Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...