Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...