Homeಮುಖಪುಟಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ...’

ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ: ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ…’

- Advertisement -
- Advertisement -

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಢಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‌ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‌ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

`ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ’ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‌ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಅವರು, ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು’ ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.

ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ ಎಂದಿರುವ ಅಗರ್ವಾಲ್ ಇದಕ್ಕೆ ಸಾಕ್ಷಿಯಾಗಿ ಸಂಘ ಪರಿವಾರದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, `300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‌ಬರೇಲಿಯಲ್ಲಿ ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.

ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ.  ಅದ್ವಾನಿಯವರನ್ನು  ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಯಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‌ವಾಲ್ ಹೇಳಿದ್ದಾರೆ.

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ’ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‌ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.

(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...