Homeಅಂಕಣಗಳುಜನರ ತಲೆಗೆ ಮೌಢ್ಯದ ‘ಚಿಪ್ಪು’!

ಜನರ ತಲೆಗೆ ಮೌಢ್ಯದ ‘ಚಿಪ್ಪು’!

- Advertisement -
- Advertisement -

ಬುರುಡೆ ಜ್ಯೋತಿಷ್ಯವು ಹೇಗೆ ಹುಟ್ಟಿದ ಮಗುವನ್ನು ತಕ್ಷಣವೇ ಸುತ್ತಿಕೊಳ್ಳುತ್ತದೆ ಮತ್ತು ಹೆಸರಿನ ನೆಪದಲ್ಲಿ ಹೇಗೆ ‘ಹ್ಯೂಮನ್ ಐಡೆಂಟಿಟಿ, ಸ್ಟೇಟಸ್ ರೆಕಗ್ನಿಷನ್ ಸಿಸ್ಟಮ್’ ಎಂಬ ಅದ್ಭುತ ಆವಿಷ್ಕಾರವು ಮನುಷ್ಯನ ಜಾತಿ ಮತ್ತು ಹಿನ್ನೆಲೆಯನ್ನು ಹೇಗೆ ಗುರುತಿಸುತ್ತದೆ ಹಾಗೂ ‘ಹ್ಯೂಮನ್ ಫಿಲ್ತ್ ಸೆಪರೇಶನ್ ಎಂಡ್ ಸೆಗ್ರೆಗೇಶನ್ ಸಿಸ್ಟಮ್’ ಎಂಬ ಅವಿಷ್ಕಾರವು ಹೇಗೆ ನಿಕೃಷ್ಟ ಮಾನವರನ್ನು ಗುರುತಿಸಿ, ಜೀವನದುದ್ದಕ್ಕೂ ಪ್ರತ್ಯೇಕಿಸಿ ಮೂಲೆಗುಂಪು ಮಾಡುತ್ತದೆ ಎಂಬುದನ್ನು ಕಳೆದ ಸಂಚಿಕೆಯಲ್ಲಿ ನೋಡಿದೆವು.

ದಶಕಗಳ ಹಿಂದೆ ಪಂಚಾಂಗಗಳು ಮನೆಮನೆಯನ್ನು ಪ್ರವೇಶಿಸಲು ಅರಂಭಿಸಿದವು. ದಿನಮಾನವನ್ನು ಅಂದರೆ ಭೂಮಿ ಚಂದ್ರಾದಿ ಗ್ರಹಗಳ ಚಲನೆಯನ್ನು, ಋತುಗಳನ್ನು, ಗ್ರಹಣಗಳನ್ನು ನಿಖರವಾಗಿ ಗುರುತಿಸುವ ಈ ಪಂಚಾಂಗಗಳು ವಾಸ್ತವಿಕವಾಗಿ ನಮ್ಮ ಪುರಾತನ ಖಗೋಳಶಾಸ್ತ್ರಜ್ಞರ, ಗಣಿತಜ್ಞರ, ವೈಜ್ಞಾನಿಕ ಕೊಡುಗೆ. ಅದರೆ, ಅದರ ಪೇಟೆಂಟ್ ಪಡೆದುಕೊಂಡ ಬುರುಡೆ ಶಾಸ್ತ್ರಜ್ಞರು ಅದಕ್ಕೆ ತಮ್ಮದೇ ಆದ ಹೊಸಹೊಸ ಆವಿಷ್ಕಾರಗಳನ್ನು ಸೇರಿಸಿ, ಮುಗ್ಧ ಜನರ ‘ಇಯರ್ ಮೇಲೆ ಫ್ಲವರ್’ ಇಡಲು ಪ್ರಾರಂಭಿಸಿದರು.
ಒಂದು ಪ್ರದೇಶದ ಋತುಮಾನ, ಹವಾಮಾನ, ಮಳೆಯ ಸಮಯವನ್ನು ಗುರುತಿಸಲು ಈ ಲೆಕ್ಕಾಚಾರಗಳು ರೈತಾಪಿ ಜನರಿಗೆ ಅನುಕೂಲಕರವಾದುದರಿಂದ ಸ್ವಲ್ಪ ಅಕ್ಷರ ಬಲ್ಲವರ ಮನೆಗಳಲ್ಲಿ ಪಂಚಾಂಗಗಳು ಇರುತ್ತಿದ್ದವು. ಅವರು ಕಾಂಪೌಂಡರ್‍ಗಳಂತೆ ಉಳಿದವರ ಚಿಕ್ಕಪುಟ್ಟ ಸಮಸ್ಯೆಗಳಿಗೆ ಮದ್ದು ಕೊಡುತ್ತಿದ್ದರು. ದೊಡ್ಡ ಸಮಸ್ಯೆಗಳು ಎದುರಾದರೆ ಜೋಯಿಸರ ಬಳಿಯೇ ಹೋಗಬೇಕಾಗುತ್ತಿತ್ತು.
