Homeರಾಜಕೀಯಯತ್ನಾಳನ ಹರಿದ ನಾಲಗೆಯ ಹಿಂದೆ...

ಯತ್ನಾಳನ ಹರಿದ ನಾಲಗೆಯ ಹಿಂದೆ…

- Advertisement -
- Advertisement -

ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳನ ನಾಲಗೆಗೆ ಮತ್ತೆ ಲಕ್ವಾ ಹೊಡೆದಿದೆ. ಇದರಲ್ಲಿ ಅಚ್ಚರಿಯೇನೂ ಇಲ್ಲ. ಅವನ ನಾಲಗೆ ಸ್ವಸ್ಥವಾಗಿ ಇದ್ದುದಕ್ಕಿಂತ ಸ್ವಾಧೀನ ತಪ್ಪಿದ್ದೇ ಹೆಚ್ಚು. ಈ ಸಲ ತನ್ನ ಹೊಲಸು ನಾಲಗೆಯನ್ನು ಬುದ್ದಿಜೀವಿಗಳತ್ತ ತಿರುಗಿಸಿರೋ ಪುಣ್ಯಾತ್ಮ `ತಾನು ಹೋಂ ಮಿನಿಸ್ಟ್ರು ಆಗಿದ್ದಿದ್ದ್ರೆ, ಸೋ ಕಾಲ್ಡ್ ಸೆಕ್ಯುಲರಿಸ್ಟುಗಳನ್ನು ಗುಂಡಿಟ್ಟು ಸಾಯಿಸುವಂತೆ ಆರ್ಡರ್ ಮಾಡುತ್ತಿದ್ದೆ’ ಅಂತ ಥೇಟು ಟೆರರಿಸ್ಟ್ ಶೈಲಿಯಲ್ಲಿ ಒದರಿಕೊಂಡಿದ್ದಾನೆ. ಡ್ಯಾಮೇಜಾಗಿರುವ ಆತನ ಅರ್ಧ ಬ್ರೈನು ಕೋಮಾ ತಲುಪಿ ಅದ್ಯಾವ ಕಾಲವೋ ಆಗಿಹೋಗಿದೆ. ಉಳಿದರ್ಧ ಭಾಗದಲ್ಲಿ ಇರೋದು ಕೋಮುಹಿಂಸೆಯ ಕಲರವ ಅಷ್ಟೇ. ಸಮಯ ಸಿಕ್ಕಾಗಲೆಲ್ಲ ವಿಜಯಪುರದಲ್ಲಿ ಹಿಂದೂ-ಮುಸ್ಲಿಂ ಗಲಾಟೆ ಹಚ್ಚಿ ರಾಜಕಾರಣ ಮಾಡುತ್ತಾ ಬಂದಿರುವ ಯತ್ನಾಳ್ ಮಧ್ಯ ವಯಸ್ಸಲ್ಲೇ ರಾಜಕೀಯ ವೃದ್ಧಾಪ್ಯಕ್ಕೆ ಈಡಾಗಿ ಡಿಪ್ರೆಶನ್‍ನ ನಿರಂತರ ಟ್ರೀಟ್‍ಮೆಂಟ್‍ನಲ್ಲಿದ್ದಾನೆ ಅನ್ನೋ ಸುದ್ದಿಯೂ ಇದೆ. ಅಸಲಿಗೆ ಸರ್ಕಾರ ಇಂತವನನ್ನು ಹುಚ್ಚಾಸ್ಪತ್ರೆಯಲ್ಲೊ, ಪರಪ್ಪನ ಅತಿಥಿ ಗೃಹದಲ್ಲೋ ಇಡಬೇಕಿತ್ತು. ಆದರೆ ಅಂತಹ ಯಾವ ಜವಾಬ್ಧಾರಿಯುತ ಸರ್ಕಾರವೂ ಇಂಡಿಯಾದಲ್ಲಿ ಅಸ್ತಿತ್ವಕ್ಕೆ ಬರದ ಕಾರಣ, ಬೀದಿಯಲ್ಲಿ ಅಲೆದುಕೊಂಡಿದ್ದಾನಷ್ಟೇ!
