Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...