Homeಅಂಕಣಗಳುಜನರ ತಲೆಗೆ ಮೌಢ್ಯದ ‘ಚಿಪ್ಪು’!

ಜನರ ತಲೆಗೆ ಮೌಢ್ಯದ ‘ಚಿಪ್ಪು’!

- Advertisement -
- Advertisement -

ಬುರುಡೆ ಜ್ಯೋತಿಷ್ಯವು ಹೇಗೆ ಹುಟ್ಟಿದ ಮಗುವನ್ನು ತಕ್ಷಣವೇ ಸುತ್ತಿಕೊಳ್ಳುತ್ತದೆ ಮತ್ತು ಹೆಸರಿನ ನೆಪದಲ್ಲಿ ಹೇಗೆ ‘ಹ್ಯೂಮನ್ ಐಡೆಂಟಿಟಿ, ಸ್ಟೇಟಸ್ ರೆಕಗ್ನಿಷನ್ ಸಿಸ್ಟಮ್’ ಎಂಬ ಅದ್ಭುತ ಆವಿಷ್ಕಾರವು ಮನುಷ್ಯನ ಜಾತಿ ಮತ್ತು ಹಿನ್ನೆಲೆಯನ್ನು ಹೇಗೆ ಗುರುತಿಸುತ್ತದೆ ಹಾಗೂ ‘ಹ್ಯೂಮನ್ ಫಿಲ್ತ್ ಸೆಪರೇಶನ್ ಎಂಡ್ ಸೆಗ್ರೆಗೇಶನ್ ಸಿಸ್ಟಮ್’ ಎಂಬ ಅವಿಷ್ಕಾರವು ಹೇಗೆ ನಿಕೃಷ್ಟ ಮಾನವರನ್ನು ಗುರುತಿಸಿ, ಜೀವನದುದ್ದಕ್ಕೂ ಪ್ರತ್ಯೇಕಿಸಿ ಮೂಲೆಗುಂಪು ಮಾಡುತ್ತದೆ ಎಂಬುದನ್ನು ಕಳೆದ ಸಂಚಿಕೆಯಲ್ಲಿ ನೋಡಿದೆವು.

ದಶಕಗಳ ಹಿಂದೆ ಪಂಚಾಂಗಗಳು ಮನೆಮನೆಯನ್ನು ಪ್ರವೇಶಿಸಲು ಅರಂಭಿಸಿದವು. ದಿನಮಾನವನ್ನು ಅಂದರೆ ಭೂಮಿ ಚಂದ್ರಾದಿ ಗ್ರಹಗಳ ಚಲನೆಯನ್ನು, ಋತುಗಳನ್ನು, ಗ್ರಹಣಗಳನ್ನು ನಿಖರವಾಗಿ ಗುರುತಿಸುವ ಈ ಪಂಚಾಂಗಗಳು ವಾಸ್ತವಿಕವಾಗಿ ನಮ್ಮ ಪುರಾತನ ಖಗೋಳಶಾಸ್ತ್ರಜ್ಞರ, ಗಣಿತಜ್ಞರ, ವೈಜ್ಞಾನಿಕ ಕೊಡುಗೆ. ಅದರೆ, ಅದರ ಪೇಟೆಂಟ್ ಪಡೆದುಕೊಂಡ ಬುರುಡೆ ಶಾಸ್ತ್ರಜ್ಞರು ಅದಕ್ಕೆ ತಮ್ಮದೇ ಆದ ಹೊಸಹೊಸ ಆವಿಷ್ಕಾರಗಳನ್ನು ಸೇರಿಸಿ, ಮುಗ್ಧ ಜನರ ‘ಇಯರ್ ಮೇಲೆ ಫ್ಲವರ್’ ಇಡಲು ಪ್ರಾರಂಭಿಸಿದರು.
ಒಂದು ಪ್ರದೇಶದ ಋತುಮಾನ, ಹವಾಮಾನ, ಮಳೆಯ ಸಮಯವನ್ನು ಗುರುತಿಸಲು ಈ ಲೆಕ್ಕಾಚಾರಗಳು ರೈತಾಪಿ ಜನರಿಗೆ ಅನುಕೂಲಕರವಾದುದರಿಂದ ಸ್ವಲ್ಪ ಅಕ್ಷರ ಬಲ್ಲವರ ಮನೆಗಳಲ್ಲಿ ಪಂಚಾಂಗಗಳು ಇರುತ್ತಿದ್ದವು. ಅವರು ಕಾಂಪೌಂಡರ್‍ಗಳಂತೆ ಉಳಿದವರ ಚಿಕ್ಕಪುಟ್ಟ ಸಮಸ್ಯೆಗಳಿಗೆ ಮದ್ದು ಕೊಡುತ್ತಿದ್ದರು. ದೊಡ್ಡ ಸಮಸ್ಯೆಗಳು ಎದುರಾದರೆ ಜೋಯಿಸರ ಬಳಿಯೇ ಹೋಗಬೇಕಾಗುತ್ತಿತ್ತು.
