Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...