Homeಅಂಕಣಗಳುಯುವ ಮತದಾರರಿಗೆ ಒಂದು ಕಿವಿಮಾತು

ಯುವ ಮತದಾರರಿಗೆ ಒಂದು ಕಿವಿಮಾತು

- Advertisement -
* ಎಚ್.ಎಸ್.ದೊರೆಸ್ವಾಮಿ |
ಈಗ 18 ತುಂಬಿ ಹೊಸದಾಗಿ ಮತದಾನದ ಹಕ್ಕನ್ನು ಪಡೆದಿರುವ ಯುವಕ ಯುವತಿಯರಿಗೆ ನನ್ನ ಅಭಿನಂದನೆಗಳು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಪ್ರಧಾನವಾಗಿ ಈ ಚುನಾವಣೆಯಲ್ಲಿ ಭಾಗವಹಿಸುತ್ತಿವೆ. ನೀವು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಇವರ ಪ್ರಚಾರದ ಅಬ್ಬರವನ್ನು ಒಂದೆರಡು ವಾರದಿಂದ ಕೇಳುತ್ತಾ ಬಂದಿದ್ದೀರಿ. ಈ ಅಬ್ಬರಕ್ಕೆ ಹೊಸದಾಗಿ ಮತದಾನ ಅರ್ಹತೆಯನ್ನು ಪಡೆದವರು ಗಾಬರಿಗೊಂಡಿರಬಹುದು, ಸಿಡಿಮಿಡಿಗೊಂಡಿರಬಹುದು.
ನೀವು ಗಮನಿಸಿರಬಹುದು, ಪ್ರಧಾನಮಂತ್ರಿ ಮೋದಿಯವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎದುರಾಳಿಗಳಾದ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಹಾಗೂ ಜಾತ್ಯತೀತ ಜನತಾದಳದ ದೇವೇಗೌಡರನ್ನು ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಈ ಇಬ್ಬರು ಮಹನೀಯರು ಇಷ್ಟು ಕೆಟ್ಟದಾಗಿ ಮಾತಾಡಿದಾಗ, ಎದುರಾಳಿಗಳೂ ಇದಕ್ಕೆ ಉತ್ತರ ನೀಡಬೇಕಾದ್ದು ಅನಿವಾರ್ಯವಾಗುತ್ತದೆ. ಹೀಗಾಗಿ ಇಡೀ ಚುನಾವಣೆಯ ಸಂದರ್ಭದಲ್ಲಿ ಈ ದಾಳಿ ಮತ್ತು ಪ್ರತಿದಾಳಿ ಮತದಾರರ ತಿರಸ್ಕಾರಕ್ಕೆ ಒಳಗಾಗಿದೆ.
ನೀವು ಹೊಸದಾಗಿ ಮತ ಹಾಕಲು ಬಂದವರು ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ. ಮೋದಿ ಕರ್ನಾಟಕವನ್ನು ಕಬ್ಜಾ ಮಾಡಲು, ಕಾಂಗ್ರೆಸ್ಸನ್ನು ನಾಮಾವಶೇಷ ಮಾಡಲು ಹೊರಟಿರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈ ರೀತಿ ಮೂದಲಿಕೆ ಮಾಡುವ ಮೋದಿ ತನ್ನ ಈ 4 ವರ್ಷಗಳ ಆಡಳಿತದ ಅವಧಿಯಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೊಸ ಮತದಾರರಾದ ನೀವು ಅರಿಯಬೇಕು. ಈಗಾಗಲೇ ಈ ವಿಷಯ ಕುರಿತು ಅನೇಕರು ಮಾತನಾಡಿದ್ದಾರೆ. ನೀವೂ ಗಮನಿಸಿರಬಹುದು. ಇದನ್ನು ಗಮನಿಸದವರ ಗಮನ ಸೆಳೆಯಲು ಮೋದಿಯವರ ವೈಫಲ್ಯದ ಪ್ರಮುಖ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
1. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 100 ದಿನಗಳ ಒಳಗಾಗಿ ಸ್ವಿಸ್ ಬ್ಯಾಂಕ್‍ನಲ್ಲಿರುವ ಭಾರತೀಯರ ಎಲ್ಲಾ ಕಪ್ಪು ಹಣವನ್ನೂ ಒಳಗೊಂಡಂತೆ ಭಾರತದಲ್ಲೇ ಅಡಗಿಸಿಟ್ಟಿರುವ ಹಣವನ್ನೂ ಹೊರತೆಗೆಸಿ ಪ್ರತಿಯೊಬ್ಬರ ಖಾತೆಗೆ ತಲಾ 15 ಲಕ್ಷ ರೂಪಾಯಿ ಹಾಕುವುದಾಗಿ 2014ರ ಲೋಕಸಭೆಯ ಚುನಾವಣಾ ವೇಳೆಯಲ್ಲಿ ಮೋದಿಯವರು ಘೋಷಣೆ ಮಾಡಿದ್ದರು. ಆದರೆ ನಯಾ ಪೈಸೆಯೂ ಬರಲಿಲ್ಲ. ಜನರ ಖಾತೆಗಳಿಗೆ ತಲಾ 15 ಲಕ್ಷ ಹಾಕುವ ಬೊಗಳೆ ಮಾತು ಹುಸಿಯಾಯಿತು. ಇದರಿಂದ ಬಡಜನರಿಗೆ ನಿರಾಸೆಯೂ ಆಯಿತು.
