಳ್ಳದೇ ಇದ್ದರೆ ಹೇಗೆ? ಯಡಿಯೂರಪ್ಪ- ದೇವೇಗೌಡರು ತೋರಿದ ಧಾಷ್ಟ್ರ್ಯವನ್ನು ಸಿದ್ದರಾಮಯ್ಯ ಕೂಡ ತೋರಿಸಿದ್ದು ‘ಹುಂಬತನ’ ಎನ್ನದೇ ವಿಧಿಯಿಲ್ಲ. ಉಭಯ ನಾಯಕರಿಗೆ ಇದ್ದ ಜಾತಿಯ ಬಲ ಹಾಗೂ ಅದೇ ಪ್ರಮಾಣದಲ್ಲಿ ಇದ್ದ- ಇರುವ ಇಮೇಜ್ ಬಗ್ಗೆ ‘ಕ್ಯಾರೇ’ ಅನ್ನದ ಮನೋಭಾವ ಸಿದ್ದರಾಮಯ್ಯಗೆ ಇಲ್ಲ. ಮತ್ತು ಅದು ಬರುವುದೂ ಇಲ್ಲ.

ಎದುರಾಳಿಗೆ ಕೈಕಟ್ಟಲು ಅವಕಾಶ ಮಾಡಿಕೊಟ್ಟದ್ದು ಸಿದ್ದರಾಮಯ್ಯನವರ ಲೋಪ. ರಾಜಕೀಯ ಆಟದಲ್ಲಿ ಸಂದೇಶ- ಸೂಚನೆಗಳೇ ಪ್ರಾಬಲ್ಯ ಮೆರೆಯುತ್ತವೆ. ಅದು ನಲವತ್ತು ವರ್ಷ ರಾಜಕಾರಣ ಮಾಡಿದವರಿಗೆ ಅರ್ಥ ಆಗಿಲ್ಲ ಎಂದರೆ ಹೇಗೆ ನಂಬುವುದು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಖ್ಯಾಬಲವೇ ಮುಖ್ಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಬಹುಜನರು ‘ಒಗ್ಗಟ್ಟು’ ಆಗಲು ಸಾಂಸ್ಕೃತಿಕ-ಸಾಮಾಜಿಕ ಕಾರಣಗಳಿಲ್ಲ. ಆದರೆ, ಪ್ರಬಲರಿಗೆ ಸಂಖ್ಯಾಬಲದ ಕೊರತೆ ಇದ್ದರೂ ‘ಪ್ರಾಬಲ್ಯ’ ತೋರಿಸುವುದಕ್ಕೆ ಹಿಂದೆ ಬೀಳುವುದಿಲ್ಲ. ಬೇಟೆಯಾಡುವ ಹುಲಿ ತಾನು ದುರ್ಬಲನಾದರೂ ಹಾಗೆ ಭಾವಿಸುವುದಿಲ್ಲ. ಅದು ಭೀತಿ ಉಂಟು ಮಾಡುವ ಮೂಲಕವೇ ಮೇಲುಗೈ ಸಾಧಿಸಲು ಬಯಸುತ್ತದೆ. ಮೇಲ್ಜಾತಿ-ಮೇಲ್ವರ್ಗಗಳ ತಂತ್ರ ಕೂಡ. ಹುಲಿ ಕಳೆಗುಂದಿದೆ ಎಂದು ಗೊತ್ತಾದರೆ ಜಿಂಕೆಗಳು ಸವಾರಿ ಮಾಡುತ್ತವೆ ಎಂಬ ಮನೋಭಾವವೇ ಆಕ್ರಮಣಾತ್ಮಕ ಧೋರಣೆಗೆ ಕಾರಣವಾಗುತ್ತದೆ. ಹುಲಿಗಳು ಒಂದಾಗುವುದು ದಾಳಿ ಮಾಡುವುದಕ್ಕಾದರೆ, ಜಿಂಕೆಗಳು ಒಂದಾಗುವುದು ರಕ್ಷಣೆಗಾಗಿ. ಜಿಂಕೆಗಳು ಒಂದಾಗಿಯೂ ಹುಲಿಯ ಮೇಲೆ ‘ಸವಾರಿ’ ಮಾಡಲು ಆಗುವುದಿಲ್ಲ. ಹುಲಿ-ಜಿಂಕೆಯ ನೈಸರ್ಗಿಕ ಆಟ- ಜೀವನ್ಮರಣದ ಹೋರಾಟ ಸಿದ್ದರಾಮಯ್ಯನವರಿಗೆ ಗೊತ್ತಿರದ ಸಂಗತಿಯೇನಲ್ಲ. ಪ್ರಬಲ ಸಮುದಾಯಗಳ ಧ್ರುವೀಕರಣದ ‘ಭಯ’ವೂ ದುರ್ಬಲರನ್ನು ಒಗ್ಗಟ್ಟಾಗಿಸಲು ಅವಕಾಶ ಕಲ್ಪಿಸುತ್ತದೆ. ಅದು ಪೊಲರೈಸೇಷನ್‍ನ ವೇಗವನ್ನು ತೀವ್ರಗೊಳಿಸುತ್ತದೆ. ಒಕ್ಕಲಿಗರು ಜನತಾದಳದ ಜೊತೆಗೆ, ಲಿಂಗಾಯತರು ಬಿಜೆಪಿಯ ಜೊತೆಗೆ ಎಂಬ ಭಾವನಾತ್ಮಕ ಸಂಗತಿ ಎಲ್ಲರಿಗೂ ಗೊತ್ತಿದ್ದ ತೆರೆದಿಟ್ಟ ಸತ್ಯವಾಗಿತ್ತು. ಕರ್ನಾಟಕದ ರಾಜಕಾರಣದ ಬಗ್ಗೆ ಗೊತ್ತಿರುವವರಿಗೆ ಇದು ಹೊಸ ಸಂಗತಿಯೇನಲ್ಲ. ‘ಜಾತಿ ಜನಗಣತಿ’ಯ ಅಸ್ತ್ರ ಬಳಸಿದರೆ ಲಿಂಗಾಯತ-ಒಕ್ಕಲಿಗರೇತರರು ಒಂದಾಗುವ ಅವಕಾಶ ಸಾಧ್ಯವಾಗುತ್ತಿತ್ತು.

ಕರ್ನಾಟಕದಲ್ಲಿ ಲಿಂಗಾಯತರು ಇದ್ದಾರೆ ಎಂದು ಭಾವಿಸಿದ್ದೇ ಸರಿಯಾಗಿರಲಿಲ್ಲ. ಬಸವಪ್ರಣೀತ ಲಿಂಗಾಯತ ನಗಣ್ಯವೆನಿಸುವಷ್ಟು ಅಲ್ಪಸಂಖ್ಯಾತ. ಇರುವವರೆಲ್ಲ ಸೈದ್ಧಾಂತಿಕವಾಗಿ- ಭಾವನಾತ್ಮಕವಾಗಿ ವೀರಶೈವರು. ಬಸವಣ್ಣ ಅವರಿಗೆ ಒಂದ ಸಾಂಸ್ಕೃತಿಕ ‘ಐಕಾನ್’. ಅದೂ 50-60ರ ದಶಕದಲ್ಲಿ ಐಡೆಂಟಿಟಿ ಕ್ರೈಸಿಸ್‍ನಿಂದ ಹೊರಬರುವುದಕ್ಕಾಗಿ ಹುಟ್ಟಿದ ಸಂಕೇತ. ಹನ್ನೆರಡನೇ ಶತಮಾನದ ಬಸವಣ್ಣನನ್ನು 2008ರ ವೇಳೆಗಾಗಲೇ ಕೈಬಿಟ್ಟು ‘ದೂರ’ ನಡೆದುಬಿಟ್ಟಿದ್ದರು. ದೀನ-ದುರ್ಬಲರ ಪರವಾಗಿ ಮಾತನಾಡುವ ಬಸವ ‘ಪ್ರಾಬಲ್ಯ’ ಮೆರೆಯುವುದಕ್ಕೆ ಅಗತ್ಯ ಎಂದು ಅನ್ನಿಸಿರಲಿಲ್ಲ. ಅದೇ ಕಾರಣಕ್ಕಾಗಿಯೇ ಬಸವಣ್ಣ ಮೇಲಿನ ಪ್ರೀತಿಗಿಂತ ‘ಜಾತಿ’ಯ ಪ್ರೇಮ ಹೆಚ್ಚಾಗಿ ಅದು ಬಿಜೆಪಿ ಪರವಾದ ನಿಲುವು ಆಗಿ ಪರಿವರ್ತನೆಗೊಂಡಿತ್ತು.

