Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...