ಈ ಪಂಚಾಂಗಗಳಲ್ಲಿ ನಕ್ಷತ್ರಗಳ ಪಟ್ಟಿ, ಘಳಿಗೆ, ಇಲ್ಲದ ರಾಹುಕಾಲ, ಗುಳಿಕಕಾಲ, ಯಮಗಂಡ ಕಾಲ, ರಾಶಿ, ದೋಷಗಳು, ಫಲಗಳು, ಕಾಟಗಳು ಇತ್ಯಾದಿಗಳನ್ನು ಸೇರಿಸಲಾಯಿತು. ಇವರ ಅತ್ಯಂತ ದೊಡ್ಡ ಆವಿಷ್ಕಾರವೆಂದರೆ ವೈಜ್ಞಾನಿಕವಾದ ಪುರಾತನ ಆವಿಷ್ಕಾರಗಳಿಗೆ ಬುರುಡೆ ಅಪ್ಲಿಕೇಷನ್‍ಗಳನ್ನು ಕಂಡುಹಿಡಿದು, ಅವುಗಳ ಜೊತೆಗೆ ಭಯದ ಪ್ರೋಗ್ರಾಮ್ ಚಿಪ್ಪನ್ನು ಜನರ ಮೆದುಳಿಗೆ ಇಂಪ್ಲಾಂಟ್ ಮಾಡಿದ್ದು! ಇಂದಿಗೂ ವಿದ್ಯಾವಂತರೆನಿಸಿಕೊಂಡವರು ಕೂಡಾ ಇಂತಹ ಒಂದು ಚಿಪ್ಪನ್ನು ತಲೆಯೊಳಗೆ ಹೊತ್ತು ತಿರುಗುವುದನ್ನು ನೋಡಬಹುದು. ನಮ್ಮ ಮಾಧ್ಯಮದಲ್ಲೂ ಇಂತಹ ‘ಚಿಪ್ಪು’ ಹಂದಿಗಳು ದಂಡಿಯಾಗಿವೆ!
ಪಂಚಾಂಗಗಳ ದೊಡ್ಡ

ಸಾಧನೆ ಎಂದರೆ ಮನುಷ್ಯನ ಹುಟ್ಟು-ಸಾವು-ಕರ್ಮಗಳಿಗೂ ಗ್ರಹ-ನಕ್ಷತ್ರ-ಘಳಿಗೆಗಳಿಗೂ, ಭವಿಷ್ಯಕ್ಕೂ ಇಲ್ಲದ ಸಂಬಂಧ ಕಲ್ಪಿಸಿದ್ದು! ಮತ್ತು ಮಂತ್ರವಾದಿ ಕತೆಗಳಂತಹ ಕಾಲ್ಪನಿಕ ಚಿತ್ರಣವನ್ನು ಪಂಚಾಂಗಕ್ಕೆ ಸೇರಿಸಿ ಸಂವತ್ಸರಗಳು ಪಿಶಾಚಿಗಳಂತೆ ಜನರ ತಲೆಯಲ್ಲಿ ಕುಣಿಯುವಂತೆ ಮಾಡಿದ್ದು.
ನನ್ನ ಬಾಲ್ಯದಲ್ಲಿ ಪಂಚಾಂಗ ಮನೆ ಸೇರಿದ ಕೂಡಲೇ ತಂದೆಯವರು ಒಮ್ಮೆ ಕಣ್ಣಾಡಿಸಿದ್ದೇ ತಡ ಅದು ನನ್ನ ಪಾಲಾಗುತ್ತಿತ್ತು. ಯಾಕೆಂದರೆ ಶಾಲೆಗಳಲ್ಲಿ ಅಶ್ವಿನಿ, ಭರಣಿ, ಕೃತ್ತಿಕಾ… ಮುಂತಾದ ನಕ್ಷತ್ರಗಳು, ಮೇಷ, ವೃಷಭ, ಮಿಥುನ… ಮುಂತಾದ ರಾಶಿಗಳು, ಚೈತ್ರ, ವೈಶಾಖ, ಆಷಾಡ…ಇತ್ಯಾದಿ ಋತುಗಳು, ಪ್ರಭವ, ವಿಭವ, ಶುಕ್ಲ…ಇತ್ಯಾದಿ ಸಂವತ್ಸರಗಳನ್ನು ಉರುಹೊಡೆಸಲಾಗುತ್ತಿತ್ತು.
ಮಹಾ ಕುತೂಹಲಕಾರಿ, ಅದ್ಭುತ, ಭಯಾನಕವಾಗಿದ್ದುದು ಮಾತ್ರ ಚಂದಾಮಾಮ ಕತೆಗಳನ್ನು ಮೀರಿಸುವ ಸಂವತ್ಸರ ಫಲ! ಅವುಗಳಲ್ಲಿ ಆಯಾ ಸಂವತ್ಸರಕ್ಕೆ ಒಂದೊಂದು ಭಯಾನಕ ರೂಪ ಕೊಡಲಾಗುತ್ತಿತ್ತು. “ರಕ್ತಾಕ್ಷಿ ನಾಮದ ದೇವತೆಯು ಪೀತವಸ್ತ್ರಧಾರಿಣಿಯಾಗಿ, ಒಂದು ಕೈಯಲ್ಲಿ ಕಪಾಳವನ್ನೂ ಇನ್ನೊಂದು ಕೈಯ್ಯಲ್ಲಿ ಶೂಲವನ್ನೂ ಹಿಡಿದುಕೊಂಡು, ನೇರಳೆ ಬಣ್ಣದ ಹೂವಿನ ಮಾಲೆಯನ್ನು ಧರಿಸಿಕೊಂಡು, ಭಿಕ್ಷಾನ್ನವನ್ನು ಮುಕ್ಕುತ್ತಾ, ಪಶ್ಚಿಮದಿಂದ ಪೂರ್ವಾಭಿಮುಖವಾಗಿ ದಕ್ಷಿಣ ದಿಕ್ಕನ್ನು ದಿಟ್ಟಿಸುತ್ತಾ ಕತ್ತೆಯ ಮೇಲೇರಿ ಪಯಣಿಸುವಳು… ಎರಡು ಕೊಳಗ ಮಳೆಯನ್ನು ಸುರಿಸುವಳು… ಇಷ್ಟ ಧಾನ್ಯ ಗೋಧಿ… ಆಕೆ ಬಳಸಿದ ವಸ್ತುಗಳಿಗೆ ಕೊರತೆಯಾಗುವುದು… ಹೀಗೆ ಸಾಗುವ ಕತೆಯನ್ನು ಓದಿ ನಾವು ಮಕ್ಕಳು ರಾತ್ರಿ ವೇಳೆ ಭಯಾನಕ ಕನಸುಬಿದ್ದು ಬೆವರುತ್ತಿದ್ದರೆ, ಹಿರಿಯರು ಇವುಗಳಿಗೆ ತಮ್ಮದೇ ಕಾಲ್ಪನಿಕ ಅರ್ಥ ಕಲ್ಪಿಸಿ, ಈ ಸಲ ಮಳೆ ಕಡಿಮೆ, ಕಾಲ ಕಷ್ಟ, ಗೋಧಿಗೆ ಹೇಗೋ ಗೊತ್ತಿಲ್ಲ; ಭತ್ತಕ್ಕೆ ತೊಂದರೆಯಿಲ್ಲ ಎಂಬಿತ್ಯಾದಿ ಚಿಂತೆಗಳಲ್ಲಿ ಮುಳುಗಿರುತ್ತಿದ್ದರು. ಇಂತಹಾ ಒಂದು ಸಾಮೂಹಿಕ ಸನ್ಮೋಹನದ, ಸಮೂಹ ಸನ್ನಿಯ ಮನಶ್ಶಾಸ್ತ್ರೀಯ ಆವಿಷ್ಕಾರವನ್ನು ಭಾರತದ ಬುರುಡೆ ಜ್ಯೋತಿಷಿಗಳು ಬಿಟ್ಟರೆ ಪ್ರಪಂಚದಲ್ಲಿ ಬೇರಾರೂ ಮಾಡಿರಲಿಕ್ಕಿಲ್ಲ.