ಒಂದು ಕಾಲಕ್ಕೆ ಬಿಜೆಪಿಯಲ್ಲಿ ಯಡ್ಯೂರಪ್ಪಗೆ ಪರ್ಯಾಯ ಲಿಂಗಾಯತ ಲೀಡರ್ ಆಗಿ ಬೆಳೆದು ಬಡ್ತೀನಿ ಅಂತ ಏನೇನೊ ಸರ್ಕಸ್ ಮಾಡಲು ಹೋಗಿ ಯಡ್ಯೂರಪ್ಪರ ಶಾಶ್ವತ ಶತ್ರುಗಳ ಲಿಸ್ಟು ಸೇರಿಕೊಂಡಿರುವ ಬಸನಗೌಡ ಪಾಟೀಲ್ ಹೀಗೆಲ್ಲ ಒದರಾಡಲು ಒಂದು ಕಾರಣವಿದೆ. ಬಿಜೆಪಿಯೊಳಗೆ ಅಧಿಕಾರದ ಹುದ್ದೆಗಳನ್ನು ಗಿಟ್ಟಿಸಿಕೊಳ್ಳುವುದಿರಲಿ, ಚುನಾವಣೆಯ ಟಿಕೇಟ್ ದಕ್ಕಿಸಿಕೊಳ್ಳುವುದೇ ಆತನಿಗೆ ದುಸ್ಥರವಾಗಿತ್ತು. 2013ರಲ್ಲಿ ಯತ್ನಾಳನಿಗೆ ಟಿಕೇಟ್ ತಪ್ಪಿದ್ದು ಪಕ್ಷದೊಳಗೆ ಆತನಿಗಿರುವ ಕೆಟ್ಟ ಇಮೇಜಿನಿಂದಾಗಿಯೇ. ಆತನ ಪರಮ ವೈರಿ ಯಡ್ಯೂರಪ್ಪ ಪಕ್ಷ ತೊರೆದು ಕೆಜೆಪಿ ಕಟ್ಟಿಕೊಂಡು ಕಣದಲ್ಲಿದ್ದಾಗಲೂ ಈತ ಬಿಜೆಪಿ ಟಿಕೇಟು ಗಿಟ್ಟಿಸಿಕೊಳ್ಳಲು ಸಾಧ್ಯವಾಗಲಿಲ್ಲ ಅಂತಂದರೆ ಈತನ ತಾಕತ್ತು ಎಂತದ್ದು ಅನ್ನೋದು ಅರ್ಥವಾಗುತ್ತದೆ. ಈಗ ಯಡ್ಯೂರಪ್ಪ ವಾಪಾಸಾದ ಮೇಲಂತೂ ಪಕ್ಷದೊಳಗೆ ಯತ್ನಾಳನ ಬಿಗಿತ ದಿನದಿಂದ ದಿನಕ್ಕೆ ಕುಗ್ಗುತ್ತಲೇ ಇದೆ. ಅದ್ಹೇಗೊ ಈ ಸಲ ಟಿಕೇಟ್ ಸಿಕ್ಕು, ಗೆದ್ದಿದ್ದಾನಾದರು ತನ್ನ ಹಳೆಯ ವೈರಿಯನ್ನು ಮಟ್ಟಹಾಕಲು ಯಡ್ಯೂರಪ್ಪ ಹಾತೊರೆಯುತ್ತಿರೋದರಿಂದ ಯತ್ನಾಳ್ ಸಾಹೇಬರಿಗೆ ರಾಜಕೀಯ ಅಸ್ತಿತ್ವದ ಪ್ರಶ್ನೆ ಕಾಡಲು ಶುರುವಾಗಿದೆ.
ಹೇಗಾದರು ಮಾಡಿ, ದಿಲ್ಲಿ ನಾಯಕರ ಗಮನ ತನ್ನತ್ತ ಸೆಳೆದು ಯಡ್ಯೂರಪ್ಪನ ಹಂಗೂ ಇಲ್ಲದೆ ವರ್ಚಸ್ಸು ಹೆಚ್ಚಿಸಿಕೊಳ್ಳಬೇಕೆಂಬ ಹಪಾಹಪಿಯೇ ಆತನನ್ನು ಬುದ್ದಿಜೀವಿಗಳ ವಿರುದ್ಧ ಮಾತಾಡುವಂತೆ ಮಾಡಿದೆ. ಇತ್ತೀಚೆಗೆ, ಅದರಲ್ಲೂ 2019ರ ಎಲೆಕ್ಷನ್ ಸನಿಹವಾದಂತೆಲ್ಲ ಬಾಯಿಗೆ ಬಂದಂತೆ ಕೋಮುದ್ವೇಷದ ಮಾತುಗಳನ್ನಾಡುವ ಬಾಯಿಬಡುಕರಿಗೆ ಬಿಜೆಪಿ ಹೈಕಮಾಂಡು ವಿಶೇಷ ಮಣೆ ಹಾಕುತ್ತಿದೆ. ಅನಂತ್ ಕುಮಾರ್ ಹೆಗಡೆಯಂತಹ ಸಡಿಲ ನಾಲಿಗೆಯ ರಾಜಕಾರಣಿಯನ್ನೂ ಕೇಂದ್ರ ಮಂತ್ರಿ ಮಾಡಿರೋದು ಯತ್ನಾಳ್‍ಗೆ ಸ್ಫೂರ್ತಿ ತುಂಬಿದಂತಿದೆ. ಸಾಲದ್ದಕ್ಕೆ ದೇಶಾದ್ಯಂತ ಜಾತ್ಯತೀತರ ವಿರುದ್ಧ, ಅಲ್ಪಸಂಖ್ಯಾತರ ವಿರುದ್ಧ ಮಾತನಾಡುವವರು ರಾತ್ರೋರಾತ್ರಿ ಪಕ್ಷದ ವೇದಿಕೆಯಲ್ಲಿ ಹೀರೋಗಳಾಗುತ್ತಿರೋದನ್ನು ಕಂಡ ಯತ್ನಾಳ್ ತಾನು ಯಾಕೆ ಅಂತದ್ದೊಂದು ಪ್ರಯತ್ನ ಮಾಡಿ ನೋಡಬಾರದು ಎನ್ನುವ ನಿರ್ಧಾರಕ್ಕೆ ಬಂದಿದ್ದಾನೆ. ಹೇಗೂ ಅವನ ಹುಟ್ಟುಗುಣವೇ ಬಾಯಿಗೆ ಬಂದದ್ದನ್ನು ಒದರಾಡೋದು. ಅದನ್ನು ಇನ್ನಷ್ಟು ಅಧ್ವಾನದಲ್ಲಿ ತಿರುಗಾಡಿಸಿದರೆ ತನಗೂ ಒಳ್ಳೆ ಹುದ್ದೆ ಒದಗಿ ಬರಬಹುದೆನ್ನುವ ಅಂದಾಜು ಆತನದ್ದು.
ಈ ಹಿಂದೆಯೂ ಈತ ಜೆಡಿಎಸ್‍ಗೆ ವಲಸೆ ಹೋಗಿ ವಾಪಾಸ್ ಬಿಜೆಪಿಗೆ ಮರಳಿದಾಗ, ಪಕ್ಷದೊಳಗೆ ವರ್ಚಸ್ಸು ಹೆಚ್ಚಿಸಿಕೊಳ್ಳಲು ತಣ್ಣಗಿದ್ದ ವಿಜಯಪುರಕ್ಕೆ ಲೋಕಸಭಾ ವಿಜಯೋತ್ಸವದ ನೆಪದಲ್ಲಿ ಕೋಮುಬೆಂಕಿ ಹಚ್ಚಿ ಬಿಸಿ ಕಾಯಿಸಿಕೊಂಡಿದ್ದ. ತನ್ನ ಪಟಾಲಮ್ಮಿನ ಹುಡುಗರನ್ನು ಕರೆತಂದು ಮುಸ್ಲೀಮರೆ ಅಧಿಕವಾಗಿರುವ ಗಾಂಧಿಚೌಕದಲ್ಲಿ ದಾಂಧಲೆ ಎಬ್ಬಿಸಿದ್ದ. ಯತ್ನಾಳ್ ಎಂಥಾ ಪುಕ್ಕಲು ಆಸಾಮಿಯೆಂದರೆ, ಪೊಲೀಸರು ಅರೆಸ್ಟ್ ಮಾಡೋದು ಗೊತ್ತಾಗುತ್ತಿದ್ದಂತೆಯೇ ರಾತ್ರೋರಾತ್ರಿ ಊರು ಬಿಟ್ಟು ಪರಾರಿಯಾಗಿ ದೂರದ ಕೊಲ್ಲಾಪುರದ ಓರಿಯಂಟಲ್ ಕ್ರೌನ್ ಹೊಟೇಲ್‍ನಲ್ಲಿ ಬಚ್ಚಿಟ್ಟುಕೊಂಡಿದ್ದ; ಅದೂ ತನ್ನ ಡ್ರೈವರ್ ಹೆಸರಲ್ಲಿ ರೂಮ್ ಬುಕ್ ಮಾಡಿಸಿಕೊಂಡು! ಪೊಲೀಸರು ಬಂಧಿಸಿ ತಂದಮೇಲೂ ಎದೆನೋವಿನ ನೆಪಹೇಳಿ ತನ್ನದೇ ಪಕ್ಷಸ್ಥ ಪ್ರಭಾಕರ್ ಕೋರೆಯ ಕೆಎಲ್‍ಇ ಆಸ್ಪತ್ರೆಯಲ್ಲಿ ನರಳಾಡಿ, ಕೋರ್ಟಿಂದ ಜಾಮೀನು ಪಡೆದು ಬಚಾವಾಗಿದ್ದ. ಅಂಥಾ ಯತ್ನಾಳ್ ಇದೀಗ ಮತ್ತೆ ಅದೇ ಖಯಾಲಿ ಮುಂದುವರೆಸಿ ಮುಗಿದುಹೋಗುತ್ತಿರುವ ತನ್ನ ರಾಜಕೀಯ ಬದುಕನ್ನು ಮತ್ತೆ ಮೊನಚು ಮಾಡಿಕೊಳ್ಳುವ ಯತ್ನದಲ್ಲಿದ್ದಾನೆ.