ಈ ಪಂಚಾಂಗಗಳಲ್ಲಿ ನಕ್ಷತ್ರಗಳ ಪಟ್ಟಿ, ಘಳಿಗೆ, ಇಲ್ಲದ ರಾಹುಕಾಲ, ಗುಳಿಕಕಾಲ, ಯಮಗಂಡ ಕಾಲ, ರಾಶಿ, ದೋಷಗಳು, ಫಲಗಳು, ಕಾಟಗಳು ಇತ್ಯಾದಿಗಳನ್ನು ಸೇರಿಸಲಾಯಿತು. ಇವರ ಅತ್ಯಂತ ದೊಡ್ಡ ಆವಿಷ್ಕಾರವೆಂದರೆ ವೈಜ್ಞಾನಿಕವಾದ ಪುರಾತನ ಆವಿಷ್ಕಾರಗಳಿಗೆ ಬುರುಡೆ ಅಪ್ಲಿಕೇಷನ್‍ಗಳನ್ನು ಕಂಡುಹಿಡಿದು, ಅವುಗಳ ಜೊತೆಗೆ ಭಯದ ಪ್ರೋಗ್ರಾಮ್ ಚಿಪ್ಪನ್ನು ಜನರ ಮೆದುಳಿಗೆ ಇಂಪ್ಲಾಂಟ್ ಮಾಡಿದ್ದು! ಇಂದಿಗೂ ವಿದ್ಯಾವಂತರೆನಿಸಿಕೊಂಡವರು ಕೂಡಾ ಇಂತಹ ಒಂದು ಚಿಪ್ಪನ್ನು ತಲೆಯೊಳಗೆ ಹೊತ್ತು ತಿರುಗುವುದನ್ನು ನೋಡಬಹುದು. ನಮ್ಮ ಮಾಧ್ಯಮದಲ್ಲೂ ಇಂತಹ ‘ಚಿಪ್ಪು’ ಹಂದಿಗಳು ದಂಡಿಯಾಗಿವೆ!
ಪಂಚಾಂಗಗಳ ದೊಡ್ಡ

ಸಾಧನೆ ಎಂದರೆ ಮನುಷ್ಯನ ಹುಟ್ಟು-ಸಾವು-ಕರ್ಮಗಳಿಗೂ ಗ್ರಹ-ನಕ್ಷತ್ರ-ಘಳಿಗೆಗಳಿಗೂ, ಭವಿಷ್ಯಕ್ಕೂ ಇಲ್ಲದ ಸಂಬಂಧ ಕಲ್ಪಿಸಿದ್ದು! ಮತ್ತು ಮಂತ್ರವಾದಿ ಕತೆಗಳಂತಹ ಕಾಲ್ಪನಿಕ ಚಿತ್ರಣವನ್ನು ಪಂಚಾಂಗಕ್ಕೆ ಸೇರಿಸಿ ಸಂವತ್ಸರಗಳು ಪಿಶಾಚಿಗಳಂತೆ ಜನರ ತಲೆಯಲ್ಲಿ ಕುಣಿಯುವಂತೆ ಮಾಡಿದ್ದು.
ನನ್ನ ಬಾಲ್ಯದಲ್ಲಿ ಪಂಚಾಂಗ ಮನೆ ಸೇರಿದ ಕೂಡಲೇ ತಂದೆಯವರು ಒಮ್ಮೆ ಕಣ್ಣಾಡಿಸಿದ್ದೇ ತಡ ಅದು ನನ್ನ ಪಾಲಾಗುತ್ತಿತ್ತು. ಯಾಕೆಂದರೆ ಶಾಲೆಗಳಲ್ಲಿ ಅಶ್ವಿನಿ, ಭರಣಿ, ಕೃತ್ತಿಕಾ… ಮುಂತಾದ ನಕ್ಷತ್ರಗಳು, ಮೇಷ, ವೃಷಭ, ಮಿಥುನ… ಮುಂತಾದ ರಾಶಿಗಳು, ಚೈತ್ರ, ವೈಶಾಖ, ಆಷಾಡ…ಇತ್ಯಾದಿ ಋತುಗಳು, ಪ್ರಭವ, ವಿಭವ, ಶುಕ್ಲ…ಇತ್ಯಾದಿ ಸಂವತ್ಸರಗಳನ್ನು ಉರುಹೊಡೆಸಲಾಗುತ್ತಿತ್ತು.
