Homeಮುಖಪುಟಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

ಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

- Advertisement -
- Advertisement -

ಕಳೆದ 70 ವರ್ಷಗಳಿಂದ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮತ್ತು ಇನ್ನಿತರ ರಕ್ಷಣಾ ಹಾಗೂ ವೈಜ್ಞಾನಿಕ ಸಂಸ್ಥೆಗಳು ಅಭೂತಪೂರ್ವ ಸಾಧನೆಗಳನ್ನು ಮಾಡುತ್ತಲೇ ಬಂದಿವೆ. ಪ್ರಪಂಚದಲ್ಲಿ ಅಮೆರಿಕಾ, ರಷ್ಯಾ ಮತ್ತು ಚೀನಾದ ನಂತರ ಭಾರತವೇ ಇದರಲ್ಲಿ ಮುಂಚೂಣಿಯಲ್ಲಿದೆ. ಅಂತಹ ಸಾಧನೆಗಳನ್ನು ಮಾಡಿದಾಗಲೆಲ್ಲಾ ಭಾರತದ ಜನತೆಗೆ ದೇಶದ ಶಕ್ತಿಯ ಕುರಿತ ಹೆಮ್ಮೆ ಎನಿಸಿದೆ. ಅದರಲ್ಲೂ ಉಪಗ್ರಹಗಳ ಉಡಾವಣೆಯು ದೇಶದ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದಂತೆಯೂ ಹಲವು ಅನುಕೂಲಗಳೂ ಆಗಿವೆ.

ಅಂತಹ ಸಾಧನೆ ಆದಾಗಲೆಲ್ಲಾ ಸಂಬಂಧಿಸಿದ ತಾಂತ್ರಿಕ ಸಂಸ್ಥೆಯ ಮುಖ್ಯಸ್ಥರುಗಳು ಪತ್ರಿಕಾಗೋಷ್ಠಿ ಮಾಡಿ ದೇಶದ ಜನರಿಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಏಕೆಂದರೆ, ನಿಜವಾದ ಸಾಧನೆ ಮಾಡಿರುವವರು ಅವರೇ ಆಗಿರುತ್ತಾರೆ. ಒಂದೊಂದು ಸಾಧನೆಗೂ ದಶಕಗಳ ಕಾಲದ ಯೋಜನೆ, ಅಧ್ಯಯನ, ಸಂಶೋಧನೆ ಮತ್ತು ಇನ್ನಿತರ ತಾಂತ್ರಿಕ ಪ್ರಯೋಗಗಳು ನಡೆದಿರುತ್ತವೆ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಬರುತ್ತಾರೆ, ಹೋಗುತ್ತಾರೆ.

ಆದರೆ, ಈ ಸಾರಿ ನರೇಂದ್ರ ಮೋದಿಯವರು ಆ ಸಂಪ್ರದಾಯವನ್ನು ಮುರಿದಿದ್ದಾರೆ. ಇದು ದೇಶದ ವಿಜ್ಞಾನಿಗಳ ಸಾಧನೆಯನ್ನೂ ರಾಜಕೀಯಕರಣಗೊಳಿಸುವ ತಪ್ಪು ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಸಂಸ್ಥೆಗಳ ಒಳಗೂ ರಾಜಕೀಯವನ್ನು ಎಳೆದುಕೊಂಡು ಹೋಗಲಿದೆ. ಇದರ ಪರಿಣಾಮಗಳು ದೇಶದ ಹಿತದೃಷ್ಟಿಯಿಂದ ಅಷ್ಟು ಒಳ್ಳೆಯದಾಗಿರುವುದಿಲ್ಲ ಎಂಬುದರಲ್ಲಿ ಸಂಶಯವಿಲ್ಲ.

ಎರಡನೆಯದಾಗಿ, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿದ್ದು ಈ ಸಂದರ್ಭದಲ್ಲಿ ಇಂತಹ ಘೋಷಣೆಯನ್ನು ರಾಜಕೀಯ ಅಧಿಕಾರದ ಸ್ಥಾನ ಹಿಡಿದಿರುವ ವ್ಯಕ್ತಿ ಮಾಡುವುದು ನೀತಿಯೂ ಅಲ್ಲ; ಸಂಹಿತೆಯೂ ಅಲ್ಲ. ಆದರೆ, ಐಆರ್‍ಎಸ್ (ರೆವಿನ್ಯೂ ಸರ್ವೀಸ್) ಇಲಾಖೆಯಲ್ಲಿದ್ದ ತಮ್ಮ ಪರವಾದ ವ್ಯಕ್ತಿಯೊಬ್ಬರನ್ನು ಚುನಾವಣಾ ಆಯುಕ್ತರನ್ನಾಗಿಸಿರುವ ಬಿಜೆಪಿಗೆ ಯಾವ ನಿಯಮಗಳೂ ಅನ್ವಯಿಸುವುದಿಲ್ಲ.

ಒಟ್ಟಿನಲ್ಲಿ ಇಂದು ದೇಶದ ಪಾಲಿಗೆ ಮತ್ತೊಂದು ದೊಡ್ಡ ಸಾಧನೆ ಸಂಭವಿಸಿದೆ – ದೇಶದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಬೇಕು

ದೇಶದ ಪ್ರಜಾತಾಂತ್ರಿಕ ನೀತಿ ಸಂಹಿತೆಯ ದೃಷ್ಟಿಯಿಂದ ಇನ್ನೊಂದು ಪೆಟ್ಟು ಬಿದ್ದಿದೆ – ದೇಶದ ವೈಜ್ಞಾನಿಕ ಇಲಾಖೆ, ತಂತ್ರಜ್ಞರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಮತ್ತೊಮ್ಮೆ ಪ್ರಧಾನಿಯೇ ಎಡವಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...