ಒಂದೆರಡು ಕೊಳಗ ಮಳೆ ಎಂದರೆ ಬರ ಬರುತ್ತದೆಂದೂ, ನಾಲ್ಕು ಕೊಳಗ ಎಂದರೆ ಪ್ರಳಯವೆಂದೂ ನಂಬುವ ರೈತಾಪಿ ಜನರು, ಈ ಸಂವತ್ಸರವು ಇಡೀ ಜಗತ್ತಿಗೆ ಅನ್ವಯಿಸುವುದಾದರೆ ಮರುಭೂಮಿಯಲ್ಲಿ ಕಡಿಮೆ ಮಳೆ, ಕರಾವಳಿ-ಮಲೆನಾಡುಗಳಲ್ಲಿ ಹೆಚ್ಚು ಮಳೆ ಯಾಕೆ ಸುರಿಸುತ್ತದೆ ಎಂದು ಎಂದಿಗೂ ಯೋಚಿಸುವುದಿಲ್ಲ! ಏನಾದರೂ ಹೆಚ್ಚುಕಡಿಮೆ ಅದರೆ, ಸಮಜಾಯಿಷಿ ಕೊಡಲು ಜೋಯಿಸರಿಗೆ ಮಾತ್ರ ಈ ತರ್ಕ ಅನುಕೂಲಕ್ಕೆ ಬರುತ್ತದೆ.
ನಾಲ್ಕು ಕೊಳಗ ಮಳೆ ಎಂದಿದ್ದಾಗ ತೀರಾ ಕಡಿಮೆ ಮಳೆ ಬಂದಿದ್ದನ್ನೂ, 1974ರಲ್ಲಿ ಎರಡೋ ಮೂರೋ ಕೊಳಗ ಎಂದಿದ್ದಾಗ, ನೇತ್ರಾವತಿ ನದಿಯಲ್ಲಿ ಒಂದು ಇಡೀ ತಲೆಮಾರು ಮರೆಯದ, ಪ್ರಳಯದಂತಹ ಮಳೆ ಮತ್ತು ನೆರೆ ಬಂದದ್ದನ್ನೂ ನಾನು ಕಂಡಿದ್ದೇನೆ, ಆ ಮಾತು ಬೇರೆ.
ಈ ಜೋಯಿಸರು ಒಳ್ಳೆಯ ಹಾಸ್ಯಪಟುಗಳೂ ಹೌದು! ಅದಕ್ಕಾಗಿಯೇ ಅವರು ‘ಗವಳಿ ಪತನ ಫಲ’ ಎಂದೇನೋ ಒಂದು ಶಕುನವನ್ನೂ ಕೊಡುತ್ತಿದ್ದರು. ಅಂದರೆ, ಅಕಸ್ಮಾತ್ ಹಲ್ಲಿಯೇನಾದರೂ ಮೈಮೇಲೆ ಬಿದ್ದರೆ ಯಾವ ಫಲ ಇತ್ಯಾದಿ. ಕೈಗೆ ಬಿದ್ದರೆ, ಹೆಗಲಿಗೆ ಬಿದ್ದರೆ…ಹೀಗೆ ಫಲಗಳಿರುತ್ತವೆ. ಇರುವ ಎಲ್ಲಾ ಮನೆವಾರ್ತೆ ಪ್ರಾಣಿಗಳಲ್ಲಿ ಹಲ್ಲಿ ಏಕೆ ವಿಶೇಷ ಎಂದು ನನಗಿನ್ನೂ ಒಗಟು. ಹಲ್ಲಿ ಏನಾದರೂ ಬ್ಯಾಲೆನ್ಸ್ ತಪ್ಪಿ ಜೋಕಾಲಿಯಿಂದ ಬಲೆಗೆ ಬೀಳುವ ಸರ್ಕಸಿನ ಜೋಕರ್‍ನಂತೆ ಅನ್ನದ ಪಾತ್ರೆಗೆ ಬಿದ್ದರೆ ಏನು ಫಲ ಎಂದರೆ, ತಿಂದವರಿಗೆ ವಾಂತಿ-ಬೇಧಿ ಎಂದು ಕಂಡಿದ್ದೇನೆ. ಅದರೆ ಹಲ್ಲಿ ಬೀಳುವುದಕ್ಕೂ ಭವಿಷ್ಯಕ್ಕೂ ಏನು ಸಂಬಂಧ? ಆಗ ಭವಿಷ್ಯದ ಮೇಲೆ ಪ್ರಭಾವ ಬೀರುವ ಗ್ರಹ, ನಕ್ಷತ್ರಗಳು ರಜೆ ಹಾಕಿರುತ್ತವೆಯೆ!?
ನಾನು ಏಳನೇ ತರಗತಿಯಲ್ಲಿರುವಾಗ ಹಲ್ಲಿ ಪತನದ ಪರಿಣಾಮವನ್ನು ಕಣ್ಣಾರೆ ಕಾಣುವಂತಾಯಿತು. ಆ ಭಯಾನಕ ಘಟನೆ ನನ್ನ ಮನಸ್ಸಿನಲ್ಲಿ ಅಚ್ಚೊತ್ತಿದಂತಿದೆ! ನಮ್ಮದು ಅಗಲೇ ಏಳ್ನೂರು ವಿದ್ಯಾರ್ಥಿಗಳಿದ್ದ ಅತ್ಯಂತ ಹಳೆಯ ಖಾಸಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆ! ಭಾರಿ ಕಟ್ಟಡ, ಇಪ್ಪತ್ತೈದು ಅಡಿ ಮೀರಿದ ಛಾವಣಿ.