ಮಹಾ ಕುತೂಹಲಕಾರಿ, ಅದ್ಭುತ, ಭಯಾನಕವಾಗಿದ್ದುದು ಮಾತ್ರ ಚಂದಾಮಾಮ ಕತೆಗಳನ್ನು ಮೀರಿಸುವ ಸಂವತ್ಸರ ಫಲ! ಅವುಗಳಲ್ಲಿ ಆಯಾ ಸಂವತ್ಸರಕ್ಕೆ ಒಂದೊಂದು ಭಯಾನಕ ರೂಪ ಕೊಡಲಾಗುತ್ತಿತ್ತು. “ರಕ್ತಾಕ್ಷಿ ನಾಮದ ದೇವತೆಯು ಪೀತವಸ್ತ್ರಧಾರಿಣಿಯಾಗಿ, ಒಂದು ಕೈಯಲ್ಲಿ ಕಪಾಳವನ್ನೂ ಇನ್ನೊಂದು ಕೈಯ್ಯಲ್ಲಿ ಶೂಲವನ್ನೂ ಹಿಡಿದುಕೊಂಡು, ನೇರಳೆ ಬಣ್ಣದ ಹೂವಿನ ಮಾಲೆಯನ್ನು ಧರಿಸಿಕೊಂಡು, ಭಿಕ್ಷಾನ್ನವನ್ನು ಮುಕ್ಕುತ್ತಾ, ಪಶ್ಚಿಮದಿಂದ ಪೂರ್ವಾಭಿಮುಖವಾಗಿ ದಕ್ಷಿಣ ದಿಕ್ಕನ್ನು ದಿಟ್ಟಿಸುತ್ತಾ ಕತ್ತೆಯ ಮೇಲೇರಿ ಪಯಣಿಸುವಳು… ಎರಡು ಕೊಳಗ ಮಳೆಯನ್ನು ಸುರಿಸುವಳು… ಇಷ್ಟ ಧಾನ್ಯ ಗೋಧಿ… ಆಕೆ ಬಳಸಿದ ವಸ್ತುಗಳಿಗೆ ಕೊರತೆಯಾಗುವುದು… ಹೀಗೆ ಸಾಗುವ ಕತೆಯನ್ನು ಓದಿ ನಾವು ಮಕ್ಕಳು ರಾತ್ರಿ ವೇಳೆ ಭಯಾನಕ ಕನಸುಬಿದ್ದು ಬೆವರುತ್ತಿದ್ದರೆ, ಹಿರಿಯರು ಇವುಗಳಿಗೆ ತಮ್ಮದೇ ಕಾಲ್ಪನಿಕ ಅರ್ಥ ಕಲ್ಪಿಸಿ, ಈ ಸಲ ಮಳೆ ಕಡಿಮೆ, ಕಾಲ ಕಷ್ಟ, ಗೋಧಿಗೆ ಹೇಗೋ ಗೊತ್ತಿಲ್ಲ; ಭತ್ತಕ್ಕೆ ತೊಂದರೆಯಿಲ್ಲ ಎಂಬಿತ್ಯಾದಿ ಚಿಂತೆಗಳಲ್ಲಿ ಮುಳುಗಿರುತ್ತಿದ್ದರು. ಇಂತಹಾ ಒಂದು ಸಾಮೂಹಿಕ ಸನ್ಮೋಹನದ, ಸಮೂಹ ಸನ್ನಿಯ ಮನಶ್ಶಾಸ್ತ್ರೀಯ ಆವಿಷ್ಕಾರವನ್ನು ಭಾರತದ ಬುರುಡೆ ಜ್ಯೋತಿಷಿಗಳು ಬಿಟ್ಟರೆ ಪ್ರಪಂಚದಲ್ಲಿ ಬೇರಾರೂ ಮಾಡಿರಲಿಕ್ಕಿಲ್ಲ.
