Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...