Homeಕರ್ನಾಟಕಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ...

ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ ಟಿವಿ!

- Advertisement -
| ನಾನುಗೌರಿ ಡೆಸ್ಕ್ |
ಕಳೆದ ನಾಲ್ಕೈದು ವರ್ಷಗಳಿಂದ ಮಾಧ್ಯಮಗಳು ಬಿಜೆಪಿ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿರುವುದು ಸರ್ವೇಸಾಮಾನ್ಯವಾಗೊ ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕನ್ನಡ ಮಾಧ್ಯಮಗಳಂತೂ ತಮಗೆ ಸರಿಸಾಟಿ ಯಾರು ಇಲ್ಲವೆಂಬಂತೆ ಮೋದಿಯ ಗುಣಗಾನ ಮಾಡುವುದಕ್ಕೆ ಪೈಪೋಟಿಗೆ ಬಿದ್ದಿವೆ. ಬೆಳಗ್ಗೆಯ ಸಮಯದಲ್ಲಿ ಸುಪ್ರಭಾತ, ಭಕ್ತಿದೇಗುಲಗಳಂತ ಮೌಢ್ಯತುಂಬುವ ಕಾರ್ಯಕ್ರಮ ಕೊಡುತ್ತಿದ್ದ ಮಾಧ್ಯಮಗಳು ಈಗ ಮೋದಿಯ ಮೌಢ್ಯವನ್ನು ತುಂಬಲು ಶುರುವಿಟ್ಟಿವೆ. ಇದರಲ್ಲಿ ಸುವರ್ಣ ಟಿವಿಯಂತೂ ಮೋದಿಯ ಹೆಸರನೇ ಜಪಿಸುವುದರಲ್ಲಿ ತಲ್ಲೀನವಾಗಿವೆ.
ಅಂದಹಾಗೆ ಮೊನ್ನೆ ಸುವರ್ಣ ನ್ಯೂಸ್‍ನಲ್ಲಿ ರಾತ್ರಿಯ ಸುವರ್ಣ ಫೋಕಸ್ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ಇಂದಲೇ ಜಾಹೀರಾತು ನೀಡಲು ಆರಂಭಿಸಿದ್ದರು. ಅಂತದ್ದೇನಿದೆ ಎಂದು ನೋಡಿದ್ರೆ ಅದರ ಟೈಟಲ್ ‘ಬಾಹುಬಲಿ ಮೋದಿ’ ಎಂದಿತ್ತು.
ಅಬ್ಬಾ… ನಮ್ ಪ್ರಧಾನಿ ಮೋದಿ ಏನಾದ್ರು ಬಾಹುಬಲಿ 3 ಸಿನಿಮಾ ಏನಾದ್ರು ಮಾಡಿದ್ದಾರ ಅಥವಾ ಬಂಡೆ ಮೇಲೆ ಮಲಗಿ ಯೋಗ ಮಾಡ್ತಿದ್ದೋರು ಆ ಬಂಡೆನೇನಾದ್ರು ಎತ್ತಿ ಹೆಗಲ ಮೇಲೆ ಇಟ್ಕೊಬಿಟ್ರಾ ಅಂತ ರಾತ್ರಿವರೆಗೆ ಕಾದು ನೋಡಿದ್ವಿ. ಅಲ್ಲಿ ನೋಡಿದ್ರ ಆ ವಿಷ್ಯಕ್ಕೂ ಮೋದಿಗೂ ಸಂಬಂಧನೇ ಇರಲಿಲ್ಲ. ಆದ್ರು ಮೋದಿ ಕಾರ್ಯಕ್ರಮದ ಹೀರೋ ಆಗಿದ್ದು ಸೋಜಿಗ.
ಆ ಕಾರ್ಯಕ್ರಮದ ವಿಷಯ ಬಾಹ್ಯಾಕಾಶ ಸಮರದ ಬಗ್ಗೆ ಇತ್ತು. ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ. ಸೂಪರ್ ಸುಪ್ರಿಂ ರಾಷ್ಟ್ರಗಳಿಗೆ ಮೋದಿ ಹಾಕ್ತಿದ್ದಾರೆ ಚಾಲೆಂಜ್ ಎಂದೆಲ್ಲಾ ಬಿಲ್ಡಪ್ ಕೊಡಲಾಗುತ್ತಿತ್ತು. ನೋಡುಗರಲ್ಲಿ ಅದೆಂತಾ ಬಟನ್ ಇರಬಹುದು ಅದು, ಮೋದಿ ಏನಾದ್ರು ಕಂಡುಹಿಡಿದ್ರಾ ಎಂಬ ಕುತೂಹಲ ಕೆರಳಿಸಿತ್ತು.
ಮೊದಲನೆಯದಾಗಿ ಇಂದು ಎಲ್ಲಾ ದೇಶಗಳು ಯುದ್ಧ ಸಾಮಗ್ರಿಗಳಿಗೆ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದು ಗೊತ್ತೇ ಇದೆ. ಅದರಲ್ಲಿ ಭಾರತವೂ ಒಂದು. ಭಾರತವು ಪ್ರಾನ್ಸ್, ರಷ್ಯಾದಂತಹ ದೇಶಗಳಿಂದ ಯುದ್ಧ ವಿಮಾನಗಳು, ತಂತ್ರಜ್ಞಾನಗಳನ್ನು ಪಡೆದುಕೊಳ್ಳುತ್ತಿದೆ. ಅಂತದ್ದೇ ವಿಮಾನ ಖರೀದಿಯ ಡೀಲ್‍ನಲ್ಲಿ ಮೋದಿ ಸಾಹೇಬರ ಪಾತ್ರ ಎಂತದ್ದು ಅಂತ ಇಡೀ ಜಗತ್ತೇ ನೋಡಿದೆ.
