Homeಅಂಕಣಗಳುಯುವ ಮತದಾರರಿಗೆ ಒಂದು ಕಿವಿಮಾತು

ಯುವ ಮತದಾರರಿಗೆ ಒಂದು ಕಿವಿಮಾತು

- Advertisement -
* ಎಚ್.ಎಸ್.ದೊರೆಸ್ವಾಮಿ |
ಈಗ 18 ತುಂಬಿ ಹೊಸದಾಗಿ ಮತದಾನದ ಹಕ್ಕನ್ನು ಪಡೆದಿರುವ ಯುವಕ ಯುವತಿಯರಿಗೆ ನನ್ನ ಅಭಿನಂದನೆಗಳು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಪ್ರಧಾನವಾಗಿ ಈ ಚುನಾವಣೆಯಲ್ಲಿ ಭಾಗವಹಿಸುತ್ತಿವೆ. ನೀವು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಇವರ ಪ್ರಚಾರದ ಅಬ್ಬರವನ್ನು ಒಂದೆರಡು ವಾರದಿಂದ ಕೇಳುತ್ತಾ ಬಂದಿದ್ದೀರಿ. ಈ ಅಬ್ಬರಕ್ಕೆ ಹೊಸದಾಗಿ ಮತದಾನ ಅರ್ಹತೆಯನ್ನು ಪಡೆದವರು ಗಾಬರಿಗೊಂಡಿರಬಹುದು, ಸಿಡಿಮಿಡಿಗೊಂಡಿರಬಹುದು.
ನೀವು ಗಮನಿಸಿರಬಹುದು, ಪ್ರಧಾನಮಂತ್ರಿ ಮೋದಿಯವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎದುರಾಳಿಗಳಾದ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಹಾಗೂ ಜಾತ್ಯತೀತ ಜನತಾದಳದ ದೇವೇಗೌಡರನ್ನು ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಈ ಇಬ್ಬರು ಮಹನೀಯರು ಇಷ್ಟು ಕೆಟ್ಟದಾಗಿ ಮಾತಾಡಿದಾಗ, ಎದುರಾಳಿಗಳೂ ಇದಕ್ಕೆ ಉತ್ತರ ನೀಡಬೇಕಾದ್ದು ಅನಿವಾರ್ಯವಾಗುತ್ತದೆ. ಹೀಗಾಗಿ ಇಡೀ ಚುನಾವಣೆಯ ಸಂದರ್ಭದಲ್ಲಿ ಈ ದಾಳಿ ಮತ್ತು ಪ್ರತಿದಾಳಿ ಮತದಾರರ ತಿರಸ್ಕಾರಕ್ಕೆ ಒಳಗಾಗಿದೆ.
ನೀವು ಹೊಸದಾಗಿ ಮತ ಹಾಕಲು ಬಂದವರು ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ. ಮೋದಿ ಕರ್ನಾಟಕವನ್ನು ಕಬ್ಜಾ ಮಾಡಲು, ಕಾಂಗ್ರೆಸ್ಸನ್ನು ನಾಮಾವಶೇಷ ಮಾಡಲು ಹೊರಟಿರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈ ರೀತಿ ಮೂದಲಿಕೆ ಮಾಡುವ ಮೋದಿ ತನ್ನ ಈ 4 ವರ್ಷಗಳ ಆಡಳಿತದ ಅವಧಿಯಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೊಸ ಮತದಾರರಾದ ನೀವು ಅರಿಯಬೇಕು. ಈಗಾಗಲೇ ಈ ವಿಷಯ ಕುರಿತು ಅನೇಕರು ಮಾತನಾಡಿದ್ದಾರೆ. ನೀವೂ ಗಮನಿಸಿರಬಹುದು. ಇದನ್ನು ಗಮನಿಸದವರ ಗಮನ ಸೆಳೆಯಲು ಮೋದಿಯವರ ವೈಫಲ್ಯದ ಪ್ರಮುಖ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
1. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 100 ದಿನಗಳ ಒಳಗಾಗಿ ಸ್ವಿಸ್ ಬ್ಯಾಂಕ್‍ನಲ್ಲಿರುವ ಭಾರತೀಯರ ಎಲ್ಲಾ ಕಪ್ಪು ಹಣವನ್ನೂ ಒಳಗೊಂಡಂತೆ ಭಾರತದಲ್ಲೇ ಅಡಗಿಸಿಟ್ಟಿರುವ ಹಣವನ್ನೂ ಹೊರತೆಗೆಸಿ ಪ್ರತಿಯೊಬ್ಬರ ಖಾತೆಗೆ ತಲಾ 15 ಲಕ್ಷ ರೂಪಾಯಿ ಹಾಕುವುದಾಗಿ 2014ರ ಲೋಕಸಭೆಯ ಚುನಾವಣಾ ವೇಳೆಯಲ್ಲಿ ಮೋದಿಯವರು ಘೋಷಣೆ ಮಾಡಿದ್ದರು. ಆದರೆ ನಯಾ ಪೈಸೆಯೂ ಬರಲಿಲ್ಲ. ಜನರ ಖಾತೆಗಳಿಗೆ ತಲಾ 15 ಲಕ್ಷ ಹಾಕುವ ಬೊಗಳೆ ಮಾತು ಹುಸಿಯಾಯಿತು. ಇದರಿಂದ ಬಡಜನರಿಗೆ ನಿರಾಸೆಯೂ ಆಯಿತು.
