Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...