ಇತ್ತೀಚೆಗೆ ಯುದ್ದ ತಂತ್ರಜ್ಞಾನಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು ಸಾವಿರಾರು ಕಿಲೋ ಮೀಟರ್ ದೂರದ ಸ್ಥಳಗಳಿಗೆ ತಾವಿರುವ ಜಾಗದಿಂದಲೇ ಬಾಂಬ್ ಉಡಾಯಿಸುವ ತಂತ್ರಜ್ಞಾನ ಬಂದು ವರ್ಷಗಳೇ ಕಳೆದಿವೆ. ಅಂತಹ ತಂತ್ರಜ್ಞಾನವನ್ನು ಭಾರತ ಕೂಡ ಪಡೆದುಕೊಂಡಿದೆ. ಇದರಲ್ಲಿ ಅಂತಹ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ ಅದರ ಕ್ರೆಡಿಟ್ ಕೊಡುವುದು ಸಾಮಾನ್ಯ. ಆದರೆ ಒಂದು ಬಟನ್ ಒತ್ತಿದ್ರೆ ಸಾಕು ಅಂತ ಹೇಳುವಾಗ ಅಲ್ಲಿ ಮೋದಿಯ ಪಾತ್ರವೇನೂ ಇಲ್ಲ. ಅದರ ಕ್ರೆಡಿಟ್ ಅಂತಹ ತಂತ್ರ ಸಂಶೋಧಿಸಿದವರಿಗೆ ಸೇರಿದ್ದು.
ಇನ್ನು ಸುಪ್ರಿಂ ರಾಷ್ಟ್ರಗಳಿಗೆ ಚಾಲೆಂಜ್ ಹಾಕ್ತಿದ್ದಾರೆ ಮೋದಿ ಎಂದು ಬೇರೆ ಹೇಳಲಾಗಿತ್ತು. ಇಂದಿಗೂ ನೆರೆ ರಾಷ್ಟ್ರಗಳಿಂದ ಯುದ್ದ ಅಸ್ತ್ರಗಳನ್ನ ಕೊಂಡುಕೊಳ್ಳುತ್ತಿರುವಾಗ, ಇಡೀ ವಿಶ್ವಕ್ಕೆ ಯುದ್ದಾಸ್ತ್ರಗಳನ್ನ ಸಪ್ಲೇ ಮಾಡುತ್ತಿರುವ ರಾಷ್ಟ್ರಗಳಲ್ಲಿ ಅಂತಹ ಅಸ್ತ್ರಗಳು ಅದೆಷ್ಟಿರಬಹುದು ಎಂಬ ಅರಿವೂ ಈ ಸುವರ್ಣ ಚಾನೆಲ್‍ನವರಿಗೆ ಇದ್ದಂತಿಲ್ಲ.
ಯುದ್ದ ವಿಚಾರ ನೋಡುವುದಾದರೆ ಅದರಲ್ಲಿ ಸೈನ್ಯದ ಪಾತ್ರದ ಮಹತ್ವದ್ದು, ಯುದ್ದ ಮಾಡಿ ಎಂದು ಹೇಳುವಷ್ಟು ಸುಲಭವಾಗಿ ಯುದ್ದ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಯುದ್ದವನ್ನು ಗೆಲ್ಲುವ ಸೈನಿಕರಿಗೆ ಆ ಕಾರ್ಯಕ್ರಮದಲ್ಲಿ ಯಾವ ಕ್ರೆಡಿಟ್ಟೂ ಇರಲಿಲ್ಲ.
ಇಷ್ಟೆಲ್ಲಾ ಇದ್ದರೂ ಕೂಡ ಸುವರ್ಣ ಚಾನೆಲ್ ಮೋದಿಯೇ ಯುದ್ಧಭೂಮಿಯಲ್ಲಿ ನಿಂತು ಯುದ್ಧ ಮಾಡಿ ಗೆದ್ದಿರುವಂತೆ, ಮೋದಿಯೇ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಂತೆ ಮೋದಿಯ ಬಗ್ಗೆ ಬಿಲ್ಡಪ್ ಕೊಡುತ್ತಿರುವುದು ಸೈನ್ಯಕ್ಕೆ ಮಾಡುವ ಅವಮಾನವೂ ಹೌದು. ವಿಶ್ಲೇಷಣೆ, ಮೌಲ್ಯಮಾಪನ, ಪ್ರತಿಕಾ ನೀತಿಗಳನ್ನೇ ಮರೆತಿರುವ ಇಂತಹ ನ್ಯೂಸ್ ಚಾನೆಲ್‍ಗಳು ಇನ್ನೆಂಥಾ ಸುದ್ದಿಯನ್ನು ಬಿತ್ತರಿಸಲು ಸಾಧ್ಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Super news from Nanu gouri it is an excellent news paper and it should cover all district of karnataka because other papers baise papers and TV channels…..

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....