ಒಂದೆರಡು ಕೊಳಗ ಮಳೆ ಎಂದರೆ ಬರ ಬರುತ್ತದೆಂದೂ, ನಾಲ್ಕು ಕೊಳಗ ಎಂದರೆ ಪ್ರಳಯವೆಂದೂ ನಂಬುವ ರೈತಾಪಿ ಜನರು, ಈ ಸಂವತ್ಸರವು ಇಡೀ ಜಗತ್ತಿಗೆ ಅನ್ವಯಿಸುವುದಾದರೆ ಮರುಭೂಮಿಯಲ್ಲಿ ಕಡಿಮೆ ಮಳೆ, ಕರಾವಳಿ-ಮಲೆನಾಡುಗಳಲ್ಲಿ ಹೆಚ್ಚು ಮಳೆ ಯಾಕೆ ಸುರಿಸುತ್ತದೆ ಎಂದು ಎಂದಿಗೂ ಯೋಚಿಸುವುದಿಲ್ಲ! ಏನಾದರೂ ಹೆಚ್ಚುಕಡಿಮೆ ಅದರೆ, ಸಮಜಾಯಿಷಿ ಕೊಡಲು ಜೋಯಿಸರಿಗೆ ಮಾತ್ರ ಈ ತರ್ಕ ಅನುಕೂಲಕ್ಕೆ ಬರುತ್ತದೆ.
ನಾಲ್ಕು ಕೊಳಗ ಮಳೆ ಎಂದಿದ್ದಾಗ ತೀರಾ ಕಡಿಮೆ ಮಳೆ ಬಂದಿದ್ದನ್ನೂ, 1974ರಲ್ಲಿ ಎರಡೋ ಮೂರೋ ಕೊಳಗ ಎಂದಿದ್ದಾಗ, ನೇತ್ರಾವತಿ ನದಿಯಲ್ಲಿ ಒಂದು ಇಡೀ ತಲೆಮಾರು ಮರೆಯದ, ಪ್ರಳಯದಂತಹ ಮಳೆ ಮತ್ತು ನೆರೆ ಬಂದದ್ದನ್ನೂ ನಾನು ಕಂಡಿದ್ದೇನೆ, ಆ ಮಾತು ಬೇರೆ.
ಈ ಜೋಯಿಸರು ಒಳ್ಳೆಯ ಹಾಸ್ಯಪಟುಗಳೂ ಹೌದು! ಅದಕ್ಕಾಗಿಯೇ ಅವರು ‘ಗವಳಿ ಪತನ ಫಲ’ ಎಂದೇನೋ ಒಂದು ಶಕುನವನ್ನೂ ಕೊಡುತ್ತಿದ್ದರು. ಅಂದರೆ, ಅಕಸ್ಮಾತ್ ಹಲ್ಲಿಯೇನಾದರೂ ಮೈಮೇಲೆ ಬಿದ್ದರೆ ಯಾವ ಫಲ ಇತ್ಯಾದಿ. ಕೈಗೆ ಬಿದ್ದರೆ, ಹೆಗಲಿಗೆ ಬಿದ್ದರೆ…ಹೀಗೆ ಫಲಗಳಿರುತ್ತವೆ. ಇರುವ ಎಲ್ಲಾ ಮನೆವಾರ್ತೆ ಪ್ರಾಣಿಗಳಲ್ಲಿ ಹಲ್ಲಿ ಏಕೆ ವಿಶೇಷ ಎಂದು ನನಗಿನ್ನೂ ಒಗಟು. ಹಲ್ಲಿ ಏನಾದರೂ ಬ್ಯಾಲೆನ್ಸ್ ತಪ್ಪಿ ಜೋಕಾಲಿಯಿಂದ ಬಲೆಗೆ ಬೀಳುವ ಸರ್ಕಸಿನ ಜೋಕರ್‍ನಂತೆ ಅನ್ನದ ಪಾತ್ರೆಗೆ ಬಿದ್ದರೆ ಏನು ಫಲ ಎಂದರೆ, ತಿಂದವರಿಗೆ ವಾಂತಿ-ಬೇಧಿ ಎಂದು ಕಂಡಿದ್ದೇನೆ. ಅದರೆ ಹಲ್ಲಿ ಬೀಳುವುದಕ್ಕೂ ಭವಿಷ್ಯಕ್ಕೂ ಏನು ಸಂಬಂಧ? ಆಗ ಭವಿಷ್ಯದ ಮೇಲೆ ಪ್ರಭಾವ ಬೀರುವ ಗ್ರಹ, ನಕ್ಷತ್ರಗಳು ರಜೆ ಹಾಕಿರುತ್ತವೆಯೆ!?
ನಾನು ಏಳನೇ ತರಗತಿಯಲ್ಲಿರುವಾಗ ಹಲ್ಲಿ ಪತನದ ಪರಿಣಾಮವನ್ನು ಕಣ್ಣಾರೆ ಕಾಣುವಂತಾಯಿತು. ಆ ಭಯಾನಕ ಘಟನೆ ನನ್ನ ಮನಸ್ಸಿನಲ್ಲಿ ಅಚ್ಚೊತ್ತಿದಂತಿದೆ! ನಮ್ಮದು ಅಗಲೇ ಏಳ್ನೂರು ವಿದ್ಯಾರ್ಥಿಗಳಿದ್ದ ಅತ್ಯಂತ ಹಳೆಯ ಖಾಸಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆ! ಭಾರಿ ಕಟ್ಟಡ, ಇಪ್ಪತ್ತೈದು ಅಡಿ ಮೀರಿದ ಛಾವಣಿ.