2. ತಾವು ಅಧಿಕಾರಕ್ಕೆ ಬಂದನಂತರ ಪ್ರತಿ ವರ್ಷ 1 ಕೋಟಿ ಉದ್ಯೋಗ ಸೃಷ್ಟಿಸಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಬೂಸಿ ಬಿಟ್ಟರು. ಹೊಸ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು ಅವುಗಳನ್ನೆಲ್ಲ ಭರ್ತಿ ಮಾಡುವ ಮೂಲಕ ಲಕ್ಷಾಂತರ ವಿದ್ಯಾವಂತರಿಗೆ ಉದ್ಯೋಗ ಒದಗಿಸಬಹುದಾಗಿತ್ತು. ಭಾರತ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ. ಕೇಂದ್ರ ಸಚಿವಾಲಯದಲ್ಲೇ 60,235 ಹುದ್ದೆಗಳು ಖಾಲಿಯಿವೆ. ರೈಲ್ವೆ ಇಲಾಖೆಯಲ್ಲಿ 2.35 ಲಕ್ಷ ಹುದ್ದೆಗಳಿವೆ. ಸಶಸ್ತ್ರ ಪೊಲೀಸ್ ಪಡೆಯಲ್ಲಿ 65,709 ಹುದ್ದೆಗಳು ಖಾಲಿಯಿವೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಕೆಲಸವಂತೂ ಮಾಡುತ್ತಿಲ್ಲ. ಬದಲಿಗೆ ಶ್ರೀಮಂತ ಉದ್ದಿಮೆಪತಿಗಳ ಪರವಾಗಿ hiಡಿe ಚಿಟಿಜ ಜಿiಡಿe ನೀತಿಯನ್ನು ಜಾರಿಗೆ ತಂದು, ಕಾಯಂ ಉದ್ಯೋಗಗಳೇ ಇಲ್ಲದಂತೆ ಮಾಡಲು ಹೊರಟಿದ್ದಾರೆ.
3. 500 ಮತ್ತು 1000 ರೂಪಾಯಿ ನೋಟುಗಳನ್ನು ಅನಾಣ್ಯೀಕರಣ ಮಾಡಿದ ಮೋದಿಯವರು ಈ ಮೂಲಕ ಕಪ್ಪುಹಣವನ್ನು ನಿರ್ನಾಮ ಮಾಡುತ್ತೇವೆಂದು ಘೋಷಿಸಿದರು. ಆದರೆ ವಾಸ್ತವದಲ್ಲಿ ಏನಾಯಿತು? ತಮಗೆ ಬೇಕಾದ ಕಪ್ಪುಹಣದ ಕುಳಗಳು ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂಪಾಯಿಗಳ ಕಪ್ಪು ಹಣವನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಈ ನೋಟುಗಳ ಅಪಮೌಲ್ಯೀಕರಣದಿಂದ ತೊಂದರೆಗೆ ಒಳಗಾದವರು ಶ್ರೀಮಂತರಲ್ಲ, ಕಾಳಧನ ಇಟ್ಟುಕೊಂಡವರಲ್ಲ; ಜನಸಾಮಾನ್ಯರು, ಮಧ್ಯಮವರ್ಗದವರು ಮತ್ತು ಸಣ್ಣ ವ್ಯಾಪಾರಿಗಳು. ಈ ದಿಢೀರ್ ಹೊಡೆತದಿಂದಾಗಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡರು. ಕೈಲಿದ್ದ ನೋಟುಗಳಿಗೆ ಬೆಲೆಯಿಲ್ಲದೆ, ಹೊಸದಾಗಿ ಪ್ರಿಂಟಾದ 500 ಮತ್ತು 2000 ನೋಟುಗಳು ಕೈಗೆ ಸಿಗದೆ ಅನೇಕ ಸಣ್ಣಪುಟ್ಟ ವ್ಯಾಪಾರಿಗಳು ಬೀದಿ ಪಾಲಾದರು. ದಿನನಿತ್ಯ ಕೂಲಿ ಮಾಡಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದ ಕೂಲಿಕಾರ್ಮಿಕರಿಗೆ ಕೆಲಸ ಸಿಗದೆ ಕಂಗಾಲಾದರು. ಇಷ್ಟೆಲ್ಲಾ ಅನಾಹುತಗಳಾಗಿ ಕಪ್ಪು ಹಣ ವಾಪಸ್ ಬಂತೇ ಎಂದರೆ ಅದೂ ಇಲ್ಲ. ಎಷ್ಟು ನೋಟುಗಳು ಬ್ಯಾಂಕಿಗೆ ಜಮೆಯಾಗಿದೆಯೆಂಬ ಲೆಕ್ಕವನ್ನೇ ರಿಸರ್ವ್ ಬ್ಯಾಂಕ್ ಇನ್ನೂ ಕೊಟ್ಟಿಲ್ಲ.
4. ಬಿಜೆಪಿ ಪಕ್ಷ ಮತ್ತು ಅದಕ್ಕೆ ಸಂಬಂಧಿತ ಸಂಘಟನೆಗಳು ಸಂಸ್ಕøತಿ ರಕ್ಷಕರ ಹೆಸರಿನಲ್ಲಿ ಯುವಕ-ಯುವತಿಯರ ಮೇಲೆ ಹಲ್ಲೆ ಮಾಡುತ್ತಿರುವ ದಾರುಣ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಈ ಸಂಘಟನೆಗಳು ಸಕ್ರಿಯವಾಗಿರುವ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಜೊತೆ ಮಾತಾಡಲಿಕ್ಕೂ ಭಯ ಬೀಳಬೇಕಾದ ವಾತಾವರಣ ಸೃಷ್ಟಿಯಾಗಿದೆ.
5. ನಮ್ಮ ಬ್ಯಾಂಕುಗಳ ಲಕ್ಷಾಂತರ ಕೋಟಿ ಹಣವನ್ನು ತಮ್ಮ ನೆಚ್ಚಿನ ಉದ್ಯಮಿಗಳ ಒಡಲಿಗೆ ಹಾಕಿ, ಅವರು ಅಸಲು ಬಡ್ಡಿ ಯಾವುದೂ ಕಟ್ಟದೆ ನಮ್ಮ ಬ್ಯಾಂಕುಗಳಿಗೆ ಪಂಗನಾಮ ಹಾಕಿ ಓಡಿಹೋಗಿದ್ದಾರೆ. ವಿಜಯ ಮಲ್ಯ, ಲಲಿತ್ ಮೋದಿ, ನೀರವ್ ಮೋದಿ, ಮೆಹುಲ್ ಚೋಕ್ಸಿ, ಜತಿನ್ ಮೆಹ್ತಾ ಮುಂತಾದ ಖದೀಮರು ದೇಶ ಬಿಟ್ಟು ವಿದೇಶಕ್ಕೆ ಹಾರಿಹೋಗಲು ಅವಕಾಶ ಮಾಡಿಕೊಟ್ಟು ನಂತರ ನೋಟಿಸ್ ಕೊಡುವ, ಕೇಸು ಹಾಕುವ ನಾಟಕವಾಡುತ್ತಿರುವುದು ನಮ್ಮ ಕಣ್ಣೆದುರಿಗಿದೆ.
6. ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುತ್ತೇವೆಂದು ಉದ್ದುದ್ದ ಭಾಷಣ ಮಾಡಿ ಅಧಿಕಾರಕ್ಕೆ ಬಂದ ಈ ಪಕ್ಷದ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ವಿವಿಧ ರಾಜ್ಯಗಳಲ್ಲಿ ಹೆಣ್ಣುಮಕ್ಕಳ ಪಾಲಿಗೆ ಕಂಟಕಪ್ರಾಯರಾಗಿದ್ದಾರೆ. ಅತ್ಯಾಚಾರದ ಆರೋಪದಲ್ಲಿ, ಇತರೆ ಕ್ರಿಮಿನಲ್ ಕೇಸುಗಳಲ್ಲಿ ಜೈಲು ಸೇರಿದವರಲ್ಲಿ ಹೆಚ್ಚಿನವರು ಮೋದಿಯ ಪಕ್ಷದವರೇ.
