Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...