ಒಂದು ದಿನ ಬೋಳು ತಲೆಯ ಒಬ್ಬರು ಮೇಷ್ಟ್ರು ಪಾಠ ಮಾಡುತ್ತಿದ್ದರು. ಮೇಲ್ಜಾತಿಗೆ ಸೇರಿದ ಅವರು ಮಕ್ಕಳನ್ನು ಜಾತಿ-ಧರ್ಮದ ಹೆಸರೆತ್ತಿ ಅವಮಾನಿಸುತ್ತಿದ್ದರಿಂದ, ಹೊಡೆಯುತ್ತಿದ್ದುದರಿಂದ ಅವರನ್ನು ಕಂಡರೆ ನಮಗ್ಯಾರಿಗೂ ಆಗುತ್ತಿರಲಿಲ್ಲ! ಆ ದಿನ ಮಟಮಟ ಮಧ್ಯಾಹ್ನ! ಒಂದು ಹಲ್ಲಿ ತಟಕ್ಕನೇ ಅವರ ಬೋಳು ನೆತ್ತಿಯ ಮೇಲೆ ಬಿತ್ತು! ಇಡೀ ತರಗತಿ ದಂಗಾಯಿತು. ನನ್ನನ್ನೂ ಸೇರಿದಂತೆ ಹೆಚ್ಚಿನವರಿಗೇ ಒಳಗೊಳಗೇ ಖುಷಿ ಕೂಡ- “ಮಾಷ್ಟ್ರು ಸಾಯುತ್ತಾರೆ!”. ನಡುನೆತ್ತಿಗೆ ಹಲ್ಲಿ ಬಿದ್ದರೆ ಮರಣ ಅಂತ ಪಂಚಾಂಗದಲ್ಲಿ ಬರೆದಿದೆ! ಕೊನೆಗೂ ಹಾಗೆಯೇ ಆಯಿತು!
ಮೇಷ್ಟ್ರು ಕೇಳಿದರು, “ಪಂಚಾಂಗ ನೋಡುತ್ತೀರ?! ನಡು ನೆತ್ತಿಯ ಮೇಲೆ ಹಲ್ಲಿ ಬಿದ್ದರೆ ಏನು ಫಲ?”
ನಾನು ತಟ್ಟನೇ ಉತ್ತರಿಸಿದೆ, “ಮರಣ!”
ಮೇಷ್ಟ್ರು “ಹೌದು! ಮರಣ! ಯಾರಿಗೆ?…ಹಲ್ಲಿಗೆ!” ಎಂದವರೇ ನೆಲ ತೋರಿಸಿದರು. ಅಲ್ಲಿ ಅಷ್ಟು ಎತ್ತರದಿಂದ ಬಿದ್ದಿದ್ದ ಹಲ್ಲಿ ಕಾಲು ಮೇಲಾಗಿ ಬಿಳಿಹೊಟ್ಟೆ ತೋರಿಸುತ್ತಾ ಸತ್ತುಬಿದ್ದಿತ್ತು! ಅಂದೇ, ಈ ಬುರುಡೆ ಜ್ಯೋತಿಷ್ಯ ಕುರಿತ ನನ್ನ ನಂಬಿಕೆ ಕಳಚಿಹೋಯಿತು. ಈ ಮೇಷ್ಟ್ರು ಇಂದಿಗೂ ಮುಂಬಯಿಯಲ್ಲಿ ಮಕ್ಕಳ ಮನೆಯಲ್ಲಿ ಇದ್ದಾರೆಂದು ಕೇಳಿದ್ದೆ!
ಇವೆಲ್ಲವುಗಳ ವಾಸ್ತವವನ್ನು ಮುಂದೆ ಆಧುನಿಕ ವಿಜ್ಞಾನದ ಮೂಲಕ ವಿವರವಾಗಿ ಮತ್ತು ತಾರ್ಕಿಕವಾಗಿ ಪರಿಶೀಲಿಸುವ ಮೊದಲು ಇಂತಹ ಇನ್ನಷ್ಟು ಆವಿಷ್ಕಾರಗಳ ಕತೆಗಳನ್ನು ಕೇಳೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...