Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...