2. ತಾವು ಅಧಿಕಾರಕ್ಕೆ ಬಂದನಂತರ ಪ್ರತಿ ವರ್ಷ 1 ಕೋಟಿ ಉದ್ಯೋಗ ಸೃಷ್ಟಿಸಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಬೂಸಿ ಬಿಟ್ಟರು. ಹೊಸ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು ಅವುಗಳನ್ನೆಲ್ಲ ಭರ್ತಿ ಮಾಡುವ ಮೂಲಕ ಲಕ್ಷಾಂತರ ವಿದ್ಯಾವಂತರಿಗೆ ಉದ್ಯೋಗ ಒದಗಿಸಬಹುದಾಗಿತ್ತು. ಭಾರತ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ. ಕೇಂದ್ರ ಸಚಿವಾಲಯದಲ್ಲೇ 60,235 ಹುದ್ದೆಗಳು ಖಾಲಿಯಿವೆ. ರೈಲ್ವೆ ಇಲಾಖೆಯಲ್ಲಿ 2.35 ಲಕ್ಷ ಹುದ್ದೆಗಳಿವೆ. ಸಶಸ್ತ್ರ ಪೊಲೀಸ್ ಪಡೆಯಲ್ಲಿ 65,709 ಹುದ್ದೆಗಳು ಖಾಲಿಯಿವೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಕೆಲಸವಂತೂ ಮಾಡುತ್ತಿಲ್ಲ. ಬದಲಿಗೆ ಶ್ರೀಮಂತ ಉದ್ದಿಮೆಪತಿಗಳ ಪರವಾಗಿ hiಡಿe ಚಿಟಿಜ ಜಿiಡಿe ನೀತಿಯನ್ನು ಜಾರಿಗೆ ತಂದು, ಕಾಯಂ ಉದ್ಯೋಗಗಳೇ ಇಲ್ಲದಂತೆ ಮಾಡಲು ಹೊರಟಿದ್ದಾರೆ.
3. 500 ಮತ್ತು 1000 ರೂಪಾಯಿ ನೋಟುಗಳನ್ನು ಅನಾಣ್ಯೀಕರಣ ಮಾಡಿದ ಮೋದಿಯವರು ಈ ಮೂಲಕ ಕಪ್ಪುಹಣವನ್ನು ನಿರ್ನಾಮ ಮಾಡುತ್ತೇವೆಂದು ಘೋಷಿಸಿದರು. ಆದರೆ ವಾಸ್ತವದಲ್ಲಿ ಏನಾಯಿತು? ತಮಗೆ ಬೇಕಾದ ಕಪ್ಪುಹಣದ ಕುಳಗಳು ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂಪಾಯಿಗಳ ಕಪ್ಪು ಹಣವನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಈ ನೋಟುಗಳ ಅಪಮೌಲ್ಯೀಕರಣದಿಂದ ತೊಂದರೆಗೆ ಒಳಗಾದವರು ಶ್ರೀಮಂತರಲ್ಲ, ಕಾಳಧನ ಇಟ್ಟುಕೊಂಡವರಲ್ಲ; ಜನಸಾಮಾನ್ಯರು, ಮಧ್ಯಮವರ್ಗದವರು ಮತ್ತು ಸಣ್ಣ ವ್ಯಾಪಾರಿಗಳು. ಈ ದಿಢೀರ್ ಹೊಡೆತದಿಂದಾಗಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡರು. ಕೈಲಿದ್ದ ನೋಟುಗಳಿಗೆ ಬೆಲೆಯಿಲ್ಲದೆ, ಹೊಸದಾಗಿ ಪ್ರಿಂಟಾದ 500 ಮತ್ತು 2000 ನೋಟುಗಳು ಕೈಗೆ ಸಿಗದೆ ಅನೇಕ ಸಣ್ಣಪುಟ್ಟ ವ್ಯಾಪಾರಿಗಳು ಬೀದಿ ಪಾಲಾದರು. ದಿನನಿತ್ಯ ಕೂಲಿ ಮಾಡಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದ ಕೂಲಿಕಾರ್ಮಿಕರಿಗೆ ಕೆಲಸ ಸಿಗದೆ ಕಂಗಾಲಾದರು. ಇಷ್ಟೆಲ್ಲಾ ಅನಾಹುತಗಳಾಗಿ ಕಪ್ಪು ಹಣ ವಾಪಸ್ ಬಂತೇ ಎಂದರೆ ಅದೂ ಇಲ್ಲ. ಎಷ್ಟು ನೋಟುಗಳು ಬ್ಯಾಂಕಿಗೆ ಜಮೆಯಾಗಿದೆಯೆಂಬ ಲೆಕ್ಕವನ್ನೇ ರಿಸರ್ವ್ ಬ್ಯಾಂಕ್ ಇನ್ನೂ ಕೊಟ್ಟಿಲ್ಲ.
4. ಬಿಜೆಪಿ ಪಕ್ಷ ಮತ್ತು ಅದಕ್ಕೆ ಸಂಬಂಧಿತ ಸಂಘಟನೆಗಳು ಸಂಸ್ಕøತಿ ರಕ್ಷಕರ ಹೆಸರಿನಲ್ಲಿ ಯುವಕ-ಯುವತಿಯರ ಮೇಲೆ ಹಲ್ಲೆ ಮಾಡುತ್ತಿರುವ ದಾರುಣ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಈ ಸಂಘಟನೆಗಳು ಸಕ್ರಿಯವಾಗಿರುವ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಜೊತೆ ಮಾತಾಡಲಿಕ್ಕೂ ಭಯ ಬೀಳಬೇಕಾದ ವಾತಾವರಣ ಸೃಷ್ಟಿಯಾಗಿದೆ.
5. ನಮ್ಮ ಬ್ಯಾಂಕುಗಳ ಲಕ್ಷಾಂತರ ಕೋಟಿ ಹಣವನ್ನು ತಮ್ಮ ನೆಚ್ಚಿನ ಉದ್ಯಮಿಗಳ ಒಡಲಿಗೆ ಹಾಕಿ, ಅವರು ಅಸಲು ಬಡ್ಡಿ ಯಾವುದೂ ಕಟ್ಟದೆ ನಮ್ಮ ಬ್ಯಾಂಕುಗಳಿಗೆ ಪಂಗನಾಮ ಹಾಕಿ ಓಡಿಹೋಗಿದ್ದಾರೆ. ವಿಜಯ ಮಲ್ಯ, ಲಲಿತ್ ಮೋದಿ, ನೀರವ್ ಮೋದಿ, ಮೆಹುಲ್ ಚೋಕ್ಸಿ, ಜತಿನ್ ಮೆಹ್ತಾ ಮುಂತಾದ ಖದೀಮರು ದೇಶ ಬಿಟ್ಟು ವಿದೇಶಕ್ಕೆ ಹಾರಿಹೋಗಲು ಅವಕಾಶ ಮಾಡಿಕೊಟ್ಟು ನಂತರ ನೋಟಿಸ್ ಕೊಡುವ, ಕೇಸು ಹಾಕುವ ನಾಟಕವಾಡುತ್ತಿರುವುದು ನಮ್ಮ ಕಣ್ಣೆದುರಿಗಿದೆ.
6. ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುತ್ತೇವೆಂದು ಉದ್ದುದ್ದ ಭಾಷಣ ಮಾಡಿ ಅಧಿಕಾರಕ್ಕೆ ಬಂದ ಈ ಪಕ್ಷದ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ವಿವಿಧ ರಾಜ್ಯಗಳಲ್ಲಿ ಹೆಣ್ಣುಮಕ್ಕಳ ಪಾಲಿಗೆ ಕಂಟಕಪ್ರಾಯರಾಗಿದ್ದಾರೆ. ಅತ್ಯಾಚಾರದ ಆರೋಪದಲ್ಲಿ, ಇತರೆ ಕ್ರಿಮಿನಲ್ ಕೇಸುಗಳಲ್ಲಿ ಜೈಲು ಸೇರಿದವರಲ್ಲಿ ಹೆಚ್ಚಿನವರು ಮೋದಿಯ ಪಕ್ಷದವರೇ.
