Homeಮುಖಪುಟಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

ಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

- Advertisement -
- Advertisement -

ಕಳೆದ 70 ವರ್ಷಗಳಿಂದ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮತ್ತು ಇನ್ನಿತರ ರಕ್ಷಣಾ ಹಾಗೂ ವೈಜ್ಞಾನಿಕ ಸಂಸ್ಥೆಗಳು ಅಭೂತಪೂರ್ವ ಸಾಧನೆಗಳನ್ನು ಮಾಡುತ್ತಲೇ ಬಂದಿವೆ. ಪ್ರಪಂಚದಲ್ಲಿ ಅಮೆರಿಕಾ, ರಷ್ಯಾ ಮತ್ತು ಚೀನಾದ ನಂತರ ಭಾರತವೇ ಇದರಲ್ಲಿ ಮುಂಚೂಣಿಯಲ್ಲಿದೆ. ಅಂತಹ ಸಾಧನೆಗಳನ್ನು ಮಾಡಿದಾಗಲೆಲ್ಲಾ ಭಾರತದ ಜನತೆಗೆ ದೇಶದ ಶಕ್ತಿಯ ಕುರಿತ ಹೆಮ್ಮೆ ಎನಿಸಿದೆ. ಅದರಲ್ಲೂ ಉಪಗ್ರಹಗಳ ಉಡಾವಣೆಯು ದೇಶದ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದಂತೆಯೂ ಹಲವು ಅನುಕೂಲಗಳೂ ಆಗಿವೆ.

ಅಂತಹ ಸಾಧನೆ ಆದಾಗಲೆಲ್ಲಾ ಸಂಬಂಧಿಸಿದ ತಾಂತ್ರಿಕ ಸಂಸ್ಥೆಯ ಮುಖ್ಯಸ್ಥರುಗಳು ಪತ್ರಿಕಾಗೋಷ್ಠಿ ಮಾಡಿ ದೇಶದ ಜನರಿಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಏಕೆಂದರೆ, ನಿಜವಾದ ಸಾಧನೆ ಮಾಡಿರುವವರು ಅವರೇ ಆಗಿರುತ್ತಾರೆ. ಒಂದೊಂದು ಸಾಧನೆಗೂ ದಶಕಗಳ ಕಾಲದ ಯೋಜನೆ, ಅಧ್ಯಯನ, ಸಂಶೋಧನೆ ಮತ್ತು ಇನ್ನಿತರ ತಾಂತ್ರಿಕ ಪ್ರಯೋಗಗಳು ನಡೆದಿರುತ್ತವೆ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಬರುತ್ತಾರೆ, ಹೋಗುತ್ತಾರೆ.

ಆದರೆ, ಈ ಸಾರಿ ನರೇಂದ್ರ ಮೋದಿಯವರು ಆ ಸಂಪ್ರದಾಯವನ್ನು ಮುರಿದಿದ್ದಾರೆ. ಇದು ದೇಶದ ವಿಜ್ಞಾನಿಗಳ ಸಾಧನೆಯನ್ನೂ ರಾಜಕೀಯಕರಣಗೊಳಿಸುವ ತಪ್ಪು ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಸಂಸ್ಥೆಗಳ ಒಳಗೂ ರಾಜಕೀಯವನ್ನು ಎಳೆದುಕೊಂಡು ಹೋಗಲಿದೆ. ಇದರ ಪರಿಣಾಮಗಳು ದೇಶದ ಹಿತದೃಷ್ಟಿಯಿಂದ ಅಷ್ಟು ಒಳ್ಳೆಯದಾಗಿರುವುದಿಲ್ಲ ಎಂಬುದರಲ್ಲಿ ಸಂಶಯವಿಲ್ಲ.

ಎರಡನೆಯದಾಗಿ, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿದ್ದು ಈ ಸಂದರ್ಭದಲ್ಲಿ ಇಂತಹ ಘೋಷಣೆಯನ್ನು ರಾಜಕೀಯ ಅಧಿಕಾರದ ಸ್ಥಾನ ಹಿಡಿದಿರುವ ವ್ಯಕ್ತಿ ಮಾಡುವುದು ನೀತಿಯೂ ಅಲ್ಲ; ಸಂಹಿತೆಯೂ ಅಲ್ಲ. ಆದರೆ, ಐಆರ್‍ಎಸ್ (ರೆವಿನ್ಯೂ ಸರ್ವೀಸ್) ಇಲಾಖೆಯಲ್ಲಿದ್ದ ತಮ್ಮ ಪರವಾದ ವ್ಯಕ್ತಿಯೊಬ್ಬರನ್ನು ಚುನಾವಣಾ ಆಯುಕ್ತರನ್ನಾಗಿಸಿರುವ ಬಿಜೆಪಿಗೆ ಯಾವ ನಿಯಮಗಳೂ ಅನ್ವಯಿಸುವುದಿಲ್ಲ.

ಒಟ್ಟಿನಲ್ಲಿ ಇಂದು ದೇಶದ ಪಾಲಿಗೆ ಮತ್ತೊಂದು ದೊಡ್ಡ ಸಾಧನೆ ಸಂಭವಿಸಿದೆ – ದೇಶದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಬೇಕು

ದೇಶದ ಪ್ರಜಾತಾಂತ್ರಿಕ ನೀತಿ ಸಂಹಿತೆಯ ದೃಷ್ಟಿಯಿಂದ ಇನ್ನೊಂದು ಪೆಟ್ಟು ಬಿದ್ದಿದೆ – ದೇಶದ ವೈಜ್ಞಾನಿಕ ಇಲಾಖೆ, ತಂತ್ರಜ್ಞರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಮತ್ತೊಮ್ಮೆ ಪ್ರಧಾನಿಯೇ ಎಡವಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...