Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...