Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...