Homeಅಂಕಣಗಳುಯೆಮೆನ್ ಜಗತ್ತಿನ ಅತಿದೊಡ್ಡ ಮಾನವ ಬಿಕ್ಕಟ್ಟು

ಯೆಮೆನ್ ಜಗತ್ತಿನ ಅತಿದೊಡ್ಡ ಮಾನವ ಬಿಕ್ಕಟ್ಟು

- Advertisement -
- Advertisement -

ಹಳೆಯ ಕನ್ನಡ ಪೌರಾಣಿಕ ಸಿನಿಮಾಗಳಲ್ಲಿ ಕೇಡಿಗಳ ಪಾತ್ರ ಮಾಡಿದವರು ತಮ್ಮ ಶತ್ರುಗಳನ್ನು ಮತ್ತು ಎದುರಾಳಿಗಳನ್ನು ಆಕಾಶಕಾಯಗಳ ಮೂಲಕ ನಾಶ ಮಾಡುವುದನ್ನು ನೋಡುತ್ತಿದ್ದೆವು. 2017ರ ಮೇ ತಿಂಗಳಿನಲ್ಲಿ ಅಮೆರಿಕದ ಅಧ್ಯಕ್ಷ ಮತ್ತು ಥಿಯೇಟ್ರಿಕ್ಸ್‍ನ ದೊಡ್ಡ ಅಭಿಮಾನಿ ಡೊನಾಲ್ಡ್‍ಟ್ರಂಪ್ ಅವರು ಸೌದಿಯದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಹಾಗೂ ಈಜಿಪ್ಟಿನ ಅಧ್ಯಕ್ಷ ಅಬ್ದುಲ್ ಫತೇಹ್ ಅಲ್-ಸಿಸಿಯ ಆಕಾಶಕಾಯದ ಮೇಲೆ ಕೈ ಹಿಡಿದುಕೊಂಡು ರಿಯಾದ್‍ನ ಮಹತ್ವಾಕಾಂಕ್ಷೆಯ ತೀವ್ರವಾದಿ ಸಿದ್ಧಾಂತದ ವಿರುದ್ಧ ಹೋರಾಡುವ ಗ್ಲೋಬಲ್ ಸೆಂಟರ್ ಒಂದಕ್ಕೆ ಚಾಲನೆ ನೀಡಿದರು. ಅದು ದುಖಾಂತ್ಯ ಕಾಣದಿದ್ದರೆ ಬಹಳ ತಮಾಷೆಯಾಗಿರುತ್ತಿತ್ತು. ಅವರ ತಥಾಕಥಿತ ಭಯೋತ್ಪಾದನಾ ಮಧ್ಯಪ್ರವೇಶ ಎಂಬುದು ಇಂದು ಪ್ರಪಂಚದ ಇತಿಹಾಸದಲ್ಲೇ ಅತಿದೊಡ್ಡ ಮನುಷ್ಯ ನಿರ್ಮಿತ ಬಿಕ್ಕಟ್ಟನ್ನು ಸೃಷ್ಟಿಸಿದೆ. ಸೌದಿ ಅರೇಬಿಯಾದ ದಕ್ಷಿಣಕ್ಕಿರುವ ಯೆಮೆನ್ ಮಧ್ಯಪ್ರಾಚ್ಯದಲ್ಲೇ ಅತ್ಯಂತ ಬಡದೇಶ. 2015ರಲ್ಲಿ ಶುರುವಾದ ಈಗಿನ ಸಂಘರ್ಷಕ್ಕೆ ಮುನ್ನ ಅಲ್ಲಿನ ಜನಸಂಖ್ಯೆ 2.8 ಕೋಟಿಯಿತ್ತು. ಯೆಮೆನ್‍ನೊಂದಿಗೆ ಗಡಿ ಹಂಚಿಕೊಳ್ಳು ಸೌದಿ ಅರೇಬಿಯಾ ಮಧ್ಯಪ್ರಾಚ್ಯದ ಅತ್ಯಂತ ಶ್ರೀಮಂತ ದೇಶ. ಇಂದುಯೆಮೆನ್‍ನಲ್ಲಿರುವ ಬಿಕ್ಕಟ್ಟನ್ನು ಹೆಚ್ಚಿಸಿದ್ದು ಅಲ್ಲಿನ ವರ್ಷಾನುಗಟ್ಟಲೆಯ ನಿರುದ್ಯೋಗ, ಬಡತನ, ಬೆಲೆಯೇರಿಕೆ ಹಾಗೂ ಮುಸ್ಲಿಮರ ಭಿನ್ನ ಪಂಗಡಗಳ ನಡುವಿನ ತಾರತಮ್ಯಗಳು. ಶಿಯಾ ಹೌತಿಸ್ ಎಂದು ಕರೆಯಲಾಗುವ ಗುಂಪು ಚಾರಿತ್ರಿಕ ತಾರತಮ್ಯಕ್ಕೆ ಒಳಗಾಗಿದ್ದು ಸರ್ಕಾರದ ವಿರುದ್ಧ ಬಂಡಾಯ ಹೂಡಿದೆ. 2004ರಲ್ಲಿ ಈ ಪಂಗಡವು ತನ್ನ ನ್ಯಾಯಬದ್ಧಅಧಿಕಾರ ಹಂಚಿಕೆಗಾಗಿ ಸರಣಿ ಬಂಡಾಯಗಳನ್ನು ನಡೆಸಿತು. 2011ರಲ್ಲಿ ಅರಬ್‍ದಂಗೆಯ ತರುವಾಯ ಅಧ್ಯಕ್ಷ ಸಾಲೆಹ್ ಪದಚ್ಯುತನಾಗಿ 2012ರಲ್ಲಿ ಪ್ರಬಲ ಸೌದಿ ಅರೇಬಿಯಾ ಹಾಗೂ ಗಲ್ಫ್ ದೇಶಗಳ ಮೇಲ್ವಿಚಾರಣೆಯಲ್ಲಿ ಅಬ್ದ್-ರಬ್ಬು ಮನ್ಸೂರ್ ಹೌದಿ ನೇತೃತ್ವದ ಮಧ್ಯಂತರ ಸರ್ಕಾರ ರಚನೆಯಾಯಿತು. ಹೌತಿಸ್ ಬಣವು ಈ ಮಧ್ಯಂತರ ಸರ್ಕಾರವನ್ನು ನಿರಾಕರಿಸಿ ರಾಜಧಾನಿ ಸನಾ ನಗರಕ್ಕೆ ಮುತ್ತಿಗೆ ನಡೆಸಿ 2014ರ ಸೆಪ್ಟೆಂಬರ್‍ನಲ್ಲಿ ರಾಜಧಾನಿಯನ್ನು ವಶಕ್ಕೆ ಪಡೆದುಕೊಂಡಿತು. ಅಧ್ಯಕ್ಷ ಹೌದಿ ಸನಾದಿಂದ ಸುನ್ನಿಗಳ ಬಾಹುಳ್ಯದ ಅಡೆನ್ ನಗರಕ್ಕೆ ಪರಾರಿಯಾದರು. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗುತ್ತಿದ್ದಂತೆ ಅವರು ಯೆಮೆನ್‍ನಿಂದಲೇ ಓಡಿ ಹೋದರು. ಅಂದಿನಿಂದಲೂ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದೆ.