ವಾಸ್ತವ ಸತ್ಯಗಳು ಹೀಗಿವೆ. ಮೋದಿಯವರು ತಮ್ಮ ಎಲೆಯಲ್ಲಿ ಕತ್ತೆ ಸತ್ತು ಬಿದ್ದಿರುವುದನ್ನು ಮರೆಮಾಚಿ, ಬೇರೆಯವರ ಎಲೆಯಲ್ಲಿ ನೊಣ ಸತ್ತು ಬಿದ್ದಿರುವುದನ್ನು ದೊಡ್ಡದು ಮಾಡಿ ಕೂಗು ಹಾಕುತ್ತಿದ್ದಾರೆ. ತಮ್ಮ ವಾಕ್ಚಾತುರ್ಯದಿಂದ ದೇಶವನ್ನು ಮರುಳು ಮಾಡಿಬಿಡಬಹುದು ಎಂದುಕೊಂಡಿದ್ದಾರೆ. ಇದನ್ನು ಹೊಸ ಮತದಾರರಾದ ಯುವಕ ಯುವತಿಯರು ಗಮನಿಸಬೇಕು. ಮೋದಿ ಮತ್ತು ಅಮಿತ್ ಶಾ ಅವರ ಪೊಳ್ಳು ಆರ್ಭಟಕ್ಕೆ ಸೊಪ್ಪು ಹಾಕಬೇಡಿ.
ಭಾರತ ದೇಶದಲ್ಲಿ ಸಾವಿರಾರು ವರ್ಷಗಳಿಂದ ಕ್ರಿಶ್ಚಿಯನ್ನರು, ಮುಸ್ಲಿಮರು, ಸಿಖ್ಖರು, ಪಾರ್ಸಿಗಳು ನೆಲೆಸಿದ್ದಾರೆ. ನಮ್ಮ ಈ ಎಲ್ಲ ಪೂರ್ವಿಕರು ದೇಶ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಆರೆಸ್ಸೆಸ್, ವಿಶ್ವಹಿಂದೂ ಪರಿಷತ್, ಭಜರಂಗದಳ ಮುಂತಾದ ಹಿಂದೂತ್ವ ಮತಾಂಧ ಸಂಸ್ಥೆಗಳು ಎಲ್ಲೆಡೆ ವಿಜೃಂಭಿಸುತ್ತಿದ್ದು, ತಮ್ಮ ಮತೀಯವಾದಿ agendaಗಳಿಗೆ ಪೂರಕವಾಗಿ ಸಂವಿಧಾನವನ್ನು ತಿದ್ದಬೇಕೆಂದು ಬೊಬ್ಬೆ ಎಬ್ಬಿಸಿದ್ದಾರೆ. ಇದೇನಾದರು ಕಾರ್ಯಗತವಾದರೆ, ಭಾರತದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವ ಯಾವುದೂ ಉಳಿಯುವ ಸಂಭವವಿಲ್ಲ. ಭಾರತ ದೇಶ ಆಫ್ಘಾನಿಸ್ತಾನದಂತೆ ಈ ಹಿಂದೂ ತಾಲಿಬಾನಿಗಳ ತಾಣವಾಗಲಿದೆ.
ನಿಮ್ಮಲ್ಲಿ ನನ್ನ ವಿನಂತಿ ಇಷ್ಟೆ. ಬಿಜೆಪಿಯ ನಿಜವಾದ hidden agendaವನ್ನು ಅಧ್ಯಯನ ಮಾಡಿ. ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನವನ್ನು ಭಾರತೀಯ ಜನತಾ ಪಕ್ಷದ ಹೆಸರಿನಲ್ಲಿ ಮೋದಿ ಧೂಳೀಪಟ ಮಾಡಲು ಬಿಡಬೇಡಿ. ಈ ಬಾರಿಯ ವಿಧಾನಸಭಾ ಚುನಾವಣೆ ಮೋದಿ ವರ್ಸಸ್ ಕರ್ನಾಟಕದ ಮಧ್ಯೆ ನಡೆಯುತ್ತಿದೆ. ನಿಮ್ಮ ಮತವನ್ನು ವಿವೇಕದಿಂದ ಚಲಾಯಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...