Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...