ಮೂರು ವರ್ಷಗಳ ಆಂತರಿಕ ಯುದ್ಧದ ನಂತರದಲ್ಲಿ ಯೆಮೆನ್ ಜನರು ದೊಡ್ಡ ಮಾನವ ಬಿಕ್ಕಟ್ಟನ್ನೆದುರಿಸುತ್ತಿದ್ದಾರೆ. ದೇಶದ 50 ಲಕ್ಷ ಮಕ್ಕಳು ಹಸಿವಿನ ದವಡೆಯಲ್ಲಿ ಸಿಲುಕಿದ್ದಾರೆ. ದೇಶದ ಪ್ರಮುಖ ಮೂಲಸೌಕರ್ಯ ವ್ಯವಸ್ಥೆ ಬಹುತೇಕ ನಾಶವಾಗಿದೆ. ದೇಶದ ಸಂಸ್ಕøತಿ ಪಾರಂಪರೆಯ ಗುರುತುಗಳೆಲ್ಲವೂ ಧ್ವಂಸಗೊಂಡಿವೆ. ಜಗತ್ತಿನ ಅತ್ಯಂತ ಹಳೆಯ ನಗರಗಳಲ್ಲಿ ಒಂದಾದ ಈಗಿನ ಯೆಮೆನ್ ರಾಜಧಾನಿ ಸನಾ ಮತ್ತು ಸದಾ ನಗರಗಳೂ ಇದರಲ್ಲಿ ಸೇರಿವೆ. ಯೆಮೆನ್‍ನ ನಾಗರಿಕ ಯುದ್ಧದ ಸೌದಿ ಮತ್ತು ಇರಾನ್‍ಗಳ ನಡುವಿನ ಬದಲಿ ಯುದ್ಧದಂತೆ (ಪ್ರಾಕ್ಸಿ ವಾರ್) ತೋರಿದರೂ ನಿಜವಾದ ಕಾರಣ ಬಹಳ ಸಂಕೀರ್ಣವಾಗಿದೆ. ಎರಡೂ ಕಡೆಯಿಂದ ಪರಸ್ಪರ ನಿಂದನೆಗಳು ನಡೆದು ಇಬ್ಬರೂ ಅಪರಾಧಿ ಸ್ಥಾನದಲ್ಲಿ ನಿಂತಿದ್ದರೂ ಈ ಯುದ್ಧಕ್ಕೆ ಯುಕೆ, ಅಮೆರಿಕ, ಫ್ರಾನ್ಸ್ ಮತ್ತು ಕೆನಡಾಗಳು ಒದಗಿಸಿರುವ ಶಸ್ತ್ರಾಸ್ತ್ರಗಳ ಪ್ರಮಾಣ ಬೆಚ್ಚಿ ಬೀಳಿಸುತ್ತದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ನಿರ್ಲಕ್ಷ್ಯಗೊಳಗಾಗಿ ಅತ್ಯಂತ ಬಾಧಿತವಾಗಿರುವ ಯೆಮೆನ್ ನಾಗರಿಕರು ಮಾಧ್ಯಮಗಳ ಮೂಲಕ ಜಗತ್ತಿನ ಗಮನ ಸೆಳೆಯಲು ಸಾಧ್ಯವಾಗಲಿಲ್ಲ.
ಹೌತಿ ಬಂಡುಕೋರರ ನೆಲೆಗಳ ಮೇಲೆ ಸೌದಿ ಬೆಂಬಲಿತ ಮೈತ್ರಿಕೂಟವು ವಾಯುದಾಳಿಗಳನ್ನು ನಡೆಸಿತು. ಲೆಕ್ಕವಿಲ್ಲದಷ್ಟು ಅಮಾಯಕ ಜನರು ಕೊಲ್ಲಲ್ಪಟ್ಟರೆ, ಅಪಾರ ಮಟ್ಟದ ಆಸ್ತಿಪಾಸ್ತಿ ನಾಶವಾಯಿತು. ಈ ಮೈತ್ರಿಕೂಟದಲ್ಲಿ ಮುಖ್ಯವಾಗಿ ಸೌದಿ ಅರೇಬಿಯಾ ಹಾಗೂ ಸಂಯುಕ್ತ ಅರಬ್ ಸಂಸ್ಥಾನಗಳು, ಅಮೆರಿಕ, ಬ್ರಿಟನ್, ಕೆನಡಾ ಮತ್ತು ಫ್ರಾನ್ಸ್‍ಗಳ ಸೈನಾ ತರಬೇತಿ, ಶಸ್ತ್ರಾಸ್ತ್ರ ಪೂರೈಕೆಗಳಿವೆ. ಮಕ್ಕಳ ಮೇಲೆ ನಡೆಯುತ್ತಿರುವ ಅಪರಾಧಗಳ ಹಿನ್ನೆಲೆಯಲ್ಲಿ ಕಳೆದ ವರ್ಷ ವಿಶ್ವಸಂಸ್ಥೆಯು ಇದನ್ನು ಕಪ್ಪುಪಟ್ಟಿಗೆ ಸೇರಿಸಿದ ತರುವಾಯ ಹಾಲೆಂಡ್ ಮತ್ತು ನಾರ್ವೆಗಳು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ನಿಲ್ಲಿಸಿದರೂ ಇತರ ದೇಶಗಳ ಮೇಲೆ ಸೌದಿ ಒತ್ತಡ ತಂದು ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿತು. ಕಪ್ಪುಪಟ್ಟಿಗೆ ಸೇರಿಸಿದ ವಿಶ್ವಸಂಸ್ಥೆಯ ವರದಿಯಲ್ಲಿ ಹೇಳುವ ಪ್ರಕಾರ, ಸೌದಿ ನೇತೃತ್ವದ ಮಿತ್ರಕೂಟವು 10 ಆಸ್ಪತ್ರೆಗಳು, ಮದುವೆ ಸಮಾರಂಭಗಳು, ಶವಸಂಸ್ಕಾರಗಳು, ನಿರಾಶ್ರಿತರ ಶಿಬಿರಗಳು, ಆಹಾರ ಸರಬರಾಜು ಟ್ರಕ್‍ಗಳು, ಕಾರ್ಖಾನೆಗಳು, ಸಾರಿಗೆ ಮಾರ್ಗಗಳು, ಕೃಷಿ ಭೂಮಿಗಳು, ವಸತಿ ಪ್ರದೇಶಗಳು ಮತ್ತು ಶಾಲೆಗಳನ್ನು ಗುರಿಪಡಿಸಿ ದಾಳಿ ನಡೆಸಿದೆ. ಇವ್ಯಾವೂ ಭಯೋತ್ಪಾದಕರ ತಾಣಗಳಲ್ಲ. ಮಕ್ಕಳು, ಸಾಮಾನ್ಯಜನರು ಹೋಗುವ ಸ್ಥಳಗಳು. ತಮ್ಮನ್ನು ವಿಶ್ವಸಂಸ್ಥೆ ಕಪ್ಪುಪಟ್ಟಿಗೆ ಸೇರಿಸದ ಮೇಲೆ ಸೌದಿಯ ರಾಜಕುಮಾರ ಮಹಮದ್ ಬಿನ್ ಸಲ್ಮಾನ್ ತನ್ನ ಸೇನಾ ಪಡೆಗಳಿಗೆ `ಅಂತರರಾಷ್ಟ್ರೀಯ ಟೀಕೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ. ಯೆಮೆನ್‍ನ ಮುಂದಿನ ಪೀಳಿಗೆಗಳ ಪ್ರಜ್ಞೆಯ ಮೇಲೆ ದೊಡ್ಡ ಪರಿಣಾಮವನ್ನು ನಾವು ಉಂಟು ಮಾಡಬೇಕಿದೆ. ಸೌದಿ ಅರೇಬಿಯಾ ಹೆಸರು ಕೇಳಿದರೇ ಅವರ ಹೆಂಗಸರು, ಮಕ್ಕಳು ಮತ್ತು ಗಂಡಸರೂ ಗಡಗಡ ನಡುಗುವಂತೆ ಮಾಡಬೇಕು’’ ಎಂದು ಹೇಳಿದ್ದಾನೆ. ಮಿತ್ರಕೂಟದ ವಾಯುಸೇನಾ ದಾಳಿಯು 1000ಕ್ಕಿಂತ ಹೆಚ್ಚು ಮಕ್ಕಳೂ ಸೇರಿದಂತೆ ಸುಮಾರು 10,000 ಜನರ ಕಗ್ಗೊಲೆಗೈದಿದೆ. 