ಇದಿಷ್ಟು ಯತ್ನಾಳನ ಪುರಾಣವಾದರೆ, ಅತ್ತ ಬಿಜೆಪಿ ಕೂಡಾ ಯತ್ನಾಳನಂತಹ ಬಾಯಿಬಡುಕರನ್ನು ದೇಶಾದ್ಯಂತ ಒದರಾಡಲು ಬಿಟ್ಟು 2019ರ ಎಲೆಕ್ಷನ್‍ಗೆ ಹತಾರಗಳನ್ನು ರೆಡಿ ಮಾಡಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ, ಅಲ್ಪಸಂಖ್ಯಾತರ ವಿರುದ್ಧ, ದಲಿತರ ವಿರುದ್ಧ, ಜಾತ್ಯತೀತರ ವಿರುದ್ಧ ಅಲ್ಲಲ್ಲಿ ಇಂತಹ ಸಡಿಲ ನಾಲಗೆಗಳನ್ನು ಮಾತಾಡಲು ಬಿಟ್ಟು, ಪ್ರತಿಕ್ರಿಯೆಯನ್ನು ನಾಜೂಕಾಗಿ ಗಮನಿಸುತ್ತಿದೆ. ಇಂಥಾ ಲೋ ಪ್ರೊಫೈಲ್ ಲೀಡರ್‍ಗಳು ಆಡುವ ಮಾತುಗಳು ವಿವಾದವಾದರೆ, ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷಕ್ಕೂ ತಮಗೂ ಸಂಬಂಧವಿಲ್ಲ ಅಂತ ಕೈತೊಳೆದುಕೊಳ್ಳೋದು ಅದರ ಐಡಿಯಾ. ಬಲಿಯಾದರೆ ಯತ್ನಾಳನಂತಹ ಸ್ಯಾಂಪಲ್ ಪೀಸುಗಳು ಬಲಿಯಾಗುತ್ತವೆ, ಅದಕ್ಕೆ ಪ್ರತಿಯಾಗಿ ಜನರಲ್ಲಿ ಇಂತದ್ದೇ ಮಾತನ್ನು ಪದೇಪದೇ ಕೇಳುವುದರಿಂದ ಅವು ಸಹಜ ಎನ್ನಿಸುವಷ್ಟು ತಾಳಿಕೆ ಬಂದು, ತಮ್ಮ ಕೋಮುತಂತ್ರಗಳಿಗೆ ನೆಲ ಹದವಾಗುತ್ತೆ ಎಂಬ ಹುನ್ನಾರ ಬಿಜೆಪಿ ಮತ್ತು ಸಂಘ ಪರಿವಾರದ್ದಾಗಿರುವಂತಿದೆ. ಹಾಗಾಗಿ ಒಳಗಿಂದೊಳಗೇ ಈ ಬಗೆಯ ಬಾಯಾಸುರರಿಗೆ ಕುಮ್ಮಕ್ಕು ಸಿಕ್ಕುತ್ತಿದೆ. ಇದನ್ನು ಕಂಡೇ ಯತ್ನಾಳನಂತಹ ರಾಜಕೀಯ ಬಿಕ್ಕಟ್ಟಿನಲ್ಲಿರೋರು ಬಾಯಿಗೆ ಬಂದಂತೆ ಮಾತಾಡಿ, ತಮ್ಮ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಯತ್ನದಲ್ಲಿದ್ದಾರೆ. ಯತ್ನಾಳ್ ಕೂಡಾ ಅಂತಹದ್ದೇ ಒಂದು ಟ್ರಯಲ್ ಅಂಡ್ ಎರರ್ ಪೀಸು! ದುರಂತವೆಂದರೆ, ಆತ ಅಷ್ಟು ರಾಜಾರೋಷವಾಗಿ ಹಿಂಸೆ-ದ್ವೇಷದ ಮಾತಾಡುತ್ತಿದ್ದರು ಕರ್ನಾಟಕದಲ್ಲಿ ಅಧಿಕಾರದಲ್ಲಿರೋ ಕಲಬೆರಕೆ ಸರಕಾರ ಕಮಕ್-ಕಿಮಕ್ ಎನ್ನದೆ ಕೂತಿದೆ.

– ಜೀಟಿ ಮಾಚಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...