Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...