30 ಲಕ್ಷ ಯೆಮೆನ್ ನಾಗರಿಕರು ತಮ್ಮ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆಕ್ಸ್‍ಫಾಮ್ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ ಈ ಯುದ್ಧವು ಯೆಮೆನ್‍ನನ್ನು ಸಂಪೂರ್ಣಕ್ಷಾಮದ ಸ್ಥಿತಿಗೆ ತಳ್ಳಿದೆ. ಇಲ್ಲಿನ ಜನರ ಪರಿಸ್ಥಿತಿ ಇಡೀ ಭೂ ಗ್ರಹದಲ್ಲಿಯೇ ಅತ್ಯಂತ ಹೀನ ಸ್ಥಿತಿಗೆ ಮುಟ್ಟಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ, ಸುಮಾರು 1.7ಕೋಟಿ ಜನರಿಗೆ ಸರಿಯಾದ ಗಂಜಿ ನೀರಿಗೂ ತತ್ವಾರವಾಗಿದೆ. ಸು.70 ಲಕ್ಷಜನರು ಕ್ಷಾಮ ಸ್ಥಿತಿಗೆ ಒಂದು ಹೆಜ್ಜೆ ಹಿಂದಿದ್ದಾರಷ್ಟೆ. ಮನುಷ್ಯರು ಎಲೆಗಳನ್ನು ಮತ್ತು ಹುಲ್ಲನ್ನು ತಿನ್ನುವ ದಾರುಣ ಸ್ಥಿತಿ ಏರ್ಪಟ್ಟಿದೆ. ಮಿತ್ರಕೂಟವು ಯೆಮೆನ್‍ಗೆ ಆಹಾರ, ಔಷದಿ ಸಹಾಯದ 80% ಬರುತ್ತಿದ್ದ ಹೊಡೆದಾಹ್ ಬಂದರನ್ನು ಬಂದ್ ಮಾಡಿ ಯೆಮೆನ್‍ಗೆ ಯಾವುದೇ ಮಾನವಿಕ ನೆರವು ಸಿಗದಂತೆ ಮಾಡಿದೆ.
ಇಂಡಿಯಾದ ಮಾಧ್ಯಮಗಳಿಗೆ ಐಸಿಸ್ ಮತ್ತು ಕಿಮ್‍ಜಾಂಗ್ ವಿಷಯಗಳನ್ನು ಬಿಟ್ಟರೆ ಯೆಮೆನ್‍ನ ಬಿಕ್ಕಟ್ಟು ಕಾಣುತ್ತಿಲ್ಲ. ನಿರಾಶ್ರಿತರ ಸುದ್ದಿ ಎಂದಾಗ ಪ್ಯಾಲೆಸ್ತೀನ್ ಮತ್ತು ಸಿರಿಯಾಗಳ ಬಗ್ಗೆ ತಲೆಬರಹಗಳು ಕಾಣುತ್ತವೆಯೇ ಹೊರತು ಯೆಮೆನ್ ಕಾಣಿಸುವುದಿಲ್ಲ. ಯೆಮೆನ್‍ಗಾಗಿ ಯಾರೂ ಕಾಳಜಿ ವಹಿಸುತ್ತಿಲ್ಲ. ವಿಕಟ ವಿಪರ್ಯಾಸವೆಂದರೆ ಅನೇಕ ಅಂತರರಾಷ್ಟ್ರೀಯ ಸಂಸ್ಥೆಗಳು ಇಲ್ಲಿನ ಸ್ಥಿತಿಯ ಕುರಿತು ವರದಿ ನೀಡಿದ ಮೇಲೂ, ವಿಶ್ವಸಂಸ್ಥೆಯು ಕಪ್ಪುಪಟ್ಟಿಗೆ ಸೇರಿಸಿದ ಮೇಲೆಯೂ ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಮುಖ್ಯಸ್ಥನಾಗಿ ಮುಂದುವರೆದಿರುವುದು ಸೌದಿ ಆರೇಬಿಯಾ!!

– ಭರತ್ ಹೆಬ್ಬಾಳ್
ಕನ್ನಡಕ್ಕೆ:
ಹರ್ಷಕುಮಾರ್ ಕುಗ್ವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...