ವಾಸ್ತವ ಸತ್ಯಗಳು ಹೀಗಿವೆ. ಮೋದಿಯವರು ತಮ್ಮ ಎಲೆಯಲ್ಲಿ ಕತ್ತೆ ಸತ್ತು ಬಿದ್ದಿರುವುದನ್ನು ಮರೆಮಾಚಿ, ಬೇರೆಯವರ ಎಲೆಯಲ್ಲಿ ನೊಣ ಸತ್ತು ಬಿದ್ದಿರುವುದನ್ನು ದೊಡ್ಡದು ಮಾಡಿ ಕೂಗು ಹಾಕುತ್ತಿದ್ದಾರೆ. ತಮ್ಮ ವಾಕ್ಚಾತುರ್ಯದಿಂದ ದೇಶವನ್ನು ಮರುಳು ಮಾಡಿಬಿಡಬಹುದು ಎಂದುಕೊಂಡಿದ್ದಾರೆ. ಇದನ್ನು ಹೊಸ ಮತದಾರರಾದ ಯುವಕ ಯುವತಿಯರು ಗಮನಿಸಬೇಕು. ಮೋದಿ ಮತ್ತು ಅಮಿತ್ ಶಾ ಅವರ ಪೊಳ್ಳು ಆರ್ಭಟಕ್ಕೆ ಸೊಪ್ಪು ಹಾಕಬೇಡಿ.
ಭಾರತ ದೇಶದಲ್ಲಿ ಸಾವಿರಾರು ವರ್ಷಗಳಿಂದ ಕ್ರಿಶ್ಚಿಯನ್ನರು, ಮುಸ್ಲಿಮರು, ಸಿಖ್ಖರು, ಪಾರ್ಸಿಗಳು ನೆಲೆಸಿದ್ದಾರೆ. ನಮ್ಮ ಈ ಎಲ್ಲ ಪೂರ್ವಿಕರು ದೇಶ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಆರೆಸ್ಸೆಸ್, ವಿಶ್ವಹಿಂದೂ ಪರಿಷತ್, ಭಜರಂಗದಳ ಮುಂತಾದ ಹಿಂದೂತ್ವ ಮತಾಂಧ ಸಂಸ್ಥೆಗಳು ಎಲ್ಲೆಡೆ ವಿಜೃಂಭಿಸುತ್ತಿದ್ದು, ತಮ್ಮ ಮತೀಯವಾದಿ agendaಗಳಿಗೆ ಪೂರಕವಾಗಿ ಸಂವಿಧಾನವನ್ನು ತಿದ್ದಬೇಕೆಂದು ಬೊಬ್ಬೆ ಎಬ್ಬಿಸಿದ್ದಾರೆ. ಇದೇನಾದರು ಕಾರ್ಯಗತವಾದರೆ, ಭಾರತದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವ ಯಾವುದೂ ಉಳಿಯುವ ಸಂಭವವಿಲ್ಲ. ಭಾರತ ದೇಶ ಆಫ್ಘಾನಿಸ್ತಾನದಂತೆ ಈ ಹಿಂದೂ ತಾಲಿಬಾನಿಗಳ ತಾಣವಾಗಲಿದೆ.
ನಿಮ್ಮಲ್ಲಿ ನನ್ನ ವಿನಂತಿ ಇಷ್ಟೆ. ಬಿಜೆಪಿಯ ನಿಜವಾದ hidden agendaವನ್ನು ಅಧ್ಯಯನ ಮಾಡಿ. ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನವನ್ನು ಭಾರತೀಯ ಜನತಾ ಪಕ್ಷದ ಹೆಸರಿನಲ್ಲಿ ಮೋದಿ ಧೂಳೀಪಟ ಮಾಡಲು ಬಿಡಬೇಡಿ. ಈ ಬಾರಿಯ ವಿಧಾನಸಭಾ ಚುನಾವಣೆ ಮೋದಿ ವರ್ಸಸ್ ಕರ್ನಾಟಕದ ಮಧ್ಯೆ ನಡೆಯುತ್ತಿದೆ. ನಿಮ್ಮ ಮತವನ್ನು ವಿವೇಕದಿಂದ ಚಲಾಯಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...