Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...