Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಯುಜಿಸಿ ರದ್ಧತಿ ಎಂಬುದು ಉನ್ನತ ಶಿಕ್ಷಣವನ್ನು ಕೇಂದ್ರೀಕೃತ ವ್ಯವಸ್ಥೆಗೆ ತರುವ ಹುನ್ನಾರ

ಯುಜಿಸಿ ರದ್ಧತಿ ಎಂಬುದು ಉನ್ನತ ಶಿಕ್ಷಣವನ್ನು ಕೇಂದ್ರೀಕೃತ ವ್ಯವಸ್ಥೆಗೆ ತರುವ ಹುನ್ನಾರ

- Advertisement -
- Advertisement -

ಸಾರ್ವಜನಿಕ ಉತ್ಪಾದನೆ ಮತ್ತು ಸೇವಾಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವುದರಿಂದ ಮಾತ್ರ ದೇಶದಲ್ಲಿ ಶೀಘ್ರಗತಿಯ ಅಭಿವೃದ್ಧಿಯನ್ನು ತರಬಹುದೆಂಬ ನವಉದಾರೀಕರಣದ ನೀತಿ ಜಾರಿಗೆ ಬಂದಾಗಿನಿಂದಲೂ ಶಿಕ್ಷಣ ಅದರಲ್ಲೂ ಉನ್ನತ ಶಿಕ್ಷಣ ಹಳಿತಪ್ಪುತ್ತಾ ಬಂದಿದೆ. ಈ ನೀತಿಯ ಭಾಗವಾಗಿ ಶಿಕ್ಷಣ ಕ್ಷೇತ್ರವನ್ನು ಮೆರಿಟ್ ಮತ್ತು ನಾನ್ ಮೆರಿಟ್ ಎಂಬ ಎರಡು ಭಾಗವನ್ನಾಗಿ ವಿಂಗಡಿಸಲಾಯಿತು. ಇದರ ಪ್ರಕಾರ ನಾನ್‌ಮೆರಿಟ್ ಗುಂಪಿನಲ್ಲಿರುವ ಎಲ್ಲಾ ಕ್ಷೇತ್ರಗಳಲ್ಲೂ ಖಾಸಗೀಕರಣವನ್ನು ತರುವ ಪ್ರಯತ್ನ ಮೊದಲಾಯಿತು. ಉನ್ನತ ಶಿಕ್ಷಣವನ್ನೂ ನಾನ್‌ಮೆರಿಟ್ ಕ್ಷೇತ್ರಕ್ಕೆ ಸೇರಿಸಿದ್ದರಿಂದ ಆರ್ಥಿಕ ಅನುದಾನವನ್ನು ಹಂತಹಂತವಾಗಿ ಕಡಿತಗೊಳಿಸಿಕೊಂಡು ಬರಲಾಯಿತು. ಇದರಿಂದ ಖಾಸಗೀ ಉದ್ಯಮಿಗಳು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಸಾಧ್ಯವಾಗುತ್ತದೆ ಎನ್ನುವ ವಾದವನ್ನು ಮುಂದೊಡ್ಡಲಾಯಿತು. ಇದರ ನೇರ ಪರಿಣಾಮ ಎಂದರೆ ಶಿಕ್ಷಣ ಒಂದು ಸರಕಾಗಿ ಮಾರ್ಪಟ್ಟು, ವಿದ್ಯಾರ್ಥಿಗಳು ಗ್ರಾಹಕರಾಗಿ ಬದಲಾದರು. ಇಲ್ಲಿ ಜ್ಞಾನ ಎಂದರೆ ಕೌಶಲ್ಯ, ಮಾಹಿತಿ ಸಂಗ್ರಹಣೆ ಮತ್ತು ಸಂಸ್ಕರಣೆ ಮಾತ್ರ ಎಂದಾಯಿತು. ಹೊಸ ಖಾಸಗೀ ವಿವಿಗಳು ವಿಜೃಂಭಿಸತೊಡಗಿ ಒಂದು ಕಾಲಕ್ಕೆ ಹೆಸರು ಪಡೆದಿದ್ದ ಸರ್ಕಾರಿ ವಿವಿಗಳು ತಮ್ಮ ಘನತೆ ಮತ್ತು ಆಕರ್ಷಣೆಯನ್ನು ಕಳೆದು ಕೊಂಡವು. ಕಾಲೇಜು ಮತ್ತು ವಿವಿಗಳಲ್ಲಿ ಕೆಲಸ ಮಾಡುವವರಲ್ಲಿ ಅರೆಕಾಲಿಕ ಅಥವಾ ತಾತ್ಕಾಲಿಕ ಹುದ್ದೆಗಳಲ್ಲಿರುವವರ ಸಂಖ್ಯೆ ಹೆಚ್ಚಾಯಿತು. ಹೆಚ್ಚಿನ ಸಂಬಳ ಸಿಗದ ಕಾರಣ ಪ್ರತಿಭಾವಂತರು ಶಿಕ್ಷಣ ಕ್ಷೇತ್ರದಿಂದ ವಿಮುಖರಾದರು.