ಒಂದು ದಿನ ಬೋಳು ತಲೆಯ ಒಬ್ಬರು ಮೇಷ್ಟ್ರು ಪಾಠ ಮಾಡುತ್ತಿದ್ದರು. ಮೇಲ್ಜಾತಿಗೆ ಸೇರಿದ ಅವರು ಮಕ್ಕಳನ್ನು ಜಾತಿ-ಧರ್ಮದ ಹೆಸರೆತ್ತಿ ಅವಮಾನಿಸುತ್ತಿದ್ದರಿಂದ, ಹೊಡೆಯುತ್ತಿದ್ದುದರಿಂದ ಅವರನ್ನು ಕಂಡರೆ ನಮಗ್ಯಾರಿಗೂ ಆಗುತ್ತಿರಲಿಲ್ಲ! ಆ ದಿನ ಮಟಮಟ ಮಧ್ಯಾಹ್ನ! ಒಂದು ಹಲ್ಲಿ ತಟಕ್ಕನೇ ಅವರ ಬೋಳು ನೆತ್ತಿಯ ಮೇಲೆ ಬಿತ್ತು! ಇಡೀ ತರಗತಿ ದಂಗಾಯಿತು. ನನ್ನನ್ನೂ ಸೇರಿದಂತೆ ಹೆಚ್ಚಿನವರಿಗೇ ಒಳಗೊಳಗೇ ಖುಷಿ ಕೂಡ- “ಮಾಷ್ಟ್ರು ಸಾಯುತ್ತಾರೆ!”. ನಡುನೆತ್ತಿಗೆ ಹಲ್ಲಿ ಬಿದ್ದರೆ ಮರಣ ಅಂತ ಪಂಚಾಂಗದಲ್ಲಿ ಬರೆದಿದೆ! ಕೊನೆಗೂ ಹಾಗೆಯೇ ಆಯಿತು!
ಮೇಷ್ಟ್ರು ಕೇಳಿದರು, “ಪಂಚಾಂಗ ನೋಡುತ್ತೀರ?! ನಡು ನೆತ್ತಿಯ ಮೇಲೆ ಹಲ್ಲಿ ಬಿದ್ದರೆ ಏನು ಫಲ?”
ನಾನು ತಟ್ಟನೇ ಉತ್ತರಿಸಿದೆ, “ಮರಣ!”
ಮೇಷ್ಟ್ರು “ಹೌದು! ಮರಣ! ಯಾರಿಗೆ?…ಹಲ್ಲಿಗೆ!” ಎಂದವರೇ ನೆಲ ತೋರಿಸಿದರು. ಅಲ್ಲಿ ಅಷ್ಟು ಎತ್ತರದಿಂದ ಬಿದ್ದಿದ್ದ ಹಲ್ಲಿ ಕಾಲು ಮೇಲಾಗಿ ಬಿಳಿಹೊಟ್ಟೆ ತೋರಿಸುತ್ತಾ ಸತ್ತುಬಿದ್ದಿತ್ತು! ಅಂದೇ, ಈ ಬುರುಡೆ ಜ್ಯೋತಿಷ್ಯ ಕುರಿತ ನನ್ನ ನಂಬಿಕೆ ಕಳಚಿಹೋಯಿತು. ಈ ಮೇಷ್ಟ್ರು ಇಂದಿಗೂ ಮುಂಬಯಿಯಲ್ಲಿ ಮಕ್ಕಳ ಮನೆಯಲ್ಲಿ ಇದ್ದಾರೆಂದು ಕೇಳಿದ್ದೆ!
ಇವೆಲ್ಲವುಗಳ ವಾಸ್ತವವನ್ನು ಮುಂದೆ ಆಧುನಿಕ ವಿಜ್ಞಾನದ ಮೂಲಕ ವಿವರವಾಗಿ ಮತ್ತು ತಾರ್ಕಿಕವಾಗಿ ಪರಿಶೀಲಿಸುವ ಮೊದಲು ಇಂತಹ ಇನ್ನಷ್ಟು ಆವಿಷ್ಕಾರಗಳ ಕತೆಗಳನ್ನು ಕೇಳೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...