Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...