Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...