Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...