ಜ್ಞಾನದ ಹಸಿವು, ಬೆಳವಣಿಗೆ, ಹೊಸಜ್ಞಾನ ಶಾಖೆಗಳ ಆವಿಷ್ಕಾರ ಎಲ್ಲವೂ ಕುಸಿಯುತ್ತಾ ಹೋಯಿತು. ಉನ್ನತ ಶಿಕ್ಷಣದ ಬಗ್ಗೆ ಮಹತ್ವದ ಧ್ಯೇಯಗಳನ್ನು ರೂಪಿಸಿದ್ದ ರಾಧಾಕೃಷ್ಣನ್, ಕೊಠಾರಿ ಇತ್ಯಾದಿ ಕಮಿಷನ್‌ಗಳ ವರದಿಯನ್ನು ಕಾರ್ಪೊರೇಟ್ ಬಂಡವಾಳಶಾಹಿಗೆ ಒಪ್ಪಿಸಲಾಗಿದೆ. ರಾಧಾಕೃಷ್ಣನ್, ಕೊಠಾರಿಗಳ ಬದಲು, ಅಂಬಾನಿ, ಬಿರ್ಲಾ ಮತ್ತು ನಾರಾಯಣಮೂರ್ತಿಗಳು ಉನ್ನತ ಶಿಕ್ಷಣದ ಯೋಜನಾ ಆಯೋಗದಲ್ಲಿ ಪ್ರವೇಶ ಪಡೆದಿದ್ದಾರೆ. ಲಾಭದಾಯಕವಾದ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾದರೂ, ಈಗ ಅದೇ ಮೇಲುಗೈ ಸಾಧಿಸಿದೆ. ಸಧ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀ ಸಂಸ್ಥೆಗಳ ಪಾಲು ಶೇ.59ರಷ್ಟಾಗಿದೆ.

ಇವೆಲ್ಲಾ ಬೆಳವಣಿಗೆಗಳ ಹಿಂದೆ ಉನ್ನತ ಶಿಕ್ಷಣ ಸಾರ್ವಜನಿಕ ಸೇವೆ ಅಲ್ಲ ಎನ್ನುವ ತತ್ವ ಅಡಗಿದೆ. ಇದರರ್ಥ ಈಗ ಅದೊಂದು ಮೌಲ್ಯಾಧಾರಿತ ಸರಕು. ಅಂದರೆ, ಅದನ್ನು ಬಳಸುವವರು ಅದಕ್ಕೆ ತಕ್ಕನಾದ ಶುಲ್ಕ ನಿಡಿ ಅದನ್ನು ಉಪಯೋಗಿಸಬೇಕು. ಉನ್ನತ ಶಿಕ್ಷಣಕ್ಕೆ ನಾಲ್ಕು ಮೂಲಭೂತ ಲಕ್ಷಣಗಳು ಇರ

