Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...