Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...