Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...