ಬೇಕು. ಇಂದು, ಹೊಸ ಜ್ಞಾನದ ಅನ್ವೇಷಣೆ. ಎರಡು, ಅದಕ್ಕೆ ಬೇಕಾದ ತರಗತಿ, ಮೂರು, ಸಾಮಾಜಿಕ ಸೇವೆಗಳಿಗೆ ಶಿಕ್ಷಣವನ್ನು ಬಳಸಿಕೊಳ್ಳುವುದು ಹೇಗೆ ಎನ್ನುವ ವಿವೇಕ; ನಾಲ್ಕು, ವಿಮರ್ಶಾತ್ಮಕ ಧೋರಣೆಯನ್ನು ಬೆಳೆಸುವುದು. ಇದರಲ್ಲಿ ಕಡೆಯದು ಅತ್ಯಂತ ಪ್ರಮುಖವಾದ ಸಾಮಾಜಿಕ ನೈತಿಕತೆಯನ್ನು ಬೆಳೆಸುವುದೂ ಸೇರಿದೆ.
ಆದರೆ ಉನ್ನತ ಶಿಕ್ಷಣವನ್ನು ಒಂದು

 ವ್ಯಾಪಾರವನ್ನಾಗಿಸಿದಾಗ ಈ ನಾಲ್ಕು ಅಂಶಗಳೂ ಮರೆಯಾಗುತ್ತವೆ. ಜ್ಞಾನದ ಅನ್ವೇಷಣೆ ಅಂದರೆ ಇಲ್ಲಿ ಹೊಸ ಬಂಡವಾಳವನ್ನು ಸ್ಥಾಪಿಸಲು ಅಥವಾ ಇರುವ ಹುಡಿಕೆಯನ್ನು ವೃದ್ಧಿಸಲು ಬೇಕಾದ ಕೌಶಲ್ಯವಾಗಿಬಿಡುತ್ತದೆ. ತರಬೇತಿ ಎಂದರೆ, ಕೌಶಲ್ಯ ಪಾಠ ಮಾಡುವ, ಕಲಿಯುವ ತಂತ್ರಜ್ಞಾನಕ್ಕೆ ಸೀಮಿತವಾಗುತ್ತದೆ. ಸಾಮಾಜಿಕ ಸೇವೆಗಳ ಬದಲು ಹೊಸ ಸರಕನ್ನು ಸೃಷ್ಟಿಸುವುದೇ ಮುಖ್ಯವಾಗುತ್ತದೆ. ವಿಮರ್ಶಾತ್ಮಕ ಧೋರಣೆ ಬೆಳೆಸುವುದಂತೂ ನವ ಶಿಕ್ಷಣ ನೀತಿಯಲ್ಲಿ ಸಂಪೂರ್ಣ ನಿಷೇಧಕ್ಕೆ ಒಳಪಡುತ್ತದೆ.

ಇತ್ತೀಚೆಗೆ ಯುಜಿಸಿ ಹೊರಡಿಸಿರುವ ಸುತ್ತೋಲೆ ಪ್ರಕಾರ ಇನ್ನು ಮುಂದೆ ವಿವಿ ಅಧ್ಯಾಪಕರು ಸರ್ಕಾರದ ನೀತಿಗಳನ್ನು ಕುರಿತು ವಿಮರ್ಶೆ ಮಾಡುವಂತಿಲ್ಲ. ಇದರಿಂದ ಈಗಾಗಲೇ ಸೊಂಟ ಬಗ್ಗಿರುವ ಅಧ್ಯಾಪಕರು ಇನ್ನು ಮುಂದೆ ತೆವಳುವಂತಾಗುತ್ತದೆ. ಈ ನೀತಿ ಕೇವಲ ಅಧ್ಯಾಪಕರ ಧ್ವನಿಯನ್ನು ದಮನಮಾಡುವುದಿಲ್ಲ; ವಿದ್ಯಾರ್ಥಿಗಳ ಯೋಜನಾ ಶಕ್ತಿಯನ್ನೇ ಕುಂಠಿಸುತ್ತದೆ.

ಇದಕ್ಕಿಂತಲೂ ದೊಡ್ಡ ಹೊಡೆತವೆಂದರೆ, ಈ ಖಾಸಗೀಕರಣ ಉಳ್ಳವರಿಗಾಗಿ ಮಾತ್ರ ತೆರೆದುಕೊಳ್ಳುವುದರಿಂದ ದೇಶದ ಬಹುತೇಕ ಯುವಜನತೆ ಉನ್ನತ ಶಿಕ್ಷಣದಿಂದ ಹೊರಗುಳಿಯುತ್ತಾರೆ ಅಥವಾ ಕಳಪೆ ಕಾಲೇಜು/ವಿವಿಗಳಲ್ಲಿ ಮಾತ್ರ ಕಲಿಯುವಂತಾಗುತ್ತದೆ. ಕಾಲೇಜು/ವಿವಿಗಳ ಸ್ವಾಯತ್ತತೆ ಮೇಲೆ ಈಗ ವಿಶೇಷ ಗಮನ ನೀಡಲಾಗುತ್ತಿದೆ. ಅದನ್ನು ಬಯಸದೇ ಇದ್ದ ಸಂಸ್ಥೆಗಳ ಮೇಲೂ ಸ್ವಾಯತ್ತತೆಯನ್ನು ಹೇರಲಾಗುತ್ತಿದೆ. ಸ್ವಾಯತ್ತ ಶಿಕ್ಷಣ ಸಂಸ್ಥೆಗಳು ತಮಗಿಷ್ಟ ಬಂದ ಶಿಕ್ಷಣ ಕ್ರಮ, ಸೇವಾ ನಿಯಮ, ಶುಲ್ಕ ಇತ್ಯಾದಿಗಳನ್ನು ಅಳವಡಿಸಿಕೊಳ್ಳಬಹುದಾದ್ದರಿಂದ ಶಿಕ್ಷಣದ ಮೂಲ ಧ್ಯೇಯಗಳಲ್ಲಿ ಒಂದಾದ ಒಳಗೊಳ್ಳುವಿಕೆಗೆ ಧಕ್ಕೆ ಬರುತ್ತದೆ.

ಇವೆಲ್ಲಕ್ಕೂ ಬರೆ ಇಟ್ಟಂತೆ ಇದೇ ವರ್ಷದ ಜೂನ್ 27ರಂದು ಯುಜಿಸಿಯನ್ನು ವಿಸರ್ಜಿಸಿ ಅದರ ಜಾಗದಲ್ಲಿ ‘ಭಾರತೀಯ ಉನ್ನತ ಶಿಕ್ಷಣ ಆಯೋಗ’ವನ್ನು ಸ್ಥಾಪಿಸುವ ಹೊಸ ಮಸೂದೆಯನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಇದರಿಂದ ಉನ್ನತ ಶಿಕ್ಷಣ ಮತ್ತಷ್ಟು ಬಲಗೊಂಡು ಹೆಚ್ಚಿನ ಸ್ವಾಯತ್ತತೆಯನ್ನು ಪಡೆದುಕೊಳ್ಳುತ್ತದೆ ಎಂದು ಹೇಳಲಾಗಿದೆ. ಆದರೆ ಒಂದು ಕಡೆ ಸ್ವಾಯತ್ತತೆಯ ಮಾತನ್ನಾಡುತ್ತಲೇ ಇನ್ನೊಂದು ಕಡೆ ಇಡೀ ಉನ್ನತ ಶಿಕ್ಷಣವನ್ನು ಒಂದು ಕೇಂದ್ರೀಕೃತ ವ್ಯವಸ್ಥೆಗೆ ತರುವ ಹುನ್ನಾರ ಇದು. ಇದರಲ್ಲಿ ರಾಜ್ಯದ ವಿವಿಗಳು ಮಾತ್ರ ಕಾಲೇಜು ಆಡಳಿತ ಮಂಡಳಿಗಳಿಗೆ ಯಾವ ಅಧಿಕಾರವೂ ಇರುವುದಿಲ್ಲ. ಇಲ್ಲಿಯವರೆಗೆ ಆಡಳಿತ ಮಾತ್ರ ಹಣಕಾಸಿನ ನಿರ್ವಹಣೆ-ಇವೆರಡನ್ನು ಯುಜಿಸಿ ನೋಡಿಕೊಳ್ಳುತ್ತಿತ್ತು. ಈಗ ಅದನ್ನು ಬೇರ್ಪಡಿಸಲಾಗಿದೆ. ಹಣಕಾಸಿನ ನಿರ್ವಹಣೆ ಇನ್ನುಮುಂದೆ ನೇರವಾಗಿ ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ನೋಡಿಕೊಳ್ಳುತ್ತದೆ. ಅರ್ಥಾತ್ ಉನ್ನತ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ನೇರವಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಮರ್ಜಿಯಲ್ಲಿರಬೇಕಾಗುತ್ತದೆ. ಇದು ಶಿಕ್ಷಣದಲ್ಲಿ ರಾಜಕೀಯ ಪಕ್ಷಗಳು ಮೂಗು ತೂರಿಸಲು ದಾರಿಯನ್ನು ಸುಗಮಗೊಳಿಸುತ್ತದೆ.

