Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...