Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....