47ರಿಂದ ಇಲ್ಲಿಯವರೆಗೆ ಉನ್ನತ ಶಿಕ್ಷಣ ಕುರಿತು ಬಂದಿರುವ ವಿವಿಧ ಆಯೋಗಗಳ ವರದಿಗಳು ಹೊಸ ಶಿಕ್ಷಣ ನೀತಿಗಳು, ಮಸೂದೆಗಳನ್ನು ನೋಡಿದರೆ ದೊಡ್ಡ ಗೊಂದಲ ಎದ್ದು ಕಾಣುತ್ತದೆ. ಇಷ್ಟೆಲ್ಲಾ ಅಧ್ಯಯನ ವಿಶೇಷ ವರದಿಗಳಿದ್ದರೂ ನಮ್ಮ ದೇಶದ ಉನ್ನತ ಶಿಕ್ಷಣದ ಮಟ್ಟ ಕುಸಿಯುತ್ತಿದೆ. ಸೋಲಿಗೆ ಕೇವಲ ರಾಜಕೀಯ ಇಚ್ಛಾಶಕ್ತಿಯ ಕೊರತೆ ಕಾರಣ ಎಂದು ಹೇಳಿದರೆ ಏನನ್ನೂ ಹೇಳಿದಂತಾಗುವುದಿಲ್ಲ. ರಾಜಕೀಯ ಇಚ್ಛಾಶಕ್ತಿ ಖಾಸಗೀಕರಣದ ಕಡೆಗೆ ಒಂದಿರುವುದರಿಂದಲೇ ಶಿಕ್ಷಣದಲ್ಲಿ ಯಾವುದೇ ಕ್ರಾಂತಿಕಾರಕ ಬದಲಾವಣೆ ಆಗಿಲ್ಲ ಇಂದು ದೇಶದ ಕೆಲವು ಪ್ರಮುಖ ಶಿಕ್ಷಣ ಸಂಸ್ಥೆಗಳಾದ ಜೆಎನ್‌ಯು, ಹೈದರಾಬಾದ್, ದೆಹಲಿ ವಿವಿಗಳಲ್ಲಿ ವಿದ್ಯಾರ್ಥಿ ಸಮೂಹ ಎಚ್ಚೆತ್ತುಕೊಂಡಿದ್ದರೆ, ಪ್ರಭುತ್ವಕ್ಕೆ ಹೊಸ ಪ್ರಶ್ನೆಗಳನ್ನು ಕೇಳುತ್ತಿದೆ ಎಂದಾದರೆ, ಅದು ಅಲ್ಲಿನ ಪಠ್ಯಕ್ರಮ ಅಥವಾ ಕಲಿಕಾ ಪದ್ದತಿಯಿಂದ ಪಡೆದ ಎಚ್ಚರವಲ್ಲ ಬದಲಿಗೆ ವಿದ್ಯಾರ್ಥಿಗಳು ತರಗತಿಯ ಹೊರಗಡೆ ಜನಸಮುದಾಯವನ್ನು ನೋಡಿ ಕಲಿತದ್ದರಿಂದ ಮೂಡಿಬಂದ ಎಚ್ಚರ. ಹೀಗಾಗಿ ಉನ್ನತ ಶಿಕ್ಷಣ ತನ್ನ ಮೂಲ ಧ್ಯೇಯೋದ್ದೇಶಗಳನ್ನು ಮರಳಿ ಪಡೆದು, ಸರಕಿನಿಂದ ಸೇವೆಗೆ ಪಲ್ಲಟಗೊಳ್ಳಬೇಕಾದರೆ ಅದು ವಿದ್ಯಾರ್ಥಿ ಮತ್ತು ಅಧ್ಯಾಪಕರ ಸಂಘಟಿತ ಹೋರಾಟದಿಂದ ಮಾತ್ರ ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...