ಮೇಲ್ಜಾತಿಯವರಿಗೆ ಮಾತ್ರ. ಸ್ವಜನ ಪಕ್ಷಪಾತ ಮಾಡುವ- ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುವ ‘ಅಧಿಕಾರ’ ಮತ್ತು ‘ಹಕ್ಕು’ ಆಯಾಚಿತವಾಗಿ ದೊರೆತಿದೆ. ಅದನ್ನೇ ಸಿದ್ದರಾಮಯ್ಯ ಕೂಡ ಮಾಡಿದರೆ ಪಾಪಾ ಮೇಲ್ಜಾತಿಗಳು ಹೇಗೆ ತಾನೆ ಸಹಿಸಿಕೊಂಡಾವು? ಮೇಲ್ಜಾತಿಯ ಜನ ಜಾತಿಯ ಜನ ಒಂದೆಡೆ ಸೇರಿದರೆ ‘ಸಾಂಸ್ಕೃತಿಕ’ ಕಾರಣಕ್ಕಾಗಿ ಎಂದು ವ್ಯಾಖ್ಯಾನಿಸಲಾಗುತ್ತದೆ. ಅದೇ ‘ಕೆಳಜಾತಿ’ (ಪ್ರಬಲರಲ್ಲದ ಸಮುದಾಯ)ಯ ಜನ ಸೇರಿದರೆ ಅದು ‘ಜಾತೀಯತೆ’ ಆಗುತ್ತದೆ. ಶಬ್ದಗಳು ರೂಲ್ ಮಾಡುತ್ತವೆ. ಹೌದು. ಅಲ್ಲಮ ಹೇಳಿದಂತೆ ಭಾಷೆಯೆಂಬುದು ‘ಪ್ರಾಣ ಘಾತಕ’. ಭಾವನೆಗಳಿಗಿಂತ ಭಾಷೆಗೇ ಹೆಚ್ಚು ಮಹತ್ವ.

ಸಿದ್ಧರಾಮಯ್ಯ ಎಡವಿದರು. ಕರ್ನಾಟಕದ ಬಹುಜನರು ‘ಆತಂಕ’ಕ್ಕೆ ಒಳಗಾಗಿದ್ದಾರೆ. ಇರುವಾಗ ‘ವಸ್ತು’ವಿನ ಮಹತ್ವ ಗೊತ್ತಾಗುವುದಿಲ್ಲ. ಅರಸು ಜೊತೆ ಹೋಲಿಕೆ ಮಾಡಬಾರದು ಎಂದು ಎಷ್ಟೇ ಹಠ ಹಿಡಿದರೂ ಮಾಡದೇ ಇರಲು ಸಾಧ್ಯವಾಗುತ್ತಿಲ್ಲ. ಹಿಂದೆ ಅರಸು ಇದ್ದಾಗಲೂ ಹೀಗೆಯೇ ಆಗಿತ್ತು. ಈಗ ಸಿದ್ದರಾಮಯ್ಯ ಅವರಿಗೆ ಕೂಡ ಅದೇ ಆಗಿದೆ. ನಮಗೆ ಅದು ಇತಿಹಾಸ-ಚರಿತ್ರೆಯ ಪುಟ. ಆದರೆ, ಸ್ವತಃ ಅರಸು ರಾಜಕಾರಣ ಮತ್ತು ಅದಕ್ಕಾಗಿ ದೊರೆತ ಪ್ರತಿಫಲ ಸಿದ್ಧರಾಮಯ್ಯನವರಿಗೆ ವರ್ತಮಾನದ ಅನುಭವ ಆಗಿತ್ತು. ಸಿದ್ದರಾಮಯ್ಯನವರ ವಿರುದ್ಧದ ಅಲೆ ಸುಪ್ತವಾಗಿ, ಜೀವಂತವಾಗಿ ಉಳಿಯುವಂತೆ ಮಾಡುವಲ್ಲಿ ಪ್ರಬಲ ಸಮುದಾಯಗಳು ಯಶ ಕಂಡಿವೆ ಎಂಬುದೇ ಸದ್ಯದ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...